ಗುರುವಾರ (ಮಾರ್ಚ್ 7) ರಾತ್ರಿ 11 ರಿಂದ 11:30ರ ನಡುವೆಯೇ ಭಯಾನಕ ಘಟನೆ ನಡೆದಿದೆ. 27 ವರ್ಷದ ಇಸ್ರೇಲಿ ಯುವತಿ ಹಾಗೂ 29 ವರ್ಷದ ಹೋಮ್ಸ್ಟೇ ಮಾಲಕಿಯ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದು, ಜತೆಗಿದ್ದ ಮೂವರು ಪುರುಷರ ಮೇಲೆ ಹಲ್ಲೆ ನಡೆಸಲಾಗಿದೆ. ಈ ದಾಳಿಯಲ್ಲಿ ಒಡಿಶಾದ ಪ್ರವಾಸಿಗನೊಬ್ಬ ಕೊಲೆಯಾಗಿದ್ದು, ಅವರ ಮೃತದೇಹ ತುಂಗಭದ್ರಾ ನದಿಯ ಕಾಲುವೆಯಲ್ಲಿ ಪತ್ತೆಯಾಗಿದೆ. ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ
ಹಂಪಿಯಿಂದ 4 ಕಿಮೀ ದೂರದ ಸಣಾಪುರ ಹಿನ್ನೀರಿನ ಬಳಿ ಈ ಘಟನೆಯು ನಡೆದಿದೆ. ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡಲು ಬಂದಿದ್ದ ಇಸ್ರೇಲಿ ಮಹಿಳೆ, ಅಮೆರಿಕದ ಡೇನಿಯಲ್, ಮಹಾರಾಷ್ಟ್ರದ ಪಂಕಜ್, ಒಡಿಶಾದ ಪ್ರವಾಸಿಗ ಹಾಗೂ ಹೋಮ್ಸ್ಟೇ ಮಾಲಕಿ ರಾತ್ರಿ ಆಕಾಶದ ನಕ್ಷತ್ರಗಳನ್ನು ವೀಕ್ಷಿಸಲು ಹೊರಗೆ ಬಂದಿದ್ದರು.
ಈ ಸಮಯದಲ್ಲಿ ಬೈಕ್ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಮೊದಲು ಪೆಟ್ರೋಲ್ ಪಂಪ್ ಎಲ್ಲಿ ಇದೆ ಎಂದು ಕೇಳುವ ನೆಪ ಮಾಡಿಕೊಂಡರು. ಹೋಮ್ಸ್ಟೇ ಮಾಲಕಿ ದಾರಿ ಗೊತ್ತಿಲ್ಲ ಎಂದು ಹೇಳುತ್ತಿದ್ದಂತೆ, ದುಷ್ಕರ್ಮಿಗಳು ಹಣ ಕೊಡಲು ಒತ್ತಾಯಿಸಿದರು. ಮೊದಲು 20 ರೂಪಾಯಿ ನೀಡಿದರೂ, ಅವರು 100 ರೂಪಾಯಿಗಾಗಿ ಬಲವಂತ ಮಾಡಿದರು. ಇದಾದ ಬಳಿಕ ಹಠಾತ್ತನೆ ಪುರುಷರ ಮೇಲೆ ಹಲ್ಲೆ ನಡೆಸಿ, ಅವರನ್ನು ಸಮೀಪದ ಕಾಲುವೆಗೆ ತಳ್ಳಿದರು.
ಈ ವೇಳೆ ದುಷ್ಕರ್ಮಿಗಳಲ್ಲಿ ಇಬ್ಬರು ಇಸ್ರೇಲಿ ಯುವತಿ ಹಾಗೂ ಹೋಮ್ಸ್ಟೇ ಮಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಪರಾರಿಯಾದರು. ಕಾಲುವೆಗೆ ತಳ್ಳಲಾದ ಪಂಕಜ್ ಮತ್ತು ಡೇನಿಯಲ್ ಈಜಿಕೊಂಡು ಮೇಲಕ್ಕೆ ಬಂದು ಸ್ಥಳೀಯರಿಗೆ ವಿಷಯ ತಿಳಿಸಿದರು. ಆದರೆ, ಒಡಿಶಾದ ಪ್ರವಾಸಿಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ಪೊಲೀಸ್ ತನಿಖೆ ಮುಂದುವರಿದಿದೆ
ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ನಂತರ, ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಹಂಪಿ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ, ಡಾಗ್ ಸ್ಕ್ವಾಡ್ ಸೇರಿ ಈ ಪ್ರಕರಣದ ತನಿಖೆಯನ್ನು ಕೈಗೊಂಡಿದ್ದಾರೆ.
ಈ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅನ್ವಯ ಹಲವು ವಿಭಾಗಗಳ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇವುಗಳಲ್ಲಿ:
ದುಷ್ಕರ್ಮಿಗಳು ಸ್ಥಳೀಯರಾಗಿರುವ ಸಾಧ್ಯತೆ ಇದ್ದು, ಪೊಲೀಸರು ಅವರ ಪತ್ತೆಗೆ ವಿಶೇಷ ತಂಡ ರಚಿಸಿ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…