ಕೊಟ್ಟೂರು: ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಬಯಲು ಪ್ರದೇಶದಲ್ಲಿ ಬಿಡಾರ ಹೂಡಿದ್ದ ಹೆಳವರನ್ನು ಗ್ರಾಮಸ್ಥರು ಊರಿನಿಂದ ಹೊರ ಹಾಕಿದ ಅಪರೂಪದ, ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ಪ್ರತಿ ವರ್ಷದಂತೆ ತಮ್ಮ ವೃತ್ತಿಗೆ ಅನುಕೂಲವಾಗುವ ಸ್ಥಳದಲ್ಲಿ ಹೆಳವರು ಬಿಡಾರ ಹಾಕುವುದು ಸರ್ವೇಸಾಮಾನ್ಯವಾಗಿದೆ. ಆದರೆ ಇವರ ಆಗಮನದಿಂದ ಊರಿಗೆ ಮಳೆ ಹೋಯಿತೆಂಬ ಕೆಲವು ಹಿರಿಯರು ಹಾಗೂ ಕಿಡಿಗೇಡಿಗಳ ಊಹಾಪೋಹ ಮಾತಿಗೆ ಕಿವಿಗೊಟ್ಟು ಊರನ್ನು ಬಿಡಿಸಿದ್ದಾರೆ. ಜನರ ನಂಬಿಕೆಗೆ ಬೆಲೆಕೊಟ್ಟು, ಬೇಸರದಿಂದ ಅವರೂ ಹೊರ ನಡೆದು ಈಗ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನೆಲೆಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.
ಹೆಳವ ಇದೊಂದು ಅಲೆಮಾರಿ ಜನಾಂಗವಾಗಿದ್ದು, ಅಂದರೆ ಅವರು ಮನೆಮನೆಗೆ ಹೋಗಿ ಜನರ ವಂಶಾವಳಿಗಳನ್ನು ದಾಖಲಿಸುತ್ತಾರೆ ಮತ್ತು ಹೇಳುತ್ತಾರೆ. ಇದರಿಂದಾಗಿ ಬರುವ ನಗದು, ದವಸ ಧಾನ್ಯಗಳು, ಹಳೆಯ ಕಂಚು, ತಾಮ್ರದ ಪಾತ್ರೆಗಳು, ದನ ಕರುಗಳು, ಕುರಿಮರಿಗಳನ್ನು ದಾನವಾಗಿ ಪಡೆದು ಬದುಕು ಸಾಗಿಸುತ್ತಾರೆ.
ಈ ಆಧುನಿಕ ಕಾಲದಲ್ಲೂ ಜನರು ಮೌಢ್ಯದಿಂದ ಹೊರ ಬರಲಾಗಿಲ್ಲ ಎಂಬುದೇ ನಾಚಿಕೆಗೇಡಿನ ವಿಷಯವಾಗಿದೆ. ಇನ್ನಾದರೂ ಪ್ರಜ್ಞಾವಂತ ನಾಗರೀಕರು ಹಾಗೂ ಯುವಜನತೆ ಎಚ್ಚೆತ್ತುಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ.
ವರದಿ:- ಮಣಿಕಂಠ. ಬಿ
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…