Corruption

ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಳಪೆ ಕಾಮಗಾರಿ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ತೀರಾ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ.
ರಸ್ತೆ ಬದಿಯಲ್ಲಿ ಅಗೆದು ಪೈಪುಗಳನ್ನು ಹಾಕಿದ್ದಾರೆ ಆದರೆ ಅಗೆದ ನೆಲವನ್ನು ಸರಿಯಾಗಿ ಮುಚ್ಚದೆ ಕಾಟಾಚಾರಕ್ಕೆ ಮುಚ್ಚಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಾಕಷ್ಟು ವಾಹನಗಳು ಇದರಲ್ಲಿ ಸಿಲುಕಿಕೊಂಡು ಒದ್ದಾಡಿವೆ. ಅಷ್ಟೇ ಅಲ್ಲದೆ ಲಾರಿ ಸಿಲುಕಿ ಈ ಮುಂಚೆ ಹಾಕಿರುವ ಪೈಪುಗಳು ಕೂಡ ಒಡೆದು ಹೋಗಿ ನೀರು ರಸ್ತೆಗೆ ಬರುತ್ತಿದೆ. ಆದರೂ ಸಹ ಯಾವೊಬ್ಬ ಅಧಿಕಾರಿಯೂ ಇತ್ತ ಕಡೆ ಗಮನ ಹರಿಸಿಲ್ಲ. ಸಣ್ಣ ಪ್ರಮಾಣದ ವಾಹನಗಳು ಇದರಲ್ಲಿ ಸಿಲುಕಿಕೊಂಡು ನಂತರ ಟ್ರ್ಯಾಕ್ಟರ್ ಗಳಿಂದ ಅವುಗಳನ್ನು ತೆಗೆಯುವಂತಹ ಪ್ರಯತ್ನಗಳು ಕೂಡ ಸಾಕಷ್ಟಾಗಿವೆ.
ಕೆಲವೊಂದು ಕಡೆ ನಳಗಳನ್ನು ಸರಿಯಾಗಿ ಜೋಡಿಸದೆ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ತಮಗೆ ಇಷ್ಟ ಬಂದಂತೆ ನಳಗಳನ್ನು ಜೋಡಿಸಿ ಒಂದೇ ದಿನದಲ್ಲಿ ನಳಗಳಿಗೆ ಹಾಕಿರುವ ಕಾಂಕ್ರಿಟ್ ಕಿತ್ತು ಹೋಗಿವೆ. ಅಷ್ಟೇ ಅಲ್ಲದೆ ನಳಗಳನ್ನು ಜೋಡಿಸಿ ಇನ್ನೂ ಒಂದು ತಿಂಗಳಾಗಿಲ್ಲ ಆಗಲೇ ತುಕ್ಕು ಹಿಡಿಯುತ್ತಿವೆ. ಇಷ್ಟರ ಮೇಲೆ ನೀವೇ ಯೋಚಿಸಿ ಇದರಲ್ಲಿ ಎಷ್ಟರ ಮಟ್ಟದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು. ಒಟ್ಟಾರೆಯಾಗಿ ಈ ಕಾಮಗಾರಿ ತಳ ಬುಡವಿಲ್ಲದಂತೆ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
ಈ ಕಾಮಗಾರಿಯಿಂದ ಇಲ್ಲಿಯ ಹಳ್ಳಿಯ ಜನರು ಸಾಕಷ್ಟು ಹೈರಾಣಾಗಿದ್ದು ಈ ಜಲ ಜೀವನ್ ಮಿಷನ್ ಕಾಮಗಾರಿ ನಿಂತರೆ ಸಾಕೆಂಬ ಮನಸ್ಥಿತಿಗೆ ಬಂದು ತಲುಪಿದ್ದಾರೆ.
ಇಷ್ಟೆಲ್ಲಾ ಕಳಪೆ ಕಾಮಗಾರಿ ಮೇಲ್ನೋಟಕ್ಕೆ ಕಂಡು ಬಂದಿರುವುದು ಮಾತ್ರ, ಸಂಪೂರ್ಣ ವಿವರವನ್ನು ಬಯಲಿಗೆಳೆಯುವ ಮುನ್ನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಎಚ್ಚೆತ್ತು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಇಂತಹ ಬೃಹತ್ ಮೊತ್ತದ ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು.

ವರದಿ : ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago