Latest

ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.!

ಮುಂಡಗೋಡ: ತಾಲೂಕಿನ ಮಳಗಿ ಹತ್ತಿರದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿಯವರು ಭೇಟಿ ನೀಡಿ ಚರ್ಚಿಸಿದರು.


ಹೊಸದಾಗಿ ಆಯ್ಕೆಯಾದ ಪಾಲಕ ಶಿಕ್ಷಕ ಸಮಿತಿಯ (PTC) ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರಿಗೆ ಕರೆ ಮಾಡಿ ವಿದ್ಯಾಲಯಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಕೇಳಿಕೊಂಡಿದ್ದರು. ಈ ವಿಷಯವಾಗಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರು ಇಂದು ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ಭೇಟಿ ನೀಡಿ ಶೈಕ್ಷಣಿಕ ವಿಚಾರಗಳ ಕುರಿತು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು .
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಈ ನವೋದಯ ವಿದ್ಯಾಲಯವು ಸುಮಾರು 35 ವರ್ಷಗಳ ಹಿಂದೆ ಪ್ರಾರಂಭಗೊಂಡಿದ್ದು ಅಂದು ನಿರ್ಮಾಣಗೊಂಡಿರುವ ಕೊಠಡಿಗಳು ಹಾಗೂ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಮೇಲ್ಚಾವಣಿ ಶಿಥಿಲಗೊಂಡು ಮಳೆಗಾಲದಲ್ಲಿ ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತೀದೆ.ಹಾಗಾಗಿ ಸದ್ಯ ಅವುಗಳಿಗೆ ತಗಡಿನ ಶೆಡ್ ನಿರ್ಮಾಣ ಮಾಡುವಂತೆ ಹಾಗೂ ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರಿನ ಸಮಸ್ಯೆ ಆಗುತ್ತಿದೆ ,ಬಾಲಕರ ಶೌಚಾಲಯಗಳು ಅವ್ಯವಸ್ಥೆಯಿಂದ ಕೂಡಿದ್ದುಇವುಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ಹಾಗೂ ಸದಸ್ಯರು ವಿಧಾನಪರಿಷತ್ ಸದಸ್ಯರ ಬಳಿ ಮನವಿ ಪತ್ರ ನೀಡುವುದರೊಂದಿಗೆ ವಿನಂತಿಸಿಕೊಂಡರು.ಹಾಗೂ ತಮ್ಮ ಅನುದಾನದಲ್ಲಿ ಸಭಾಹಾಲ್ ನಿರ್ಮಾಣ ಮಾಡಿಕೊಡುವಂತೆ ಕೇಳಿಕೊಂಡರು.ಎಲ್ಲ ಸಮಸ್ಯೆಗಳನ್ನು ಆಲಿಸಿದ ಎಂಎಲ್ಸಿ ಅವರು ಈ ವಿಷಯಗಳ ಕುರಿತು ,ಜಿಲ್ಲೆಯ ಉಸ್ತುವಾರಿ ಮಂತ್ರಿಗಳೊಂದಿಗೆ,ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರೊಂದಿಗೆ,ಜಿಲ್ಲಾಧಿಕಾರಿಗಳೊಂದಿಗೆ,ತಹಸಿಲ್ದಾರ ಅವರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುವ. ಪ್ರಯತ್ನ ಮಾಡುತ್ತೇನೆ ಎಂದರು.ಹಾಗೂ ಜಿಲ್ಲಾಧಿಕಾರಿಗಳಿಗೆ ಖುದ್ದು ಭೇಟಿಕೊಡಲು ತಿಳಿಸುತ್ತೇನೆ ಎಂದು ಹೇಳಿದರು.ಮತ್ತು ಸಂದರ್ಭದಲ್ಲಿ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ, ಪ್ರಾಂಶುಪಾಲರಾದ ಜೋಶ್ ಕಿರಿಯನ್,ಉಪಪ್ರಾಂಶುಪಾಲರಾದ ಹುಬ್ಬಳ್ಳಿ ಹಾಗೂ ಪಾಲಕ ಶಿಕ್ಷಕ ಸಮಿತಿಯ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು .
ವರದಿ :ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

4 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

4 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

4 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

4 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

4 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago