Corruption

ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಳಪೆ ಕಾಮಗಾರಿ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ತೀರಾ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ.
ರಸ್ತೆ ಬದಿಯಲ್ಲಿ ಅಗೆದು ಪೈಪುಗಳನ್ನು ಹಾಕಿದ್ದಾರೆ ಆದರೆ ಅಗೆದ ನೆಲವನ್ನು ಸರಿಯಾಗಿ ಮುಚ್ಚದೆ ಕಾಟಾಚಾರಕ್ಕೆ ಮುಚ್ಚಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಾಕಷ್ಟು ವಾಹನಗಳು ಇದರಲ್ಲಿ ಸಿಲುಕಿಕೊಂಡು ಒದ್ದಾಡಿವೆ. ಅಷ್ಟೇ ಅಲ್ಲದೆ ಲಾರಿ ಸಿಲುಕಿ ಈ ಮುಂಚೆ ಹಾಕಿರುವ ಪೈಪುಗಳು ಕೂಡ ಒಡೆದು ಹೋಗಿ ನೀರು ರಸ್ತೆಗೆ ಬರುತ್ತಿದೆ. ಆದರೂ ಸಹ ಯಾವೊಬ್ಬ ಅಧಿಕಾರಿಯೂ ಇತ್ತ ಕಡೆ ಗಮನ ಹರಿಸಿಲ್ಲ. ಸಣ್ಣ ಪ್ರಮಾಣದ ವಾಹನಗಳು ಇದರಲ್ಲಿ ಸಿಲುಕಿಕೊಂಡು ನಂತರ ಟ್ರ್ಯಾಕ್ಟರ್ ಗಳಿಂದ ಅವುಗಳನ್ನು ತೆಗೆಯುವಂತಹ ಪ್ರಯತ್ನಗಳು ಕೂಡ ಸಾಕಷ್ಟಾಗಿವೆ.
ಕೆಲವೊಂದು ಕಡೆ ನಳಗಳನ್ನು ಸರಿಯಾಗಿ ಜೋಡಿಸದೆ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ತಮಗೆ ಇಷ್ಟ ಬಂದಂತೆ ನಳಗಳನ್ನು ಜೋಡಿಸಿ ಒಂದೇ ದಿನದಲ್ಲಿ ನಳಗಳಿಗೆ ಹಾಕಿರುವ ಕಾಂಕ್ರಿಟ್ ಕಿತ್ತು ಹೋಗಿವೆ. ಅಷ್ಟೇ ಅಲ್ಲದೆ ನಳಗಳನ್ನು ಜೋಡಿಸಿ ಇನ್ನೂ ಒಂದು ತಿಂಗಳಾಗಿಲ್ಲ ಆಗಲೇ ತುಕ್ಕು ಹಿಡಿಯುತ್ತಿವೆ. ಇಷ್ಟರ ಮೇಲೆ ನೀವೇ ಯೋಚಿಸಿ ಇದರಲ್ಲಿ ಎಷ್ಟರ ಮಟ್ಟದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು. ಒಟ್ಟಾರೆಯಾಗಿ ಈ ಕಾಮಗಾರಿ ತಳ ಬುಡವಿಲ್ಲದಂತೆ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
ಈ ಕಾಮಗಾರಿಯಿಂದ ಇಲ್ಲಿಯ ಹಳ್ಳಿಯ ಜನರು ಸಾಕಷ್ಟು ಹೈರಾಣಾಗಿದ್ದು ಈ ಜಲ ಜೀವನ್ ಮಿಷನ್ ಕಾಮಗಾರಿ ನಿಂತರೆ ಸಾಕೆಂಬ ಮನಸ್ಥಿತಿಗೆ ಬಂದು ತಲುಪಿದ್ದಾರೆ.
ಇಷ್ಟೆಲ್ಲಾ ಕಳಪೆ ಕಾಮಗಾರಿ ಮೇಲ್ನೋಟಕ್ಕೆ ಕಂಡು ಬಂದಿರುವುದು ಮಾತ್ರ, ಸಂಪೂರ್ಣ ವಿವರವನ್ನು ಬಯಲಿಗೆಳೆಯುವ ಮುನ್ನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಎಚ್ಚೆತ್ತು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಇಂತಹ ಬೃಹತ್ ಮೊತ್ತದ ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು.

ವರದಿ : ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago