ಸೂರತ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈನ ಸನ್ಯಾಸಿಯೊಬ್ಬರಿಗೆ ಸೂರತ್ ಸೆಷನ್ಸ್ ಕೋರ್ಟ್ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಾಂತಿಸಾಗರ್ಜಿ ಮಹಾರಾಜ್ ಎಂಬ ಜೈನ ಮುನಿ, ಇದೀಗ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಬಂಧನದಲ್ಲಿರುವುದು ಖಚಿತವಾಗಿದೆ.
ಈ ಘಟನೆ 7 ವರ್ಷಗಳ ಹಿಂದೆ ಸಂಭವಿಸಿದ್ದು, ತಾಯಿ, ತಂದೆ ಮತ್ತು ಅಣ್ಣನೊಂದಿಗೆ ಯುವತಿ ಮಹಾವೀರ ದಿಗಂಬರ್ ಜೈನ ದೇವಸ್ಥಾನಕ್ಕೆ ಆಗಮಿಸಿದ್ದಳು. ನಂತರ ಕುಟುಂಬಸ್ಥರು ಜೈನ ಧರ್ಮಶಾಲೆಯಲ್ಲಿ ತಂಗಿದ್ದರು. ಇದೇ ಸಂದರ್ಭ ಶಾಂತಿಸಾಗರ್ಜಿ, ಯುವತಿಯ ತಂದೆ ಮತ್ತು ಅಣ್ಣನನ್ನು ಬೇರೆ ಕೊಠಡಿಯಲ್ಲಿ ಕೂರಿಸಿ, “ಮಂತ್ರ ಪಠಿಸುವಂತೆ” ಎಂಬ ನೆಪದಲ್ಲಿ ಯುವತಿಯಿದ್ದ ಕೋಣೆಗೆ ಪ್ರವೇಶಿಸಿದ್ದರು. ಆಕೆಯ ವಿರೋಧವನ್ನೆಲ್ಲಾ ಮೀರಿ, “ಇದನ್ನು ಒಪ್ಪಿಕೊಳ್ಳದಿದ್ದರೆ ನಿಮ್ಮ ಕುಟುಂಬಕ್ಕೆ ಬರುವ ಅನಿಷ್ಠ” ಎಂಬ ಬೆದರಿಕೆಯಿಂದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
ಘಟನೆ ಬಳಿಕ ಆತಂಕಗೊಂಡ ಯುವತಿ, ಧೈರ್ಯವಾಗಿ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದಳು. ಪ್ರಕರಣದ ತನಿಖೆ ಆರಂಭವಾಗಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗೆ ನ್ಯಾಯಾಲಯದ ಮೂಲಕ ದಂಡನೆ ವಿಧಿಸಲಾಗಿದೆ. ಅರ್ಜಿದಾರರ ಪರವಾಗಿ ಜೀವಾವಧಿ ಶಿಕ್ಷೆ ವಿಧಿಸುವಂತೆ ಕೋರಲಾಗಿದ್ದರೂ, ಎಲ್ಲಾ ದಳ್ತಾಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಶಾಂತಿಸಾಗರ್ಜಿ ಮಹಾರಾಜ್ಗೆ 10 ವರ್ಷಗಳ ಜೈಲು ಶಿಕ್ಷೆ ನೀಡಿದೆ.
ಈ ತೀರ್ಪು, ಧಾರ್ಮಿಕವೇಷದ ಹಿಂದೆ ದುಷ್ಕೃತ್ಯಗಳಿಗೆ ಆಸ್ಪದವಿಲ್ಲ ಎಂಬ ಪಾಠವನ್ನು ಸಮಾಜಕ್ಕೆ ಕಲಿಸುತ್ತಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…