Crime

ಮಕ್ಕಳನ್ನು ಕಾಲುವೆಗೆ ತಳ್ಳಿದ್ದು ತಾಯಿಯಲ್ಲ ತಂದೆ; ಮಕ್ಕಳ ದುರಂತ ಅಂತ್ಯದ ಪ್ರಕರಣಕ್ಕೆ ಟ್ವಿಸ್ಟ್!

ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿತ್ತು. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ಲಿಂಗರಾಜ ಭಜಂತ್ರಿ (5), ರಕ್ಷಾ ಲಿಂಗಗರಾಜ ಭಜಂತ್ರಿ (3), ಹಸನ್ ಲಿಂಗರಾಜ ಭಜಂತ್ರಿ ಹಾಗೂ ಹುಸೇನ್ ಲಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳೀಯರು ಕಾಪಾಡಿದ್ದಾರೆ. ಆದ್ರೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹೌದು ಆರೋಪಿ ಲಿಂಗರಾಜು ನಾಟಕಕ್ಕೆ ತನು, ರಕ್ಷಾ, ಹಸೇನ್‌, ಹುಸೇನ್‌ ಮಕ್ಕಳು ದುರಂತ ಸಾವು ಕಂಡಿವೆ. ಲಿಂಗರಾಜು ಪತ್ನಿ ಭಾಗ್ಯ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದ ಘಟನೆಯನ್ನು ಸಂಬಂಧಿಕರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವೇಳೆ ಆಕೆಯ ಪತಿ ನಿಜ ಬಣ್ಣ ಬಯಲಾಗಿದೆ.

ಮಹಿಳೆ ಎಳೆಎಳೆಯಾಗಿ ಬಿಚ್ಚಿಟ್ಟ ವಿಚಾರ?
ಮನೆಯಲ್ಲಿ ಸಾಯೋಣ ಅಂತ ಮೂರು ದಿನದ ಹಿಂದೆ ನನ್ನ ಪತಿ ಲಿಂಗರಾಜು ವಿಷ ತಂದು ಇಟ್ಟಿದ್ದ. ಮಕ್ಕಳಿಗೆ ವಿಷ ಕುಡಿಸಿದ್ದ. ಮನೆಯಲ್ಲಿ ಸಂಪೂರ್ಣ ವಿಷ ತೆಗೆದುಕೊಂಡರೆ ಎಲ್ಲರಿಗೂ ಗೊತ್ತಾಗುತ್ತದೆ ಅಂತಾ ಹೊರಗಡೆ ಕರೆದುಕೊಂಡು ಬಂದ. ನಂತರ ಕಾಲುವೆ ಹತ್ತಿರ ಬಂದು ಮೊದಲು ಎರಡು ಮಕ್ಕಳನ್ನು ತಳ್ಳಿದ. ತದನಂತರ ಎರಡು ಮಕ್ಕಳು ಮತ್ತು ನನ್ನನ್ನು ಕಾಲುವೆಗೆ ದೂಡಿದ. ನನ್ನ ಗಂಡನನ್ನು ತುಂಬಾ ನಂಬಿದ್ದೆ. ದೇವರಿಗಿಂತ ಹೆಚ್ಚು ನಂಬಿದ್ದೆ. ಆದರೆ, ಅವನು ನನಗೆ ಮೋಸ ಮಾಡಿಬಿಟ್ಟ ಎಂದು ಮಹಿಳೆ ಕಣ್ಣೀರಿಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

5 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

4 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago