Latest

ಅತ್ಯಾಚಾರ ಪ್ರಕರಣದಲ್ಲಿ ಜೈನ ಮುನಿಗೆ 10 ವರ್ಷ ಜೈಲು ಶಿಕ್ಷೆ.

ಸೂರತ್: 19 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೈನ ಸನ್ಯಾಸಿಯೊಬ್ಬರಿಗೆ ಸೂರತ್ ಸೆಷನ್ಸ್ ಕೋರ್ಟ್ 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಶಾಂತಿಸಾಗರ್‌ಜಿ ಮಹಾರಾಜ್ ಎಂಬ ಜೈನ ಮುನಿ, ಇದೀಗ ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ಬಂಧನದಲ್ಲಿರುವುದು ಖಚಿತವಾಗಿದೆ.

ಈ ಘಟನೆ 7 ವರ್ಷಗಳ ಹಿಂದೆ ಸಂಭವಿಸಿದ್ದು, ತಾಯಿ, ತಂದೆ ಮತ್ತು ಅಣ್ಣನೊಂದಿಗೆ ಯುವತಿ ಮಹಾವೀರ ದಿಗಂಬರ್ ಜೈನ ದೇವಸ್ಥಾನಕ್ಕೆ ಆಗಮಿಸಿದ್ದಳು. ನಂತರ ಕುಟುಂಬಸ್ಥರು ಜೈನ ಧರ್ಮಶಾಲೆಯಲ್ಲಿ ತಂಗಿದ್ದರು. ಇದೇ ಸಂದರ್ಭ ಶಾಂತಿಸಾಗರ್‌ಜಿ, ಯುವತಿಯ ತಂದೆ ಮತ್ತು ಅಣ್ಣನನ್ನು ಬೇರೆ ಕೊಠಡಿಯಲ್ಲಿ ಕೂರಿಸಿ, “ಮಂತ್ರ ಪಠಿಸುವಂತೆ” ಎಂಬ ನೆಪದಲ್ಲಿ ಯುವತಿಯಿದ್ದ ಕೋಣೆಗೆ ಪ್ರವೇಶಿಸಿದ್ದರು. ಆಕೆಯ ವಿರೋಧವನ್ನೆಲ್ಲಾ ಮೀರಿ, “ಇದನ್ನು ಒಪ್ಪಿಕೊಳ್ಳದಿದ್ದರೆ ನಿಮ್ಮ ಕುಟುಂಬಕ್ಕೆ ಬರುವ ಅನಿಷ್ಠ” ಎಂಬ ಬೆದರಿಕೆಯಿಂದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.

ಘಟನೆ ಬಳಿಕ ಆತಂಕಗೊಂಡ ಯುವತಿ, ಧೈರ್ಯವಾಗಿ ಪೊಲೀಸ್ ಠಾಣೆಗೆ ಹೋಗಿ ಪ್ರಕರಣ ದಾಖಲಿಸಿದ್ದಳು. ಪ್ರಕರಣದ ತನಿಖೆ ಆರಂಭವಾಗಿ, ಸಾಕ್ಷ್ಯಾಧಾರಗಳ ಆಧಾರದಲ್ಲಿ ಆರೋಪಿಗೆ ನ್ಯಾಯಾಲಯದ ಮೂಲಕ ದಂಡನೆ ವಿಧಿಸಲಾಗಿದೆ. ಅರ್ಜಿದಾರರ ಪರವಾಗಿ ಜೀವಾವಧಿ ಶಿಕ್ಷೆ ವಿಧಿಸುವಂತೆ ಕೋರಲಾಗಿದ್ದರೂ, ಎಲ್ಲಾ ದಳ್ತಾಂಶಗಳನ್ನು ಪರಿಗಣಿಸಿದ ನ್ಯಾಯಾಲಯ ಶಾಂತಿಸಾಗರ್‌ಜಿ ಮಹಾರಾಜ್‌ಗೆ 10 ವರ್ಷಗಳ ಜೈಲು ಶಿಕ್ಷೆ ನೀಡಿದೆ.

ಈ ತೀರ್ಪು, ಧಾರ್ಮಿಕವೇಷದ ಹಿಂದೆ ದುಷ್ಕೃತ್ಯಗಳಿಗೆ ಆಸ್ಪದವಿಲ್ಲ ಎಂಬ ಪಾಠವನ್ನು ಸಮಾಜಕ್ಕೆ ಕಲಿಸುತ್ತಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

8 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

8 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

8 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

8 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago