ಸೂರತ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈನ ಸನ್ಯಾಸಿಯೊಬ್ಬರಿಗೆ ಸೂರತ್ ಸೆಷನ್ಸ್ ಕೋರ್ಟ್ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಾಂತಿಸಾಗರ್ಜಿ ಮಹಾರಾಜ್ ಎಂಬ ಜೈನ ಮುನಿ, ಇದೀಗ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಬಂಧನದಲ್ಲಿರುವುದು ಖಚಿತವಾಗಿದೆ.
ಈ ಘಟನೆ 7 ವರ್ಷಗಳ ಹಿಂದೆ ಸಂಭವಿಸಿದ್ದು, ತಾಯಿ, ತಂದೆ ಮತ್ತು ಅಣ್ಣನೊಂದಿಗೆ ಯುವತಿ ಮಹಾವೀರ ದಿಗಂಬರ್ ಜೈನ ದೇವಸ್ಥಾನಕ್ಕೆ ಆಗಮಿಸಿದ್ದಳು. ನಂತರ ಕುಟುಂಬಸ್ಥರು ಜೈನ ಧರ್ಮಶಾಲೆಯಲ್ಲಿ ತಂಗಿದ್ದರು. ಇದೇ ಸಂದರ್ಭ ಶಾಂತಿಸಾಗರ್ಜಿ, ಯುವತಿಯ ತಂದೆ ಮತ್ತು ಅಣ್ಣನನ್ನು ಬೇರೆ ಕೊಠಡಿಯಲ್ಲಿ ಕೂರಿಸಿ, “ಮಂತ್ರ ಪಠಿಸುವಂತೆ” ಎಂಬ ನೆಪದಲ್ಲಿ ಯುವತಿಯಿದ್ದ ಕೋಣೆಗೆ ಪ್ರವೇಶಿಸಿದ್ದರು. ಆಕೆಯ ವಿರೋಧವನ್ನೆಲ್ಲಾ ಮೀರಿ, “ಇದನ್ನು ಒಪ್ಪಿಕೊಳ್ಳದಿದ್ದರೆ ನಿಮ್ಮ ಕುಟುಂಬಕ್ಕೆ ಬರುವ ಅನಿಷ್ಠ” ಎಂಬ ಬೆದರಿಕೆಯಿಂದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಘಟನೆ ಬಳಿಕ ಆತಂಕಗೊಂಡ ಯುವತಿ, ಧೈರ್ಯವಾಗಿ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದಳು. ಪ್ರಕರಣದ ತನಿಖೆ ಆರಂಭವಾಗಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗೆ ನ್ಯಾಯಾಲಯದ ಮೂಲಕ ದಂಡನೆ ವಿಧಿಸಲಾಗಿದೆ. ಅರ್ಜಿದಾರರ ಪರವಾಗಿ ಜೀವಾವಧಿ ಶಿಕ್ಷೆ ವಿಧಿಸುವಂತೆ ಕೋರಲಾಗಿದ್ದರೂ, ಎಲ್ಲಾ ದಳ್ತಾಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಶಾಂತಿಸಾಗರ್ಜಿ ಮಹಾರಾಜ್ಗೆ 10 ವರ್ಷಗಳ ಜೈಲು ಶಿಕ್ಷೆ ನೀಡಿದೆ.
ಈ ತೀರ್ಪು, ಧಾರ್ಮಿಕವೇಷದ ಹಿಂದೆ ದುಷ್ಕೃತ್ಯಗಳಿಗೆ ಆಸ್ಪದವಿಲ್ಲ ಎಂಬ ಪಾಠವನ್ನು ಸಮಾಜಕ್ಕೆ ಕಲಿಸುತ್ತಿದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…