Latest

ಮಳೆ ಬಾರದಕ್ಕೂ, ಹೆಳವರು ಬಂದದ್ದಕ್ಕೂ ಎತ್ತಣಿಂದೆತ್ತಾ ಸಂಬಂಧವಯ್ಯಾ?

ಕೊಟ್ಟೂರು: ತಾಲ್ಲೂಕಿನ ಕೆ. ಅಯ್ಯನಹಳ್ಳಿ ಗ್ರಾಮದ ಆಂಜನೇಯ ದೇವಸ್ಥಾನದ ಬಯಲು ಪ್ರದೇಶದಲ್ಲಿ ಬಿಡಾರ ಹೂಡಿದ್ದ ಹೆಳವರನ್ನು ಗ್ರಾಮಸ್ಥರು ಊರಿನಿಂದ ಹೊರ ಹಾಕಿದ ಅಪರೂಪದ, ಅಮಾನವೀಯ ಘಟನೆ ಇದೀಗ ಬೆಳಕಿಗೆ ಬಂದಿದೆ.
ಪ್ರತಿ ವರ್ಷದಂತೆ ತಮ್ಮ ವೃತ್ತಿಗೆ ಅನುಕೂಲವಾಗುವ ಸ್ಥಳದಲ್ಲಿ ಹೆಳವರು ಬಿಡಾರ ಹಾಕುವುದು ಸರ್ವೇಸಾಮಾನ್ಯವಾಗಿದೆ. ಆದರೆ ಇವರ ಆಗಮನದಿಂದ ಊರಿಗೆ ಮಳೆ ಹೋಯಿತೆಂಬ ಕೆಲವು ಹಿರಿಯರು ಹಾಗೂ ಕಿಡಿಗೇಡಿಗಳ ಊಹಾಪೋಹ ಮಾತಿಗೆ ಕಿವಿಗೊಟ್ಟು ಊರನ್ನು ಬಿಡಿಸಿದ್ದಾರೆ. ಜನರ ನಂಬಿಕೆಗೆ ಬೆಲೆಕೊಟ್ಟು, ಬೇಸರದಿಂದ ಅವರೂ ಹೊರ ನಡೆದು ಈಗ ಹರಪನಹಳ್ಳಿ ತಾಲೂಕಿನ ಚಿಗಟೇರಿ ಗ್ರಾಮದಲ್ಲಿ ನೆಲೆಸಿದ್ದಾರೆಂಬ ಮಾಹಿತಿ ತಿಳಿದು ಬಂದಿದೆ.

ಹೆಳವ ಇದೊಂದು ಅಲೆಮಾರಿ ಜನಾಂಗವಾಗಿದ್ದು, ಅಂದರೆ ಅವರು ಮನೆಮನೆಗೆ ಹೋಗಿ ಜನರ ವಂಶಾವಳಿಗಳನ್ನು ದಾಖಲಿಸುತ್ತಾರೆ ಮತ್ತು ಹೇಳುತ್ತಾರೆ. ಇದರಿಂದಾಗಿ ಬರುವ ನಗದು, ದವಸ ಧಾನ್ಯಗಳು, ಹಳೆಯ ಕಂಚು, ತಾಮ್ರದ ಪಾತ್ರೆಗಳು, ದನ ಕರುಗಳು, ಕುರಿಮರಿಗಳನ್ನು ದಾನವಾಗಿ ಪಡೆದು ಬದುಕು ಸಾಗಿಸುತ್ತಾರೆ.

ಈ ಆಧುನಿಕ ಕಾಲದಲ್ಲೂ ಜನರು ಮೌಢ್ಯದಿಂದ ಹೊರ ಬರಲಾಗಿಲ್ಲ ಎಂಬುದೇ ನಾಚಿಕೆಗೇಡಿನ ವಿಷಯವಾಗಿದೆ. ಇನ್ನಾದರೂ ಪ್ರಜ್ಞಾವಂತ ನಾಗರೀಕರು ಹಾಗೂ ಯುವಜನತೆ ಎಚ್ಚೆತ್ತುಕೊಂಡು ಜನರಲ್ಲಿ ಅರಿವು ಮೂಡಿಸುವ ಕೆಲಸವಾಗಬೇಕಿದೆ.
ವರದಿ:- ಮಣಿಕಂಠ. ಬಿ

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago