Latest

ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.!

ಮುಂಡಗೋಡ: ತಾಲೂಕಿನ ಮಳಗಿ ಹತ್ತಿರದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿಯವರು ಭೇಟಿ ನೀಡಿ ಚರ್ಚಿಸಿದರು.


ಹೊಸದಾಗಿ ಆಯ್ಕೆಯಾದ ಪಾಲಕ ಶಿಕ್ಷಕ ಸಮಿತಿಯ (PTC) ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರಿಗೆ ಕರೆ ಮಾಡಿ ವಿದ್ಯಾಲಯಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಕೇಳಿಕೊಂಡಿದ್ದರು. ಈ ವಿಷಯವಾಗಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರು ಇಂದು ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ಭೇಟಿ ನೀಡಿ ಶೈಕ್ಷಣಿಕ ವಿಚಾರಗಳ ಕುರಿತು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು .
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಈ ನವೋದಯ ವಿದ್ಯಾಲಯವು ಸುಮಾರು 35 ವರ್ಷಗಳ ಹಿಂದೆ ಪ್ರಾರಂಭಗೊಂಡಿದ್ದು ಅಂದು ನಿರ್ಮಾಣಗೊಂಡಿರುವ ಕೊಠಡಿಗಳು ಹಾಗೂ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಮೇಲ್ಚಾವಣಿ ಶಿಥಿಲಗೊಂಡು ಮಳೆಗಾಲದಲ್ಲಿ ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತೀದೆ.ಹಾಗಾಗಿ ಸದ್ಯ ಅವುಗಳಿಗೆ ತಗಡಿನ ಶೆಡ್ ನಿರ್ಮಾಣ ಮಾಡುವಂತೆ ಹಾಗೂ ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರಿನ ಸಮಸ್ಯೆ ಆಗುತ್ತಿದೆ ,ಬಾಲಕರ ಶೌಚಾಲಯಗಳು ಅವ್ಯವಸ್ಥೆಯಿಂದ ಕೂಡಿದ್ದುಇವುಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ಹಾಗೂ ಸದಸ್ಯರು ವಿಧಾನಪರಿಷತ್ ಸದಸ್ಯರ ಬಳಿ ಮನವಿ ಪತ್ರ ನೀಡುವುದರೊಂದಿಗೆ ವಿನಂತಿಸಿಕೊಂಡರು.ಹಾಗೂ ತಮ್ಮ ಅನುದಾನದಲ್ಲಿ ಸಭಾಹಾಲ್ ನಿರ್ಮಾಣ ಮಾಡಿಕೊಡುವಂತೆ ಕೇಳಿಕೊಂಡರು.ಎಲ್ಲ ಸಮಸ್ಯೆಗಳನ್ನು ಆಲಿಸಿದ ಎಂಎಲ್ಸಿ ಅವರು ಈ ವಿಷಯಗಳ ಕುರಿತು ,ಜಿಲ್ಲೆಯ ಉಸ್ತುವಾರಿ ಮಂತ್ರಿಗಳೊಂದಿಗೆ,ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರೊಂದಿಗೆ,ಜಿಲ್ಲಾಧಿಕಾರಿಗಳೊಂದಿಗೆ,ತಹಸಿಲ್ದಾರ ಅವರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುವ. ಪ್ರಯತ್ನ ಮಾಡುತ್ತೇನೆ ಎಂದರು.ಹಾಗೂ ಜಿಲ್ಲಾಧಿಕಾರಿಗಳಿಗೆ ಖುದ್ದು ಭೇಟಿಕೊಡಲು ತಿಳಿಸುತ್ತೇನೆ ಎಂದು ಹೇಳಿದರು.ಮತ್ತು ಸಂದರ್ಭದಲ್ಲಿ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ, ಪ್ರಾಂಶುಪಾಲರಾದ ಜೋಶ್ ಕಿರಿಯನ್,ಉಪಪ್ರಾಂಶುಪಾಲರಾದ ಹುಬ್ಬಳ್ಳಿ ಹಾಗೂ ಪಾಲಕ ಶಿಕ್ಷಕ ಸಮಿತಿಯ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು .
ವರದಿ :ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago