ಜೈಪುರ, ಜುಲೈ 9: ರಾಜಸ್ಥಾನದ ಚುರು ಜಿಲ್ಲೆಯಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದ್ದು, ಭಾರತೀಯ ವಾಯುಪಡೆಯ ಜಾಗ್ವಾರ್ ಯುದ್ಧವಿಮಾನವೊಂದು ಭನೋಡ್ ಪ್ರದೇಶದಲ್ಲಿ ಪತನವಾಗಿದೆ. ಈ ದುರಂತದಲ್ಲಿ ಇಬ್ಬರು ಪೈಲಟ್ಗಳು ದುರ್ಮರಣ ಹೊಂದಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ತಿಳಿಸಿದೆ.
ಪತನವಾದ ನಂತರ ವಿಮಾನದಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಸ್ಥಳದಲ್ಲಿ ಬೆಂಕಿ ಉಂಟಾಗಿದೆ. ಸ್ಥಳೀಯರು ನೀಡಿದ ಮಾಹಿತಿಯಿಂದಾಗಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ತಕ್ಷಣವೇ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಕ್ಕಪಕ್ಕದ ಪ್ರದೇಶದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಕ್ರಮ ಕೈಗೊಳ್ಳಲಾಗಿದೆ.
ವಿಮಾನ ಯಾವ ಸಂದರ್ಭದಲ್ಲಿ, ಏನು ಕಾರಣದಿಂದ ಪತನಗೊಂಡಿತೆಂಬ ಬಗ್ಗೆ ನಿಖರ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ವಿಮಾನ ಪತನದ ಪರಿಣಾಮವಾಗಿ ಸ್ಥಳದಲ್ಲಿ ಆಸ್ತಿ ನಷ್ಟ ಸಂಭವಿಸಿರುವ ಸಾಧ್ಯತೆಯೂ ಇದ್ದು, ಹೆಚ್ಚಿನ ಮಾಹಿತಿಗಾಗಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಈ ಕುರಿತು ವಾಯುಪಡೆಯಿಂದ ಅಧಿಕೃತ ಪ್ರೆಸ್ ನೋಟ ನಿರೀಕ್ಷಿಸಲಾಗುತ್ತಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…