Categories: LatestNationalWorld

ಭಾರತ ಸೇರಿದಂತೆ ಏಷ್ಯಾದಲ್ಲಿ ದಾಳಿಗೆ ಐಸಿಸ್ ಕರೆ: ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಭಾರತ ಸೇರಿದಂತೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂತೆ ತನ್ನ ಬೆಂಬಲಿಗರಿಗೆ ಕರೆ ನೀಡಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.

‘ಕೌಂಟರ್ ಎಕ್ಸ್ಟ್ರೀಮಿಸಂ ಪ್ರಾಜೆಕ್ಟ್’ (ಸಿಇಪಿ) ವರದಿ ಪ್ರಕಾರ, ಮಾರ್ಚ್ 9ರಂದು ಐಸಿಸ್ ಬೆಂಬಲಿತ ವ್ಯಕ್ತಿಯೊಬ್ಬ ಆನ್‌ಲೈನ್ ವೇದಿಕೆಗಳ ಮೂಲಕ ಹಿಂದೂಗಳ ಮೇಲೆ ದಾಳಿ ನಡೆಸುವಂತೆ ಪ್ರಚೋದನಾಕಾರಿ ಸಂದೇಶ ಹಂಚಿಕೊಂಡಿದ್ದಾನೆ. ಈ ಸಂದೇಶದಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ, ಮಣಿಪುರ ರಾಜ್ಯಗಳು ಹಾಗೂ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಪ್ರದೇಶಗಳನ್ನು ಗುರಿಯಾಗಿಸಲಾಗಿದೆ. ಟೆಲಿಗ್ರಾಮ್ ಹಾಗೂ ರಾಕೆಟ್‌ ಚಾಟ್‌ಂತಹ ಗುಪ್ತ ಆಪ್‌ಗಳ ಮೂಲಕ ಈ ಸಂದೇಶ ವ್ಯಾಪಕವಾಗಿ ಹರಡಲಾಗಿದೆ.

ಇದಲ್ಲದೆ, ಅಮೆರಿಕಾದಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನೂ ಐಸಿಸ್ ಬೆಂಬಲಿಗರು ಶ್ಲಾಘಿಸಿರುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್ ಹಾಗೂ ಓಲ್ಡ್ ಡೊಮಿನಿಯನ್ ವಿಶ್ವವಿದ್ಯಾಲಯದಲ್ಲಿ ನಡೆದ ದಾಳಿಗಳನ್ನೂ ಉಗ್ರರು ಪ್ರಶಂಸಿಸಿದ್ದಾರೆ. ಈ ದಾಳಿಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ‘ಹುತಾತ್ಮ’ ಎಂದು ಕರೆದಿರುವುದು ಗಮನಾರ್ಹ.

ಐಸಿಸ್ ತನ್ನ ಪ್ರಚಾರ ಚಟುವಟಿಕೆಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಇತ್ತೀಚೆಗೆ ಹಲವು ಪ್ರಚೋದನಾಕಾರಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ. ಈ ವಿಡಿಯೋಗಳಲ್ಲಿ ಪಶ್ಚಿಮ ದೇಶಗಳ ವಿರುದ್ಧ ದ್ವೇಷ ಹರಡುವ ಜೊತೆಗೆ ದಾಳಿ ನಡೆಸಲು ಪ್ರೇರೇಪಣೆ ನೀಡಲಾಗಿದೆ. ಜೊತೆಗೆ, ಸಂಘಟನೆ ತನ್ನ ಜಾಲ ವಿಸ್ತರಣೆ ಹಾಗೂ ಹಣ ಸಂಗ್ರಹಕ್ಕಾಗಿ ಆನ್‌ಲೈನ್ ಬಾಟ್‌ಗಳು ಮತ್ತು ಮೆಸೇಜಿಂಗ್ ಆಪ್‌ಗಳನ್ನು ಬಳಸುತ್ತಿದೆ.

ಕಳೆದ ಒಂದು ವಾರದಲ್ಲಿ ನೈಜೀರಿಯಾ, ಸಿರಿಯಾ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳಲ್ಲಿ ನಡೆದ ದಾಳಿಗಳ ಹೊಣೆಗಾರಿಕೆಯನ್ನು ಐಸಿಸ್ ಹೊತ್ತಿರುವುದಾಗಿ ವರದಿ ತಿಳಿಸಿದೆ.

ಭಾರತದ ಗಡಿ ರಾಜ್ಯಗಳಲ್ಲಿ ಇಂತಹ ಪ್ರಚೋದನಾಕಾರಿ ಸಂದೇಶಗಳು ಹರಡುತ್ತಿರುವುದು ಭದ್ರತಾ ಸಂಸ್ಥೆಗಳಿಗೆ ಗಂಭೀರ ಸವಾಲಾಗಿ ಪರಿಣಮಿಸಿದೆ.

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

8 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

13 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

13 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

13 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

13 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

18 hours ago