World

ಅಮೆರಿಕಾ-ಇರಾಕ್ ಸೇನೆಯ ಜಂಟಿ ದಾಳಿಯಲ್ಲಿ ISIS ನಾಯಕ ಅಬು ಖದಿಜಾ ಹತ

ಅಮೆರಿಕಾ ಮತ್ತು ಇರಾಕ್ ಸೇನೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ISIS ಉನ್ನತ ನಾಯಕ ಅಬು ಖದಿಜಾ ವಧೆಯಾಗಿರುವುದು ದೃಢಪಟ್ಟಿದೆ. ಅಮೆರಿಕಾ ಸೆಂಟ್ರಲ್ ಕಮಾಂಡ್ (CENTCOM) ಈ ದಾಳಿಯ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಇರಾಕ್‌ನ ಅಲ್ ಅನ್ಬಾರ್ ಪ್ರಾಂತ್ಯದಲ್ಲಿ ನಡೆದ ನಿಖರವಾದ ವಾಯುದಾಳಿಯಲ್ಲಿ ಅಬು ಖದಿಜಾ ಮತ್ತು ಮತ್ತೊಬ್ಬ ISIS ಕಾರ್ಯಕರ್ತ ಹತರಾಗಿದ್ದಾರೆ.

ಅಬು ಖದಿಜಾ ISIS ನ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಎಮಿರ್ ಆಗಿದ್ದನು. ಆತ ಜಾಗತಿಕ ಮಟ್ಟದಲ್ಲಿ ಈ ಸಂಘಟನೆಯ ಕಾರ್ಯಾಚರಣೆಗಳು, ಲಾಜಿಸ್ಟಿಕ್ಸ್ ಮತ್ತು ಹಣಕಾಸು ವ್ಯವಸ್ಥೆಗಳ ಸಂಯೋಜನೆಗೆ ಪ್ರಭಾವಶಾಲಿ ಪಾತ್ರ ವಹಿಸುತ್ತಿದ್ದನು.

CENTCOM ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಭಯೋತ್ಪಾದಕರು ಸ್ಫೋಟಗೊಳ್ಳದ “ಆತ್ಮಹತ್ಯಾ ಜಾಕೆಟ್”ಗಳನ್ನು ಧರಿಸಿದ್ದಿದ್ದು, ಬಹು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆಂದು ಕಾಣಿಸುತ್ತದೆ. ಅಮೆರಿಕಾ ಸೇನೆ, ಹಿಂದಿನ ದಾಳಿಯಲ್ಲಿ ಸಂಗ್ರಹಿಸಿದ ಡಿಎನ್‌ಎ ಪರೀಕ್ಷೆಯ ಮೂಲಕ ಅಬು ಖದಿಜಾವನ್ನು ಗುರುತಿಸಿದ್ದು, ಈ ದಾಳಿ ತೀವ್ರ ನಿಗಾ ಮತ್ತು ಪೂರ್ವಯೋಜನೆಯೊಂದಿಗೆ ನಡೆಸಲಾಗಿತ್ತು.

CENTCOM ಕಮಾಂಡರ್ ಜನರಲ್ ಮೈಕೆಲ್ ಎರಿಕ್ ಕುರಿಲ್ಲಾ ಈ ಕುರಿತು ಹೇಳಿಕೆ ನೀಡುತ್ತಾ, “ಅಬು ಖದಿಜಾ ISIS ನ ಪ್ರಮುಖ ಸದಸ್ಯನಾಗಿದ್ದ. ನಮ್ಮ ದೇಶ ಮತ್ತು ಮಿತ್ರ ರಾಷ್ಟ್ರಗಳಿಗೆ ಅಪಾಯ ಉಂಟುಮಾಡುವ ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿಯುತ್ತದೆ” ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ಕಾರ್ಯಾಚರಣೆಯ ಬಗ್ಗೆ ಪ್ರತಿಕ್ರಿಯಿಸಿ, “ಇರಾಕ್ ಮತ್ತು ಕುರ್ದಿಶ್ ಪ್ರಾದೇಶಿಕ ಸರ್ಕಾರದ ಸಹಕಾರದೊಂದಿಗೆ ಅಬು ಖದಿಜಾನನ್ನು ಹತ್ಯೆ ಮಾಡಲಾಗಿದೆ. ಬಲದ ಮೂಲಕ ಶಾಂತಿ!” ಎಂದು ಹೇಳಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಜಾತ್ರೆಯಲ್ಲಿ ಮಹಿಳೆಯ ಮಂಗಳಸೂತ್ರ ಕಳವು: ಮೂವರು ಆರೋಪಿಗಳ ಬಂಧನ

₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…

14 hours ago

ಬೈಕ್‌ನಲ್ಲಿ ಕರೆದೊಯ್ದು ಹಣ ಕಸಿದು ಜೀವ ಬೆದರಿಕೆ: 24 ಗಂಟೆಯಲ್ಲೇ ಆರೋಪಿ ಬಂಧನ

ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್‌ನಿಂದ ಹಣ ಪಡೆದು ಹೊರಬಂದ…

14 hours ago

ಕಳ್ಳತನ ತಡೆಗೆ ಮುಂಡಗೋಡ ಪೊಲೀಸರ ಕಟ್ಟೆಚ್ಚರ; ರಾತ್ರಿ ಗಸ್ತು, ವಾಹನ ತಪಾಸಣೆ ಚುರುಕು

ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…

14 hours ago

ಹೆದ್ದಾರಿ ಬದಿಯಲ್ಲಿ ಪತಿಯ ಶವ… ರಸ್ತೆ ಅಪಘಾತವೆಂದು ನಂಬಿಸಿದ್ದರು! ತನಿಖೆಯಲ್ಲಿ ಬಯಲಾಯ್ತು ಹೆಂಡತಿಯೇ ಹೆಣೆದ ಭೀಕರ ಕೊಲೆ ಸಂಚು

ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…

14 hours ago

ಡೇಟಿಂಗ್ ಆ್ಯಪ್‌ ಮೂಲಕ ‘ಹನಿ ಟ್ರ್ಯಾಪ್’! ಶ್ರೀಮಂತ ಪುರುಷರನ್ನು ಬಲೆಗೆ ಬೀಳಿಸಿ ₹6 ಕೋಟಿಗೂ ಅಧಿಕ ಲೂಟಿ

ಪ್ರಯಾಗ್‌ರಾಜ್: ಡೇಟಿಂಗ್ ಆ್ಯಪ್‌ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…

14 hours ago

ರೇಣುಕಾಸ್ವಾಮಿ ಮೇಲೆ ದರ್ಶನ್‌ ಹಲ್ಲೆ ಆರೋಪ: ಜನನಾಂಗಕ್ಕೆ ಒದ್ದು, ಎದೆ ಮೇಲೆ ಕಾಲಿಟ್ಟು ತುಳಿದಿದ್ದರೆಂದು ಮಾಫಿ ಸಾಕ್ಷಿ ಹೇಳಿಕೆ!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…

14 hours ago