Categories: CinemaLatestNational

‘ಧುರಂಧರ್’ ಸಿನಿಮಾ ಪ್ರಭಾವವೇ? ಪಾಕಿಸ್ತಾನದಲ್ಲಿ ಗುಪ್ತಚರ ಶೋಧದ ವಿಡಿಯೋ ವೈರಲ್

ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರದ ಸದ್ದು ಭಾರತದ ಬಾಕ್ಸ್ ಆಫೀಸ್‌ನಲ್ಲಿ ಕೇಳಿಬರುತ್ತಿರುವಂತೆಯೇ, ಅದರ ಪ್ರಭಾವ ನೆರೆ ರಾಷ್ಟ್ರ ಪಾಕಿಸ್ತಾನದಲ್ಲೂ ಚರ್ಚೆಗೆ ಕಾರಣವಾಗಿದೆ. ವಿಶೇಷವಾಗಿ ಲಿಯಾರಿ ಪ್ರದೇಶದಲ್ಲಿ ನಡೆದಿದೆಯೆಂದು ಹೇಳಲಾಗುತ್ತಿರುವ ಒಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿತ್ರದಲ್ಲಿ ರಣವೀರ್ ಸಿಂಗ್ ಅವರು ಭಾರತೀಯ ಗುಪ್ತಚರನಾಗಿ ಪಾಕಿಸ್ತಾನದ ಲಿಯಾರಿಗೆ ನುಗ್ಗಿ ಕಾರ್ಯಾಚರಣೆ ನಡೆಸುವ ಕಥಾಹಂದರ ಹೊಂದಿದೆ. ಈ ಹಿನ್ನೆಲೆ, ಪಾಕಿಸ್ತಾನದಲ್ಲಿ ಕೆಲವರು ಸಿನಿಮಾವನ್ನು ನಿಜವೆಂದು ಭಾವಿಸಿ ಅನುಮಾನಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿರುವ ದೃಶ್ಯಗಳು ವೈರಲ್ ಆಗುತ್ತಿರುವುದು ಗಮನಸೆಳೆಯುತ್ತಿದೆ.

ಸಿನಿಮಾ ಅಧಿಕೃತವಾಗಿ ಪಾಕಿಸ್ತಾನದಲ್ಲಿ ನಿಷೇಧಗೊಂಡಿದ್ದರೂ, ಕೆಲವರು ಅದನ್ನು ನೋಡಿರುವ ಹಿನ್ನೆಲೆಯಲ್ಲಿ ಲಿಯಾರಿಯಲ್ಲಿ ಪೊಲೀಸರು ಎಚ್ಚರಿಕೆ ಕ್ರಮವಾಗಿ ಗಸ್ತು ಹೆಚ್ಚಿಸಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ. ಆದರೆ ಇದುವರೆಗೆ ಯಾವುದೇ ಭಾರತೀಯ ಗುಪ್ತಚರರ ಪತ್ತೆಯಾದ ಮಾಹಿತಿ ಇಲ್ಲ.

ಇದಕ್ಕೆ ಪ್ರತಿಕ್ರಿಯಿಸಿದ ಪಾಕಿಸ್ತಾನ ಪೊಲೀಸ್ ಅಧಿಕಾರಿಗಳು, ವೈರಲ್ ವಿಡಿಯೋದಲ್ಲಿ ಕಾಣಿಸುತ್ತಿರುವವರು ನಿಜವಾದ ಪೊಲೀಸರು ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಜನರು ವದಂತಿಗಳಿಗೆ ಕಿವಿಗೊಡಬಾರದು, ಈ ವಿಡಿಯೋ ನಿಜಾಸತ್ಯತೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.

ಇದಾದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು “ಸಿನಿಮಾ ಪ್ರಭಾವದಿಂದ ಇಂತಹ ಗೊಂದಲಗಳು ಉಂಟಾಗಿವೆ” ಎಂದು ಹೇಳಿದರೆ, ಇನ್ನೂ ಕೆಲವರು “ಸಿನಿಮಾವನ್ನೇ ನಿಜವೆಂದು ನಂಬುವುದು ಅತಿಶಯ” ಎಂದು ವ್ಯಂಗ್ಯ ಮಾಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

13 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

13 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

13 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

13 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago