Latest

ದೇವಸ್ಥಾನಗಳಿಗೆ ಹಣ ಕೊಡುವ ಭಾಗ್ಯ ನನಗೆ ಸಿಕ್ಕಿರುವುದು ನನ್ನ ಪುಣ್ಯ: ಸಚಿವ ಹೆಬ್ಬಾರ್

ಮುಂಡಗೋಡ: ತಾಲೂಕಿನ ಚಿಗಳ್ಳಿ ಗ್ರಾಮದಲ್ಲಿ ದಿನಾಂಕ 09/10/2022 ರಂದು ಶ್ರೀ ಮರಿಯಮ್ಮ ದೇವಿ ಹಾಗೂ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿ ಜೀರ್ಣೋದ್ದಾರ ಕಾಮಗಾರಿಗೆ ಭೂಮಿಪೂಜೆಯನ್ನು ನೆರವೇರಿಸಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್ ಅವರು ಮಾತನಾಡಿದರು.
ಅವರು ಈ ಸಂದರ್ಭದಲ್ಲಿ ನನ್ನ ಕ್ಷೇತ್ರದ ಮುಂಡಗೋಡ ತಾಲೂಕಿನಲ್ಲಿ ಈಗಾಗಲೇ ಸುಮಾರು 120 ಕೋಟಿ ರೂಪಾಯಿ ಅನುದಾನವನ್ನು ದೇವಸ್ಥಾನಗಳಿಗೆ ಬಿಡುಗಡೆ ಮಾಡಿದ್ದೇನೆ.ಇನ್ನೂ 35 ಕೋಟಿಗೂ ಅಧಿಕ ಹಣವು ಬಿಡುಗಡೆಯಾಗುವ ಹಂತದಲ್ಲಿ ಇದೆ ಎಂದು ಅವರು ತಿಳಿಸಿದರು.ಇಂತಹ ಸತ್ಕಾರ್ಯಗಳಿಗೆ ಅನುದಾನವನ್ನು ಒದಗಿಸಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಅವರು ಹೇಳಿದರು.
ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಎಲ್ ಟಿ ಪಾಟೀಲ್‌, ನಿಕಟಪೂರ್ವ ಬಿಜೆಪಿ ಮಂಡಲ ಅಧ್ಯಕ್ಷರಾದ ಜಿ ಎಸ್ ಕಾತೂರು ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷರಾದ ನಾಗಭೂಷಣ ಹಾವಣಗಿ, ರವಿಗೌಡಾ ಪಾಟೀಲ್,ಕೆ ಸಿ ಗಲಬಿ, ಲಕ್ಷ್ಮಣ ಬನ್ಸೋಡೆ, ಗಣಪತಿ ಕೀರ್ತೆಪ್ಪನವರ, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಕ್ಕಮ್ಮ ನಿಂಬಾಯಿ,ಕಮಲಾ ಹಂಚಿನಮನಿ, ಬಾಬುರಾಯ ಲಾಡನವರ, ಸಣ್ಣಪ್ಪ ಕಾಶಿಬಾಯಿ ಹಾಗೂ ಊರಿನ ನಾಗರಿಕರು,ಮುಂತಾದವರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago