Corruption

ಅಬಕಾರಿ ಅಧಿಕಾರಿಗಳ ಪದೋನ್ನತಿಯಲ್ಲಿ ಮಂತ್ರಿ ತಿಮ್ಮಾಪುರ ರವರಿಗೆ ಹಣ ದೋಚುವ ದುರಾಸೆಯೇ?

ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿಚಾರಗಳು ಇತ್ತೀಚಿಗೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿವೆ.

ಮತ್ತೊಂದು ಭ್ರಷ್ಟಾಚಾರ: ಜನವರಿ-01-2025 ರಂದು ಅಬಕಾರಿ ಆಯುಕ್ತರು, 35 ಅಧಿಕಾರಿಗಳನ್ನು ಅಬಕಾರಿ ನಿರೀಕ್ಷಕರ ವೃಂದಕ್ಕೆ ಸ್ಥಾನಪನ್ನ ಪದೋನ್ನತಿ ನೀಡಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿರುತ್ತಾರೆ. ಈ ಆದೇಶ ಹೊರಡಿಸಿದ ಮರುದಿನವೇ ಅಬಕಾರಿ ಆಯುಕ್ತರಾದ ರವಿಶಂಕರ್ ರವರ ವರ್ಗಾವಣೆಯಾಗಿದೆ. ದಿಡೀರನೆ ಈ ರೀತಿ ನಡೆದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಇದಕ್ಕೆಲ್ಲಾ ಕಾರಣ ಅಬಕಾರಿ ಮಂತ್ರಿಗಳಾದ ಬಿ.ಆರ್ ತಿಮ್ಮಾಪುರ ರವರು ಎಂಬ ಮಾತು ಇಲಾಖೆಯಲ್ಲೆಲ್ಲಾ ಓಡಾಡುತ್ತಿದೆ.
ಈ ಮಾತಿಗೆ ಪುಷ್ಟಿ ಕೊಡುವಂತೆ ಅಬಕಾರಿ ಅಧಿಕಾರಿಗಳಿಗೆ ಪದೋನ್ನತಿ ನೀಡಿ ಆದೇಶ ಹೊರಡಿಸಿದ ದಿನವೇ ಅದನ್ನು ತಡೆ ಹಿಡಿಯುವಂತೆ ಮಂತ್ರಿಗಳು ಹೇಳಿರುವ ಮಾಹಿತಿ ಲಭ್ಯವಾಗಿದ್ದು ಇದು ಯಾವ ಉದ್ದೇಶಕ್ಕೆ ಎಂಬುದರ ಸ್ಪಷ್ಟ ಮಾಹಿತಿಯನ್ನು ಹೊರಹಾಕಿರುವುದಿಲ್ಲ. ಮೂಲಗಳ ಪ್ರಕಾರ ಪದೋನ್ನತಿ ನೀಡುವ ವಿಚಾರದಲ್ಲಿ ಹಣ ಪಡೆದು ಬಡ್ತಿ ನೀಡಬೇಕೆಂಬ ಉದ್ದೇಶದಲ್ಲಿ ಮಂತ್ರಿಗಳಿದ್ದು, ಅದೇ ಉದ್ದೇಶದಿಂದ ಅಬಕಾರಿ ಆಯುಕ್ತ ರವಿಶಂಕರ್ ರವರು ನೀಡಿರುವ ಆದೇಶವನ್ನು ತಡೆಹಿಡಿದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪದೋನ್ನತಿ ಪಡೆದಿರುವ ಅಧಿಕಾರಿಗಳು ಮತ್ತು ಮಂತ್ರಿಗಳ ಮಧ್ಯೆ ಶೆಟ್ಟಿ ಎಂಬಾತ ಮಧ್ಯಸ್ಥಿಕೆ ವಹಿಸಿದ್ದು ಹಣದ ವಿಚಾರದಲ್ಲಿ ಹಲವು ಅಧಿಕಾರಿಗಳ ಮಧ್ಯೆ ಮಾತುಕತೆ ನಡೆಯುತ್ತಿದೆ ಎಂಬ ಮಾಹಿತಿಯು ಸಹ ಲಭ್ಯವಾಗಿದೆ.
ಪದೋನ್ನತಿ ಪಡೆದಿರುವ ಅಧಿಕಾರಿಗಳ ಪಟ್ಟಿಯಲ್ಲಿರುವ ಕೆಲವರು ಅಬಕಾರಿ ಆಯುಕ್ತರು ತುಂಬಾ ಒಳ್ಳೆಯವರು ಅವರು ಒಳ್ಳೆಯ ಕೆಲಸವನ್ನು ಮಾಡಿದ್ದಾರೆ ಎಂದು ಹೇಳಿದರೆ! ಇನ್ನೂ ಕೆಲವರು ಅವರು ಮಾಡಿರುವ ಕೆಲಸದಲ್ಲಿ ಹಣ ಮಾಡುವ ನಿಟ್ಟಿನಲ್ಲಿ ಮಂತ್ರಿಗಳು ಈಗ ಮಧ್ಯದಲ್ಲಿ ಬಂದಿದ್ದಾರೆ ಎಂಬ ಮಾತುಗಳನ್ನು ಸಹ ಆಡುತ್ತಿದ್ದಾರೆ.
ಇಲಾಖೆಯಲ್ಲಿ ಕೇಳಿಬರುತ್ತಿರುವ ಮಾತುಗಳಂತೆ ಅಬಕಾರಿ ಮಂತ್ರಿಗಳಾದ ತಿಮ್ಮಾಪುರ ರವರು ಪದೋನ್ನತಿ ವಿಚಾರದಲ್ಲಿ ಹಣ ಮಾಡಲು ಮುಂದಾಗಿದ್ದಾರಾ? ಇತ್ತೀಚಿಗೆ ವರ್ಗಾವಣೆಯ ವಿಚಾರಗಳಲ್ಲಿ ಲಕ್ಷಾಂತರ ರೂ ಹಣ ಪಡೆಯುತ್ತಿರುವ ಮಾಹಿತಿಗಳು ಹೊರಬಿದ್ದಿದ್ದು ಈಗ ಅಧಿಕಾರಿಗಳ ಪದೋನ್ನತಿ ವಿಚಾರದಲ್ಲೂ ಲಕ್ಷಾಂತರ ರೂ ಭ್ರಷ್ಟಾಚಾರ ನಡೆಯುತ್ತಿರುವ ಮಾಹಿತಿಗಳು ಲಭ್ಯವಾಗುತ್ತಿವೆ. ನಿಜಕ್ಕೂ ಇದು ಕಾಂಗ್ರೆಸ್ ಸರ್ಕಾರದ ಹಗಲು ದರೋಡೆಯೇ? ಪದೋನ್ನತಿ ಪಡೆದಿರುವ ಪಟ್ಟಿಯಲ್ಲಿರುವ ಬಹುತೇಕ ಅಧಿಕಾರಿಗಳು ಅಲ್ಪಸಂಖ್ಯಾತರು, ಎಸ್.ಸಿ/ಎಸ್.ಟಿ ಹಾಗೂ ಹಿಂದುಳಿದ ವರ್ಗದವರಾಗಿರುತ್ತಾರೆ. ಅಹಿಂದ ನಾಯಕರಾದ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಹಿಂದ ದವರಿಂದಲೇ ಲೂಟಿ ಹೊಡೆಯುತ್ತಿರುವುದು ನೈತಿಕ ಅಧಃಪತನಕ್ಕಿಳಿದಿರುವುದಕ್ಕೆ ಸಾಕ್ಷಿಯಾಗಿದೆ. ಮಾನ್ಯ ಮುಖ್ಯಮಂತ್ರಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಪದೋನ್ನತಿ, ವರ್ಗಾವಣೆ ವಿಚಾರಗಳಲ್ಲಿ ಅಧಿಕಾರಿಗಳ ಬಳಿ ಹಣ ಪಡೆದರೆ ಅಧಿಕಾರಿಗಳು ಪುನಃ ಆ ಹಣವನ್ನು ಎಲ್ಲಿಂದ ಪಡೆಯುತ್ತಾರೇ? ಅಧಿಕಾರಿಗಳ ಬಳಿ ಹಣ ಪಡೆದು ಮಂತ್ರಿಗಳು ಭ್ರಷ್ಟಾಚಾರ ನಡೆಸಿದರೆ ಕೊಟ್ಟಿರುವ ಹಣವನ್ನು ಹಿಂಪಡೆಯಲು ಅಧಿಕಾರಿಗಳು ಮತ್ತೆ ಭ್ರಷ್ಟಾಚಾರ ಮಾಡಲು ಮುಂದಾಗುತ್ತಾರೆ. ಭ್ರಷ್ಟಾಚಾರ ತಡೆಯಬೇಕಾದ ಜಾಗದಲ್ಲಿ ಸರ್ಕಾರವೇ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ಕೊಟ್ಟಂತಾಗಿದೆ. ಆದ್ದರಿಂದ ಭ್ರಷ್ಟ ಮಂತ್ರಿಯಾದ ಬಿ ಆರ್ ತಿಮ್ಮಾಪುರ ರವರನ್ನು ಈ ಕೂಡಲೇ ಸಚಿವ ಸಂಪುಟದಿಂದ ವಜಾ ಮಾಡಿ, ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ಸಮಗ್ರ ತನಿಖೆ ನಡೆಸಿ, ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸರ್ಕಾರದ ಘನತೆಯನ್ನು ಎತ್ತಿ ಹಿಡಿಯಬೇಕೆಂದು ಭ್ರಷ್ಟರ ಬೇಟೆ ಪತ್ರಿಕೆ ಆಗ್ರಹಿಸುತ್ತದೆ.

ಭ್ರಷ್ಟರ ಬೇಟೆ

Recent Posts

ನೈಸ್ ಯೋಜನೆ ಮತ್ತೆ ಕಾವೇರಿದ ವಿವಾದ: ಸರ್ಕಾರದ ವಶಕ್ಕೆ ಪಡೆಯಲು ಜೆಡಿಎಸ್ ಒತ್ತಾಯ

ಬೆಂಗಳೂರು–ಮೈಸೂರು ಸಂಪರ್ಕವನ್ನು ಸುಧಾರಿಸುವುದು ಹಾಗೂ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರೂಪುಗೊಂಡಿದ್ದ ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMICP)…

5 minutes ago

ಲೀಲಾ ದೂರವಾದ ಕೋಪ: ಮನೆಗೆ ನುಗ್ಗಿ ತಾಯಿಯ ಮೇಲೆ ಸೈಕಲ್ ಎತ್ತಿ ಹಾಕಿದ ಮಂಜ!

ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…

1 day ago

ಮದುವೆಯ ಆಸೆ ತೋರಿಸಿ ಯುವತಿಯೊಂದಿಗೆ ದೈಹಿಕ ಸಂಪರ್ಕ, ₹10 ಸಾವಿರ ಕಳುಹಿಸಿ ಕೈ ತೊಳೆದುಕೊಳ್ಳಲು ಮುಂದಾದ SI ವಿರುದ್ಧ ಕೇಸ್!

ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್‌ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…

1 day ago

ಪ್ರೀತಿಯ ಹೆಸರಲ್ಲಿ ಕಿರುಕುಳ, ಬ್ಲ್ಯಾಕ್‌ಮೇಲ್ ಆರೋಪ: ಯುವತಿ ಆತ್ಮಹತ್ಯೆ; ಪ್ರಿಯಕರನ ವಿರುದ್ಧ ಕೇಸ್

ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…

1 day ago

ಪತಿ-ಪ್ರೇಮಿ ಇಬ್ಬರ ಜತೆಗೂ ಸಂಸಾರಕ್ಕೆ ಅನುಮತಿ ಕೊಡಿ! ಪೊಲೀಸರ ಮುಂದೆ ಮಹಿಳೆಯ ವಿಚಿತ್ರ ಬೇಡಿಕೆ

ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…

1 day ago

ರೈಲಿನ ಸೂಟ್‌ಕೇಸ್‌ನಲ್ಲಿ ಮಾನವ ದೇಹದ ತುಂಡುಗಳು; ತನಿಖೆ ವೇಳೆ ಬಯಲಾಯ್ತು ಬೆಚ್ಚಿಬೀಳಿಸುವ ರಹಸ್ಯ!

ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…

1 day ago