Categories: LatestNationalWorld

ಭಾರತ ಸೇರಿದಂತೆ ಏಷ್ಯಾದಲ್ಲಿ ದಾಳಿಗೆ ಐಸಿಸ್ ಕರೆ: ಭದ್ರತಾ ಸಂಸ್ಥೆಗಳಿಗೆ ಎಚ್ಚರಿಕೆ

ಜಾಗತಿಕ ಭಯೋತ್ಪಾದಕ ಸಂಘಟನೆ ಐಸಿಸ್ (ಇಸ್ಲಾಮಿಕ್ ಸ್ಟೇಟ್) ಭಾರತ ಸೇರಿದಂತೆ ದಕ್ಷಿಣ ಮತ್ತು ಆಗ್ನೇಯ ಏಷ್ಯಾದಲ್ಲಿ ಹಿಂದೂ ಸಮುದಾಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವಂತೆ ತನ್ನ ಬೆಂಬಲಿಗರಿಗೆ ಕರೆ ನೀಡಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಂದಿದೆ.

‘ಕೌಂಟರ್ ಎಕ್ಸ್ಟ್ರೀಮಿಸಂ ಪ್ರಾಜೆಕ್ಟ್’ (ಸಿಇಪಿ) ವರದಿ ಪ್ರಕಾರ, ಮಾರ್ಚ್ 9ರಂದು ಐಸಿಸ್ ಬೆಂಬಲಿತ ವ್ಯಕ್ತಿಯೊಬ್ಬ ಆನ್‌ಲೈನ್ ವೇದಿಕೆಗಳ ಮೂಲಕ ಹಿಂದೂಗಳ ಮೇಲೆ ದಾಳಿ ನಡೆಸುವಂತೆ ಪ್ರಚೋದನಾಕಾರಿ ಸಂದೇಶ ಹಂಚಿಕೊಂಡಿದ್ದಾನೆ. ಈ ಸಂದೇಶದಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ, ತ್ರಿಪುರಾ, ಮಣಿಪುರ ರಾಜ್ಯಗಳು ಹಾಗೂ ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್ ಪ್ರದೇಶಗಳನ್ನು ಗುರಿಯಾಗಿಸಲಾಗಿದೆ. ಟೆಲಿಗ್ರಾಮ್ ಹಾಗೂ ರಾಕೆಟ್‌ ಚಾಟ್‌ಂತಹ ಗುಪ್ತ ಆಪ್‌ಗಳ ಮೂಲಕ ಈ ಸಂದೇಶ ವ್ಯಾಪಕವಾಗಿ ಹರಡಲಾಗಿದೆ.

ಇದಲ್ಲದೆ, ಅಮೆರಿಕಾದಲ್ಲಿ ನಡೆದ ಹಿಂಸಾಚಾರ ಘಟನೆಗಳನ್ನೂ ಐಸಿಸ್ ಬೆಂಬಲಿಗರು ಶ್ಲಾಘಿಸಿರುವುದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ನ್ಯೂಯಾರ್ಕ್ ಹಾಗೂ ಓಲ್ಡ್ ಡೊಮಿನಿಯನ್ ವಿಶ್ವವಿದ್ಯಾಲಯದಲ್ಲಿ ನಡೆದ ದಾಳಿಗಳನ್ನೂ ಉಗ್ರರು ಪ್ರಶಂಸಿಸಿದ್ದಾರೆ. ಈ ದಾಳಿಯಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು ‘ಹುತಾತ್ಮ’ ಎಂದು ಕರೆದಿರುವುದು ಗಮನಾರ್ಹ.

ಐಸಿಸ್ ತನ್ನ ಪ್ರಚಾರ ಚಟುವಟಿಕೆಗಳನ್ನು ಮತ್ತಷ್ಟು ತೀವ್ರಗೊಳಿಸಿದ್ದು, ಇತ್ತೀಚೆಗೆ ಹಲವು ಪ್ರಚೋದನಾಕಾರಿ ವಿಡಿಯೋಗಳನ್ನು ಬಿಡುಗಡೆ ಮಾಡಿದೆ. ಈ ವಿಡಿಯೋಗಳಲ್ಲಿ ಪಶ್ಚಿಮ ದೇಶಗಳ ವಿರುದ್ಧ ದ್ವೇಷ ಹರಡುವ ಜೊತೆಗೆ ದಾಳಿ ನಡೆಸಲು ಪ್ರೇರೇಪಣೆ ನೀಡಲಾಗಿದೆ. ಜೊತೆಗೆ, ಸಂಘಟನೆ ತನ್ನ ಜಾಲ ವಿಸ್ತರಣೆ ಹಾಗೂ ಹಣ ಸಂಗ್ರಹಕ್ಕಾಗಿ ಆನ್‌ಲೈನ್ ಬಾಟ್‌ಗಳು ಮತ್ತು ಮೆಸೇಜಿಂಗ್ ಆಪ್‌ಗಳನ್ನು ಬಳಸುತ್ತಿದೆ.

ಕಳೆದ ಒಂದು ವಾರದಲ್ಲಿ ನೈಜೀರಿಯಾ, ಸಿರಿಯಾ, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳಲ್ಲಿ ನಡೆದ ದಾಳಿಗಳ ಹೊಣೆಗಾರಿಕೆಯನ್ನು ಐಸಿಸ್ ಹೊತ್ತಿರುವುದಾಗಿ ವರದಿ ತಿಳಿಸಿದೆ.

ಭಾರತದ ಗಡಿ ರಾಜ್ಯಗಳಲ್ಲಿ ಇಂತಹ ಪ್ರಚೋದನಾಕಾರಿ ಸಂದೇಶಗಳು ಹರಡುತ್ತಿರುವುದು ಭದ್ರತಾ ಸಂಸ್ಥೆಗಳಿಗೆ ಗಂಭೀರ ಸವಾಲಾಗಿ ಪರಿಣಮಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago