Corruption

ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಳಪೆ ಕಾಮಗಾರಿ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ತೀರಾ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ.
ರಸ್ತೆ ಬದಿಯಲ್ಲಿ ಅಗೆದು ಪೈಪುಗಳನ್ನು ಹಾಕಿದ್ದಾರೆ ಆದರೆ ಅಗೆದ ನೆಲವನ್ನು ಸರಿಯಾಗಿ ಮುಚ್ಚದೆ ಕಾಟಾಚಾರಕ್ಕೆ ಮುಚ್ಚಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಾಕಷ್ಟು ವಾಹನಗಳು ಇದರಲ್ಲಿ ಸಿಲುಕಿಕೊಂಡು ಒದ್ದಾಡಿವೆ. ಅಷ್ಟೇ ಅಲ್ಲದೆ ಲಾರಿ ಸಿಲುಕಿ ಈ ಮುಂಚೆ ಹಾಕಿರುವ ಪೈಪುಗಳು ಕೂಡ ಒಡೆದು ಹೋಗಿ ನೀರು ರಸ್ತೆಗೆ ಬರುತ್ತಿದೆ. ಆದರೂ ಸಹ ಯಾವೊಬ್ಬ ಅಧಿಕಾರಿಯೂ ಇತ್ತ ಕಡೆ ಗಮನ ಹರಿಸಿಲ್ಲ. ಸಣ್ಣ ಪ್ರಮಾಣದ ವಾಹನಗಳು ಇದರಲ್ಲಿ ಸಿಲುಕಿಕೊಂಡು ನಂತರ ಟ್ರ್ಯಾಕ್ಟರ್ ಗಳಿಂದ ಅವುಗಳನ್ನು ತೆಗೆಯುವಂತಹ ಪ್ರಯತ್ನಗಳು ಕೂಡ ಸಾಕಷ್ಟಾಗಿವೆ.
ಕೆಲವೊಂದು ಕಡೆ ನಳಗಳನ್ನು ಸರಿಯಾಗಿ ಜೋಡಿಸದೆ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ತಮಗೆ ಇಷ್ಟ ಬಂದಂತೆ ನಳಗಳನ್ನು ಜೋಡಿಸಿ ಒಂದೇ ದಿನದಲ್ಲಿ ನಳಗಳಿಗೆ ಹಾಕಿರುವ ಕಾಂಕ್ರಿಟ್ ಕಿತ್ತು ಹೋಗಿವೆ. ಅಷ್ಟೇ ಅಲ್ಲದೆ ನಳಗಳನ್ನು ಜೋಡಿಸಿ ಇನ್ನೂ ಒಂದು ತಿಂಗಳಾಗಿಲ್ಲ ಆಗಲೇ ತುಕ್ಕು ಹಿಡಿಯುತ್ತಿವೆ. ಇಷ್ಟರ ಮೇಲೆ ನೀವೇ ಯೋಚಿಸಿ ಇದರಲ್ಲಿ ಎಷ್ಟರ ಮಟ್ಟದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು. ಒಟ್ಟಾರೆಯಾಗಿ ಈ ಕಾಮಗಾರಿ ತಳ ಬುಡವಿಲ್ಲದಂತೆ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
ಈ ಕಾಮಗಾರಿಯಿಂದ ಇಲ್ಲಿಯ ಹಳ್ಳಿಯ ಜನರು ಸಾಕಷ್ಟು ಹೈರಾಣಾಗಿದ್ದು ಈ ಜಲ ಜೀವನ್ ಮಿಷನ್ ಕಾಮಗಾರಿ ನಿಂತರೆ ಸಾಕೆಂಬ ಮನಸ್ಥಿತಿಗೆ ಬಂದು ತಲುಪಿದ್ದಾರೆ.
ಇಷ್ಟೆಲ್ಲಾ ಕಳಪೆ ಕಾಮಗಾರಿ ಮೇಲ್ನೋಟಕ್ಕೆ ಕಂಡು ಬಂದಿರುವುದು ಮಾತ್ರ, ಸಂಪೂರ್ಣ ವಿವರವನ್ನು ಬಯಲಿಗೆಳೆಯುವ ಮುನ್ನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಎಚ್ಚೆತ್ತು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಇಂತಹ ಬೃಹತ್ ಮೊತ್ತದ ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು.

ವರದಿ : ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago