Latest

ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.!

ಮುಂಡಗೋಡ: ತಾಲೂಕಿನ ಮಳಗಿ ಹತ್ತಿರದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿಯವರು ಭೇಟಿ ನೀಡಿ ಚರ್ಚಿಸಿದರು.


ಹೊಸದಾಗಿ ಆಯ್ಕೆಯಾದ ಪಾಲಕ ಶಿಕ್ಷಕ ಸಮಿತಿಯ (PTC) ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರಿಗೆ ಕರೆ ಮಾಡಿ ವಿದ್ಯಾಲಯಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಕೇಳಿಕೊಂಡಿದ್ದರು. ಈ ವಿಷಯವಾಗಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರು ಇಂದು ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ಭೇಟಿ ನೀಡಿ ಶೈಕ್ಷಣಿಕ ವಿಚಾರಗಳ ಕುರಿತು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು .
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಈ ನವೋದಯ ವಿದ್ಯಾಲಯವು ಸುಮಾರು 35 ವರ್ಷಗಳ ಹಿಂದೆ ಪ್ರಾರಂಭಗೊಂಡಿದ್ದು ಅಂದು ನಿರ್ಮಾಣಗೊಂಡಿರುವ ಕೊಠಡಿಗಳು ಹಾಗೂ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಮೇಲ್ಚಾವಣಿ ಶಿಥಿಲಗೊಂಡು ಮಳೆಗಾಲದಲ್ಲಿ ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತೀದೆ.ಹಾಗಾಗಿ ಸದ್ಯ ಅವುಗಳಿಗೆ ತಗಡಿನ ಶೆಡ್ ನಿರ್ಮಾಣ ಮಾಡುವಂತೆ ಹಾಗೂ ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರಿನ ಸಮಸ್ಯೆ ಆಗುತ್ತಿದೆ ,ಬಾಲಕರ ಶೌಚಾಲಯಗಳು ಅವ್ಯವಸ್ಥೆಯಿಂದ ಕೂಡಿದ್ದುಇವುಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ಹಾಗೂ ಸದಸ್ಯರು ವಿಧಾನಪರಿಷತ್ ಸದಸ್ಯರ ಬಳಿ ಮನವಿ ಪತ್ರ ನೀಡುವುದರೊಂದಿಗೆ ವಿನಂತಿಸಿಕೊಂಡರು.ಹಾಗೂ ತಮ್ಮ ಅನುದಾನದಲ್ಲಿ ಸಭಾಹಾಲ್ ನಿರ್ಮಾಣ ಮಾಡಿಕೊಡುವಂತೆ ಕೇಳಿಕೊಂಡರು.ಎಲ್ಲ ಸಮಸ್ಯೆಗಳನ್ನು ಆಲಿಸಿದ ಎಂಎಲ್ಸಿ ಅವರು ಈ ವಿಷಯಗಳ ಕುರಿತು ,ಜಿಲ್ಲೆಯ ಉಸ್ತುವಾರಿ ಮಂತ್ರಿಗಳೊಂದಿಗೆ,ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರೊಂದಿಗೆ,ಜಿಲ್ಲಾಧಿಕಾರಿಗಳೊಂದಿಗೆ,ತಹಸಿಲ್ದಾರ ಅವರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುವ. ಪ್ರಯತ್ನ ಮಾಡುತ್ತೇನೆ ಎಂದರು.ಹಾಗೂ ಜಿಲ್ಲಾಧಿಕಾರಿಗಳಿಗೆ ಖುದ್ದು ಭೇಟಿಕೊಡಲು ತಿಳಿಸುತ್ತೇನೆ ಎಂದು ಹೇಳಿದರು.ಮತ್ತು ಸಂದರ್ಭದಲ್ಲಿ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ, ಪ್ರಾಂಶುಪಾಲರಾದ ಜೋಶ್ ಕಿರಿಯನ್,ಉಪಪ್ರಾಂಶುಪಾಲರಾದ ಹುಬ್ಬಳ್ಳಿ ಹಾಗೂ ಪಾಲಕ ಶಿಕ್ಷಕ ಸಮಿತಿಯ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು .
ವರದಿ :ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago