ಕೊಟ್ಟೂರು: ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಬಯಲು ಪ್ರದೇಶದಲ್ಲಿ ಬಿಡಾರ ಹೂಡಿದ್ದ ಹೆಳವರನ್ನು ಗ್ರಾಮಸ್ಥರು ಊರಿನಿಂದ ಹೊರ ಹಾಕಿದ ಅಪರೂಪದ, ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ಪ್ರತಿ ವರ್ಷದಂತೆ ತಮ್ಮ ವೃತ್ತಿಗೆ ಅನುಕೂಲವಾಗುವ ಸ್ಥಳದಲ್ಲಿ ಹೆಳವರು ಬಿಡಾರ ಹಾಕುವುದು ಸರ್ವೇಸಾಮಾನ್ಯವಾಗಿದೆ. ಆದರೆ ಇವರ ಆಗಮನದಿಂದ ಊರಿಗೆ ಮಳೆ ಹೋಯಿತೆಂಬ ಕೆಲವು ಹಿರಿಯರು ಹಾಗೂ ಕಿಡಿಗೇಡಿಗಳ ಊಹಾಪೋಹ ಮಾತಿಗೆ ಕಿವಿಗೊಟ್ಟು ಊರನ್ನು ಬಿಡಿಸಿದ್ದಾರೆ. ಜನರ ನಂಬಿಕೆಗೆ ಬೆಲೆಕೊಟ್ಟು, ಬೇಸರದಿಂದ ಅವರೂ ಹೊರ ನಡೆದು ಈಗ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನೆಲೆಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
ಹೆಳವ ಇದೊಂದು ಅಲೆಮಾರಿ ಜನಾಂಗವಾಗಿದ್ದು, ಅಂದರೆ ಅವರು ಮನೆಮನೆಗೆ ಹೋಗಿ ಜನರ ವಂಶಾವಳಿಗಳನ್ನು ದಾಖಲಿಸುತ್ತಾರೆ ಮತ್ತು ಹೇಳುತ್ತಾರೆ. ಇದರಿಂದಾಗಿ ಬರುವ ನಗದು, ದವಸ ಧಾನ್ಯಗಳು, ಹಳೆಯ ಕಂಚು, ತಾಮ್ರದ ಪಾತ್ರೆಗಳು, ದನ ಕರುಗಳು, ಕುರಿಮರಿಗಳನ್ನು ದಾನವಾಗಿ ಪಡೆದು ಬದುಕು ಸಾಗಿಸುತ್ತಾರೆ.
ಈ ಆಧುನಿಕ ಕಾಲದಲ್ಲೂ ಜನರು ಮೌಢ್ಯದಿಂದ ಹೊರ ಬರಲಾಗಿಲ್ಲ ಎಂಬುದೇ ನಾಚಿಕೆಗೇಡಿನ ವಿಷಯವಾಗಿದೆ. ಇನ್ನಾದರೂ ಪ್ರಜ್ಞಾವಂತ ನಾಗರೀಕರು ಹಾಗೂ ಯುವಜನತೆ ಎಚ್ಚೆತ್ತುಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ.
ವರದಿ:- ಮಣಿಕಂಠ. ಬಿ
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…
ಚಿತ್ರದುರ್ಗ: ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮದ ಹತ್ತಿರ ನಡೆದ ವಿಶಿಷ್ಟ ಕಳವು ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಸಾಧುಗಳ ವೇಷ ತಾಳಿ ರೈತರ…
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…