Categories: LatestNationalWorld

ಭಾರತ ಸೇರಿದಂತೆ ಏಷ್ಯಾದಲ್ಲಿ ದಾಳಿಗೆ ಐಸಿಸ್ ಕರೆ: ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಭಾರತ ಸೇರಿದಂತೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂತೆ ತನ್ನ ಬೆಂಬಲಿಗರಿಗೆ ಕರೆ ನೀಡಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.

‘ಕೌಂಟರ್ ಎಕ್ಸ್ಟ್ರೀಮಿಸಂ ಪ್ರಾಜೆಕ್ಟ್’ (ಸಿಇಪಿ) ವರದಿ ಪ್ರಕಾರ, ಮಾರ್ಚ್ 9ರಂದು ಐಸಿಸ್ ಬೆಂಬಲಿತ ವ್ಯಕ್ತಿಯೊಬ್ಬ ಆನ್‌ಲೈನ್ ವೇದಿಕೆಗಳ ಮೂಲಕ ಹಿಂದೂಗಳ ಮೇಲೆ ದಾಳಿ ನಡೆಸುವಂತೆ ಪ್ರಚೋದನಾಕಾರಿ ಸಂದೇಶ ಹಂಚಿಕೊಂಡಿದ್ದಾನೆ. ಈ ಸಂದೇಶದಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ, ಮಣಿಪುರ ರಾಜ್ಯಗಳು ಹಾಗೂ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಪ್ರದೇಶಗಳನ್ನು ಗುರಿಯಾಗಿಸಲಾಗಿದೆ. ಟೆಲಿಗ್ರಾಮ್ ಹಾಗೂ ರಾಕೆಟ್‌ ಚಾಟ್‌ಂತಹ ಗುಪ್ತ ಆಪ್‌ಗಳ ಮೂಲಕ ಈ ಸಂದೇಶ ವ್ಯಾಪಕವಾಗಿ ಹರಡಲಾಗಿದೆ.

ಇದಲ್ಲದೆ, ಅಮೆರಿಕಾದಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನೂ ಐಸಿಸ್ ಬೆಂಬಲಿಗರು ಶ್ಲಾಘಿಸಿರುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್ ಹಾಗೂ ಓಲ್ಡ್ ಡೊಮಿನಿಯನ್ ವಿಶ್ವವಿದ್ಯಾಲಯದಲ್ಲಿ ನಡೆದ ದಾಳಿಗಳನ್ನೂ ಉಗ್ರರು ಪ್ರಶಂಸಿಸಿದ್ದಾರೆ. ಈ ದಾಳಿಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ‘ಹುತಾತ್ಮ’ ಎಂದು ಕರೆದಿರುವುದು ಗಮನಾರ್ಹ.

ಐಸಿಸ್ ತನ್ನ ಪ್ರಚಾರ ಚಟುವಟಿಕೆಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಇತ್ತೀಚೆಗೆ ಹಲವು ಪ್ರಚೋದನಾಕಾರಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ. ಈ ವಿಡಿಯೋಗಳಲ್ಲಿ ಪಶ್ಚಿಮ ದೇಶಗಳ ವಿರುದ್ಧ ದ್ವೇಷ ಹರಡುವ ಜೊತೆಗೆ ದಾಳಿ ನಡೆಸಲು ಪ್ರೇರೇಪಣೆ ನೀಡಲಾಗಿದೆ. ಜೊತೆಗೆ, ಸಂಘಟನೆ ತನ್ನ ಜಾಲ ವಿಸ್ತರಣೆ ಹಾಗೂ ಹಣ ಸಂಗ್ರಹಕ್ಕಾಗಿ ಆನ್‌ಲೈನ್ ಬಾಟ್‌ಗಳು ಮತ್ತು ಮೆಸೇಜಿಂಗ್ ಆಪ್‌ಗಳನ್ನು ಬಳಸುತ್ತಿದೆ.

ಕಳೆದ ಒಂದು ವಾರದಲ್ಲಿ ನೈಜೀರಿಯಾ, ಸಿರಿಯಾ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳಲ್ಲಿ ನಡೆದ ದಾಳಿಗಳ ಹೊಣೆಗಾರಿಕೆಯನ್ನು ಐಸಿಸ್ ಹೊತ್ತಿರುವುದಾಗಿ ವರದಿ ತಿಳಿಸಿದೆ.

ಭಾರತದ ಗಡಿ ರಾಜ್ಯಗಳಲ್ಲಿ ಇಂತಹ ಪ್ರಚೋದನಾಕಾರಿ ಸಂದೇಶಗಳು ಹರಡುತ್ತಿರುವುದು ಭದ್ರತಾ ಸಂಸ್ಥೆಗಳಿಗೆ ಗಂಭೀರ ಸವಾಲಾಗಿ ಪರಿಣಮಿಸಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago