Corruption

ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಳಪೆ ಕಾಮಗಾರಿ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ತೀರಾ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ.
ರಸ್ತೆ ಬದಿಯಲ್ಲಿ ಅಗೆದು ಪೈಪುಗಳನ್ನು ಹಾಕಿದ್ದಾರೆ ಆದರೆ ಅಗೆದ ನೆಲವನ್ನು ಸರಿಯಾಗಿ ಮುಚ್ಚದೆ ಕಾಟಾಚಾರಕ್ಕೆ ಮುಚ್ಚಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಾಕಷ್ಟು ವಾಹನಗಳು ಇದರಲ್ಲಿ ಸಿಲುಕಿಕೊಂಡು ಒದ್ದಾಡಿವೆ. ಅಷ್ಟೇ ಅಲ್ಲದೆ ಲಾರಿ ಸಿಲುಕಿ ಈ ಮುಂಚೆ ಹಾಕಿರುವ ಪೈಪುಗಳು ಕೂಡ ಒಡೆದು ಹೋಗಿ ನೀರು ರಸ್ತೆಗೆ ಬರುತ್ತಿದೆ. ಆದರೂ ಸಹ ಯಾವೊಬ್ಬ ಅಧಿಕಾರಿಯೂ ಇತ್ತ ಕಡೆ ಗಮನ ಹರಿಸಿಲ್ಲ. ಸಣ್ಣ ಪ್ರಮಾಣದ ವಾಹನಗಳು ಇದರಲ್ಲಿ ಸಿಲುಕಿಕೊಂಡು ನಂತರ ಟ್ರ್ಯಾಕ್ಟರ್ ಗಳಿಂದ ಅವುಗಳನ್ನು ತೆಗೆಯುವಂತಹ ಪ್ರಯತ್ನಗಳು ಕೂಡ ಸಾಕಷ್ಟಾಗಿವೆ.
ಕೆಲವೊಂದು ಕಡೆ ನಳಗಳನ್ನು ಸರಿಯಾಗಿ ಜೋಡಿಸದೆ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ತಮಗೆ ಇಷ್ಟ ಬಂದಂತೆ ನಳಗಳನ್ನು ಜೋಡಿಸಿ ಒಂದೇ ದಿನದಲ್ಲಿ ನಳಗಳಿಗೆ ಹಾಕಿರುವ ಕಾಂಕ್ರಿಟ್ ಕಿತ್ತು ಹೋಗಿವೆ. ಅಷ್ಟೇ ಅಲ್ಲದೆ ನಳಗಳನ್ನು ಜೋಡಿಸಿ ಇನ್ನೂ ಒಂದು ತಿಂಗಳಾಗಿಲ್ಲ ಆಗಲೇ ತುಕ್ಕು ಹಿಡಿಯುತ್ತಿವೆ. ಇಷ್ಟರ ಮೇಲೆ ನೀವೇ ಯೋಚಿಸಿ ಇದರಲ್ಲಿ ಎಷ್ಟರ ಮಟ್ಟದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು. ಒಟ್ಟಾರೆಯಾಗಿ ಈ ಕಾಮಗಾರಿ ತಳ ಬುಡವಿಲ್ಲದಂತೆ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
ಈ ಕಾಮಗಾರಿಯಿಂದ ಇಲ್ಲಿಯ ಹಳ್ಳಿಯ ಜನರು ಸಾಕಷ್ಟು ಹೈರಾಣಾಗಿದ್ದು ಈ ಜಲ ಜೀವನ್ ಮಿಷನ್ ಕಾಮಗಾರಿ ನಿಂತರೆ ಸಾಕೆಂಬ ಮನಸ್ಥಿತಿಗೆ ಬಂದು ತಲುಪಿದ್ದಾರೆ.
ಇಷ್ಟೆಲ್ಲಾ ಕಳಪೆ ಕಾಮಗಾರಿ ಮೇಲ್ನೋಟಕ್ಕೆ ಕಂಡು ಬಂದಿರುವುದು ಮಾತ್ರ, ಸಂಪೂರ್ಣ ವಿವರವನ್ನು ಬಯಲಿಗೆಳೆಯುವ ಮುನ್ನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಎಚ್ಚೆತ್ತು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಇಂತಹ ಬೃಹತ್ ಮೊತ್ತದ ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು.

ವರದಿ : ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

9 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

14 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

14 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

14 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

14 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

19 hours ago