World

ಅಮೆರಿಕಾ-ಇರಾಕ್ ಸೇನೆಯ ಜಂಟಿ ದಾಳಿಯಲ್ಲಿ ISIS ನಾಯಕ ಅಬು ಖದಿಜಾ ಹತ

ಅಮೆರಿಕಾ ಮತ್ತು ಇರಾಕ್ ಸೇನೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ISIS ಉನ್ನತ ನಾಯಕ ಅಬು ಖದಿಜಾ ವಧೆಯಾಗಿರುವುದು ದೃಢಪಟ್ಟಿದೆ. ಅಮೆರಿಕಾ ಸೆಂಟ್ರಲ್ ಕಮಾಂಡ್ (CENTCOM) ಈ ದಾಳಿಯ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದ್ದು, ಇರಾಕ್‌ನ ಅಲ್ ಅನ್ಬಾರ್ ಪ್ರಾಂತ್ಯದಲ್ಲಿ ನಡೆದ ನಿಖರವಾದ ವಾಯುದಾಳಿಯಲ್ಲಿ ಅಬು ಖದಿಜಾ ಮತ್ತು ಮತ್ತೊಬ್ಬ ISIS ಕಾರ್ಯಕರ್ತ ಹತರಾಗಿದ್ದಾರೆ.

ಅಬು ಖದಿಜಾ ISIS ನ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯ ಎಮಿರ್ ಆಗಿದ್ದನು. ಆತ ಜಾಗತಿಕ ಮಟ್ಟದಲ್ಲಿ ಈ ಸಂಘಟನೆಯ ಕಾರ್ಯಾಚರಣೆಗಳು, ಲಾಜಿಸ್ಟಿಕ್ಸ್ ಮತ್ತು ಹಣಕಾಸು ವ್ಯವಸ್ಥೆಗಳ ಸಂಯೋಜನೆಗೆ ಪ್ರಭಾವಶಾಲಿ ಪಾತ್ರ ವಹಿಸುತ್ತಿದ್ದನು.

CENTCOM ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಭಯೋತ್ಪಾದಕರು ಸ್ಫೋಟಗೊಳ್ಳದ “ಆತ್ಮಹತ್ಯಾ ಜಾಕೆಟ್”ಗಳನ್ನು ಧರಿಸಿದ್ದಿದ್ದು, ಬಹು ಶಸ್ತ್ರಾಸ್ತ್ರಗಳನ್ನು ಹೊಂದಿದ್ದರೆಂದು ಕಾಣಿಸುತ್ತದೆ. ಅಮೆರಿಕಾ ಸೇನೆ, ಹಿಂದಿನ ದಾಳಿಯಲ್ಲಿ ಸಂಗ್ರಹಿಸಿದ ಡಿಎನ್‌ಎ ಪರೀಕ್ಷೆಯ ಮೂಲಕ ಅಬು ಖದಿಜಾವನ್ನು ಗುರುತಿಸಿದ್ದು, ಈ ದಾಳಿ ತೀವ್ರ ನಿಗಾ ಮತ್ತು ಪೂರ್ವಯೋಜನೆಯೊಂದಿಗೆ ನಡೆಸಲಾಗಿತ್ತು.

CENTCOM ಕಮಾಂಡರ್ ಜನರಲ್ ಮೈಕೆಲ್ ಎರಿಕ್ ಕುರಿಲ್ಲಾ ಈ ಕುರಿತು ಹೇಳಿಕೆ ನೀಡುತ್ತಾ, “ಅಬು ಖದಿಜಾ ISIS ನ ಪ್ರಮುಖ ಸದಸ್ಯನಾಗಿದ್ದ. ನಮ್ಮ ದೇಶ ಮತ್ತು ಮಿತ್ರ ರಾಷ್ಟ್ರಗಳಿಗೆ ಅಪಾಯ ಉಂಟುಮಾಡುವ ಭಯೋತ್ಪಾದಕರ ವಿರುದ್ಧ ಹೋರಾಟ ಮುಂದುವರಿಯುತ್ತದೆ” ಎಂದಿದ್ದಾರೆ.

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಈ ಕಾರ್ಯಾಚರಣೆಯ ಬಗ್ಗೆ ಪ್ರತಿಕ್ರಿಯಿಸಿ, “ಇರಾಕ್ ಮತ್ತು ಕುರ್ದಿಶ್ ಪ್ರಾದೇಶಿಕ ಸರ್ಕಾರದ ಸಹಕಾರದೊಂದಿಗೆ ಅಬು ಖದಿಜಾನನ್ನು ಹತ್ಯೆ ಮಾಡಲಾಗಿದೆ. ಬಲದ ಮೂಲಕ ಶಾಂತಿ!” ಎಂದು ಹೇಳಿಕೆ ನೀಡಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

1 hour ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

8 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

8 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago