Crime

ಮಕ್ಕಳನ್ನು ಕಾಲುವೆಗೆ ತಳ್ಳಿದ್ದು ತಾಯಿಯಲ್ಲ ತಂದೆ; ಮಕ್ಕಳ ದುರಂತ ಅಂತ್ಯದ ಪ್ರಕರಣಕ್ಕೆ ಟ್ವಿಸ್ಟ್!

ನಾಲ್ಕು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿತ್ತು. ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ಲಿಂಗರಾಜ ಭಜಂತ್ರಿ (5), ರಕ್ಷಾ ಲಿಂಗಗರಾಜ ಭಜಂತ್ರಿ (3), ಹಸನ್ ಲಿಂಗರಾಜ ಭಜಂತ್ರಿ ಹಾಗೂ ಹುಸೇನ್ ಲಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳೀಯರು ಕಾಪಾಡಿದ್ದಾರೆ. ಆದ್ರೆ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ಹೌದು ಆರೋಪಿ ಲಿಂಗರಾಜು ನಾಟಕಕ್ಕೆ ತನು, ರಕ್ಷಾ, ಹಸೇನ್‌, ಹುಸೇನ್‌ ಮಕ್ಕಳು ದುರಂತ ಸಾವು ಕಂಡಿವೆ. ಲಿಂಗರಾಜು ಪತ್ನಿ ಭಾಗ್ಯ ಅಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಡೆದ ಘಟನೆಯನ್ನು ಸಂಬಂಧಿಕರ ಮುಂದೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಈ ವೇಳೆ ಆಕೆಯ ಪತಿ ನಿಜ ಬಣ್ಣ ಬಯಲಾಗಿದೆ.

ಮಹಿಳೆ ಎಳೆಎಳೆಯಾಗಿ ಬಿಚ್ಚಿಟ್ಟ ವಿಚಾರ?
ಮನೆಯಲ್ಲಿ ಸಾಯೋಣ ಅಂತ ಮೂರು ದಿನದ ಹಿಂದೆ ನನ್ನ ಪತಿ ಲಿಂಗರಾಜು ವಿಷ ತಂದು ಇಟ್ಟಿದ್ದ. ಮಕ್ಕಳಿಗೆ ವಿಷ ಕುಡಿಸಿದ್ದ. ಮನೆಯಲ್ಲಿ ಸಂಪೂರ್ಣ ವಿಷ ತೆಗೆದುಕೊಂಡರೆ ಎಲ್ಲರಿಗೂ ಗೊತ್ತಾಗುತ್ತದೆ ಅಂತಾ ಹೊರಗಡೆ ಕರೆದುಕೊಂಡು ಬಂದ. ನಂತರ ಕಾಲುವೆ ಹತ್ತಿರ ಬಂದು ಮೊದಲು ಎರಡು ಮಕ್ಕಳನ್ನು ತಳ್ಳಿದ. ತದನಂತರ ಎರಡು ಮಕ್ಕಳು ಮತ್ತು ನನ್ನನ್ನು ಕಾಲುವೆಗೆ ದೂಡಿದ. ನನ್ನ ಗಂಡನನ್ನು ತುಂಬಾ ನಂಬಿದ್ದೆ. ದೇವರಿಗಿಂತ ಹೆಚ್ಚು ನಂಬಿದ್ದೆ. ಆದರೆ, ಅವನು ನನಗೆ ಮೋಸ ಮಾಡಿಬಿಟ್ಟ ಎಂದು ಮಹಿಳೆ ಕಣ್ಣೀರಿಟ್ಟಿದ್ದಾರೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

21 minutes ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

7 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

7 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago