ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿತ್ತು. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ಲಿಂಗರಾಜ ಭಜಂತ್ರಿ (5), ರಕ್ಷಾ ಲಿಂಗಗರಾಜ ಭಜಂತ್ರಿ (3), ಹಸನ್ ಲಿಂಗರಾಜ ಭಜಂತ್ರಿ ಹಾಗೂ ಹುಸೇನ್ ಲಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳೀಯರು ಕಾಪಾಡಿದ್ದಾರೆ. ಆದ್ರೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.
ಹೌದು ಆರೋಪಿ ಲಿಂಗರಾಜು ನಾಟಕಕ್ಕೆ ತನು, ರಕ್ಷಾ, ಹಸೇನ್, ಹುಸೇನ್ ಮಕ್ಕಳು ದುರಂತ ಸಾವು ಕಂಡಿವೆ. ಲಿಂಗರಾಜು ಪತ್ನಿ ಭಾಗ್ಯ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದ ಘಟನೆಯನ್ನು ಸಂಬಂಧಿಕರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವೇಳೆ ಆಕೆಯ ಪತಿ ನಿಜ ಬಣ್ಣ ಬಯಲಾಗಿದೆ.
ಮಹಿಳೆ ಎಳೆಎಳೆಯಾಗಿ ಬಿಚ್ಚಿಟ್ಟ ವಿಚಾರ?
ಮನೆಯಲ್ಲಿ ಸಾಯೋಣ ಅಂತ ಮೂರು ದಿನದ ಹಿಂದೆ ನನ್ನ ಪತಿ ಲಿಂಗರಾಜು ವಿಷ ತಂದು ಇಟ್ಟಿದ್ದ. ಮಕ್ಕಳಿಗೆ ವಿಷ ಕುಡಿಸಿದ್ದ. ಮನೆಯಲ್ಲಿ ಸಂಪೂರ್ಣ ವಿಷ ತೆಗೆದುಕೊಂಡರೆ ಎಲ್ಲರಿಗೂ ಗೊತ್ತಾಗುತ್ತದೆ ಅಂತಾ ಹೊರಗಡೆ ಕರೆದುಕೊಂಡು ಬಂದ. ನಂತರ ಕಾಲುವೆ ಹತ್ತಿರ ಬಂದು ಮೊದಲು ಎರಡು ಮಕ್ಕಳನ್ನು ತಳ್ಳಿದ. ತದನಂತರ ಎರಡು ಮಕ್ಕಳು ಮತ್ತು ನನ್ನನ್ನು ಕಾಲುವೆಗೆ ದೂಡಿದ. ನನ್ನ ಗಂಡನನ್ನು ತುಂಬಾ ನಂಬಿದ್ದೆ. ದೇವರಿಗಿಂತ ಹೆಚ್ಚು ನಂಬಿದ್ದೆ. ಆದರೆ, ಅವನು ನನಗೆ ಮೋಸ ಮಾಡಿಬಿಟ್ಟ ಎಂದು ಮಹಿಳೆ ಕಣ್ಣೀರಿಟ್ಟಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…