ಬೆಂಗಳೂರು, ಆಗಸ್ಟ್ 6 – ಸೌಜನ್ಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳದಲ್ಲಿ ಮತ್ತೆ ಗದ್ದಲ ಮೆರೆಯುತ್ತಿದೆ. ಸೌಜನ್ಯ ಪರ ಹೋರಾಟಗಾರರು ಹಾಗೂ ಸ್ಥಳೀಯ ಗ್ರಾಮಸ್ಥರ ನಡುವೆ ಉಗ್ರ ವಾಗ್ವಾದದಿಂದ ಹೊಡೆದಾಟಕ್ಕೂ ಕಾರಣವಾಯಿತು. ಇತ್ತೀಚೆಗೆ ಧರ್ಮಸ್ಥಳ ಕ್ಷೇತ್ರ ಹಾಗೂ ಧರ್ಮಾಧಿಕಾರಿಗಳಿಗೆ ಅವಮಾನವಾಗುವ ರೀತಿಯಲ್ಲಿ ಯೂಟ್ಯೂಬ್ ಚಾನಲ್ಗಳಲ್ಲಿ ವೀಕ್ಷಣೆಗಾಗಿ ಸುದ್ದಿ ಪ್ರಸಾರ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕೆಲ ಯೂಟ್ಯೂಬರ್ಗಳನ್ನು ಸ್ಥಳೀಯರು ತೀವ್ರವಾಗಿ ವಿರೋಧಿಸಿ ಕ್ಷೇತ್ರದಿಂದ ಹೊರಹಾಕಿದ ಘಟನೆ ನಡೆದಿದೆ.
ಘಟನೆಯ ವೇಳೆ ಸ್ಥಳೀಯ ಯೂಟ್ಯೂಬರ್ಸ್ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್, ಹರೀಶ್ ಹಾಗೂ ಕ್ಯಾಮೆರಾಮನ್ ನವೀನ್ ಮೇಲೆ ಹಲ್ಲೆ ನಡೆದಿದೆ. ಘಟನೆಯಿಂದ ಆಕ್ರೋಶಗೊಂಡ ಜನರು ಸ್ಥಳೀಯ ಧರ್ಮಸ್ಥಳ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ. ‘ಸುಳ್ಳು ಸುದ್ದಿಗಳಿಂದ ಕ್ಷೇತ್ರದ ಗೌರವ ಹಾನಿಗೊಳಗಾಗುತ್ತಿದೆ, ಎಸ್ಐಟಿ ತನಿಖೆ ಇಡೀ ಮುಕ್ತಾಯವಾಗಿಲ್ಲ, ಆದರೆ ಯೂಟ್ಯೂಬರ್ಗಳು ನೂರಾರು ಅಸ್ಥಿಪಂಜರ ಸಿಕ್ಕಿವೆ ಎನ್ನುವದಾಗಿಯೇ ಜನತೆಯಲ್ಲಿ ಭಯ ಹುಟ್ಟಿಸುತ್ತಿದ್ದಾರೆ’ ಎಂಬ ಅಭಿಪ್ರಾಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.
ಈ ಮಧ್ಯೆ ಈ ವಿವಾದದ ಕುರಿತು ನಟ ಪ್ರಕಾಶ್ ರಾಜ್ ಟ್ವೀಟ್ ಮತ್ತು ವಿಡಿಯೋ ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದು, ಸೌಜನ್ಯ ಪರವಾಗಿ ನ್ಯಾಯಕ್ಕಾಗಿ ಕೆಲಸ ಮಾಡುತ್ತಿರುವ ಪತ್ರಕರ್ತರ ಮೇಲೆ ನಡೆದ ಹಲ್ಲೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. “ಸತ್ಯ ಕೇಳುವುದು ತಪ್ಪಾ? ಗೂಂಡಾಗಳಿಂದಲೇ ಧರ್ಮಸ್ಥಳದ ಗೌರವಕ್ಕೆ ಕಳಂಕ ಬರುವ ಸ್ಥಿತಿ ನಿರ್ಮಾಣವಾಗುತ್ತಿದೆ. ಇಂಥವರನ್ನು ತಕ್ಷಣ ಬಂಧಿಸಿ, ಹಿಂದೆ ನಿಂತಿರುವವರ ಬಗ್ಗೆ ತನಿಖೆ ನಡೆಯಬೇಕು. ನ್ಯಾಯ ಕೇಳುವುದು ಪ್ರಜೆಗಳ ಹಕ್ಕು” ಎಂದು ಅವರು ಹೇಳಿದ್ದಾರೆ.
ಈ ಗೊಂದಲಕ್ಕೆ ಮತ್ತೊಂದು ಕಾರಣ ರಜತ್ ಅವರ ಭೇಟಿಯಾಗಿದೆ. ಬಿಗ್ಬಾಸ್ ಸ್ಪರ್ಧಿಯಾಗಿದ್ದ ರಜತ್ ಇಂದು ಧರ್ಮಸ್ಥಳಕ್ಕೆ ಬೇಟಿ ನೀಡಿದ್ದು, ಸೌಜನ್ಯ ಮನೆಗೆ ಭೇಟಿ ನೀಡಲು ಯತ್ನಿಸಿದ್ದರು. ಈ ವೇಳೆ ಕೆಲ ಯೂಟ್ಯೂಬರ್ಗಳು ಸೌಜನ್ಯ ಸಂಬಂಧಿತ ಪ್ರಶ್ನೆಗಳನ್ನು ಕೇಳಿ ಅವರ ಭೇಟಿಗೆ ಆಕ್ಷೇಪ ವ್ಯಕ್ತಪಡಿಸಿದರು. ಮಾತು ಮುಚಳಿಕೆಗೆ ತಿರುಗಿ ಸ್ಥಳೀಯ ಭಕ್ತರು ಯೂಟ್ಯೂಬರ್ಗಳ ಮೇಲೆ ದೌರ್ಜನ್ಯ ನಡೆಸಿದರು ಎಂದು ವರದಿಯಾಗಿದೆ.
ಇದೀಗ ಈ ವಿಷಯ ರಾಜ್ಯ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಧರ್ಮಸ್ಥಳದಲ್ಲಿ ನಡೆಯುತ್ತಿರುವ ಹಕ್ಕುಪಾಲು ವಿಚಾರ, ಮಾಧ್ಯಮಗಳ ನೈತಿಕತೆ ಮತ್ತು ಸ್ಥಳೀಯರ ಭಾವನೆಗಳ ನಡುವೆ ಕಠಿಣ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…