Latest

ಧರ್ಮಸ್ಥಳ ದೇಗುಲವೇ ಉಗ್ರರ ನಿಜವಾದ ಗುರಿ? ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿದ ನೂತನ ಬಹಿರಂಗ!

ಬೆಂಗಳೂರು, ಆಗಸ್ಟ್ 7: 2022ರ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಂದು ಸಂಚಲನಕಾರಿ ಮಾಹಿತಿ ಹೊರಬಿದ್ದಿದೆ. ಈ ಸ್ಫೋಟದ ಮೂಲ ಉದ್ದೇಶ ಮಂಗಳೂರು ಅಲ್ಲ, ಧರ್ಮಸ್ಥಳದ ಪ್ರಸಿದ್ಧ ಮಂಜುನಾಥಸ್ವಾಮಿ ದೇವಾಲಯವಾಗಿತ್ತೆಂಬ ಸ್ಫೋಟಕ ಮಾಹಿತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ.) ತನಿಖೆ ವೇಳೆ ಬಹಿರಂಗಪಡಿಸಿದೆ.

ಇ.ಡಿ. ವರದಿ ಪ್ರಕಾರ, ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಈ ಸ್ಫೋಟಕ ಸಾಧನವನ್ನು ಧರ್ಮಸ್ಥಳದ ದೇಗುಲದಲ್ಲಿ ಇಟ್ಟು ಬಾಂಬ್ ಸ್ಫೋಟ ನಡೆಸುವ ಪ್ಲಾನ್ ರೂಪಿಸಿಕೊಂಡಿದ್ದ. ಆದರೆ, ಬಾಂಬ್‌ಗೆ ಬಳಸಲಾಗಿದ್ದ ಟೈಮರ್ ಅನ್ನು ತಪ್ಪಾಗಿ ಹೊಂದಿಸಿದ್ದ ಕಾರಣ, ಸಂಚು ವಿಫಲವಾಯಿತು. ಮೂಲತಃ 90 ನಿಮಿಷಗಳ ನಂತರ ಸ್ಫೋಟವಾಗಬೇಕಾಗಿದ್ದ ಬಾಂಬ್, ಕೇವಲ 9 ಸೆಕೆಂಡುಗಳಲ್ಲಿ ಸ್ಫೋಟಗೊಂಡು ಆಟೋ ರಿಕ್ಷಾದೊಳಗೆ ಭಯಾನಕ ದುರಂತ ಸೃಷ್ಟಿಸಿತ್ತು.

ಈ ಘಟನೆಯ ನಂತರ ಶಾರಿಕ್‌ನ್ನು ಗಂಭೀರ ಗಾಯದ ಸ್ಥಿತಿಯಲ್ಲಿ ಬಂಧಿಸಲಾಗಿತ್ತು ಮತ್ತು ತನಿಖೆ ಮುಂದುವರೆದಿತ್ತು. ಇದೀಗ ಇ.ಡಿ. ನಡೆಸಿದ ವಿಚಾರಣೆಯು ಶಾರಿಕ್ ಮತ್ತು ಇತರ ಶಂಕಿತರು ಹಿಂದಿನಿಂದಲೂ ಧರ್ಮಸ್ಥಳದ ದೇವಾಲಯವನ್ನು ಉಗ್ರ ಕ್ರಮಗಳ ಲಕ್ಸ್ಯವನ್ನಾಗಿ ಮಾಡಿಕೊಂಡಿದ್ದನ್ನು ದೃಢಪಡಿಸಿದೆ.

ಪ್ರಸಿದ್ಧ ಧಾರ್ಮಿಕ ತಾಣವನ್ನೇ ನಾಶಮಾಡಲು ಸಂಚು ರೂಪಿಸಲಾಗಿದ್ದ ಈ ಬೆಳವಣಿಗೆ ಧರ್ಮಸ್ಥಳದ ಭದ್ರತೆ ಕುರಿತಾಗಿ ಗಂಭೀರ ಚರ್ಚೆಗೆ ಕಾರಣವಾಗಿದ್ದು, ತನಿಖಾ ಸಂಸ್ಥೆಗಳು ಮತ್ತಷ್ಟು ಎಚ್ಚರದಿಂದ ಕಾರ್ಯನಿರ್ವಹಿಸುತ್ತಿವೆ.

ಇದೀಗ ಈ ಹೊಸ ಮಾಹಿತಿ ಹೊರಬಿದ್ದ ಹಿನ್ನೆಲೆಯಲ್ಲಿ ಪ್ರಕರಣ ಮತ್ತಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಹಿಂದಿನ ಸ್ಫೋಟದ ಹಿಂದೆ ಉಳ್ಳ ನಿಖರ ಉದ್ದೇಶ ಮತ್ತು ಶಾರಿಕ್‌ನ ಸಂಪರ್ಕಗಳು ಮತ್ತಷ್ಟು ತೆರೆದ ಮೇಲೆ ಬರಲಿವೆ ಎಂದು ನಿರೀಕ್ಷಿಸಲಾಗಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

16 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

16 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

16 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

16 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago