Latest

ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.!

ಮುಂಡಗೋಡ: ತಾಲೂಕಿನ ಮಳಗಿ ಹತ್ತಿರದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿಯವರು ಭೇಟಿ ನೀಡಿ ಚರ್ಚಿಸಿದರು.


ಹೊಸದಾಗಿ ಆಯ್ಕೆಯಾದ ಪಾಲಕ ಶಿಕ್ಷಕ ಸಮಿತಿಯ (PTC) ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರಿಗೆ ಕರೆ ಮಾಡಿ ವಿದ್ಯಾಲಯಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಕೇಳಿಕೊಂಡಿದ್ದರು. ಈ ವಿಷಯವಾಗಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರು ಇಂದು ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ಭೇಟಿ ನೀಡಿ ಶೈಕ್ಷಣಿಕ ವಿಚಾರಗಳ ಕುರಿತು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು .
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಈ ನವೋದಯ ವಿದ್ಯಾಲಯವು ಸುಮಾರು 35 ವರ್ಷಗಳ ಹಿಂದೆ ಪ್ರಾರಂಭಗೊಂಡಿದ್ದು ಅಂದು ನಿರ್ಮಾಣಗೊಂಡಿರುವ ಕೊಠಡಿಗಳು ಹಾಗೂ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಮೇಲ್ಚಾವಣಿ ಶಿಥಿಲಗೊಂಡು ಮಳೆಗಾಲದಲ್ಲಿ ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತೀದೆ.ಹಾಗಾಗಿ ಸದ್ಯ ಅವುಗಳಿಗೆ ತಗಡಿನ ಶೆಡ್ ನಿರ್ಮಾಣ ಮಾಡುವಂತೆ ಹಾಗೂ ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರಿನ ಸಮಸ್ಯೆ ಆಗುತ್ತಿದೆ ,ಬಾಲಕರ ಶೌಚಾಲಯಗಳು ಅವ್ಯವಸ್ಥೆಯಿಂದ ಕೂಡಿದ್ದುಇವುಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ಹಾಗೂ ಸದಸ್ಯರು ವಿಧಾನಪರಿಷತ್ ಸದಸ್ಯರ ಬಳಿ ಮನವಿ ಪತ್ರ ನೀಡುವುದರೊಂದಿಗೆ ವಿನಂತಿಸಿಕೊಂಡರು.ಹಾಗೂ ತಮ್ಮ ಅನುದಾನದಲ್ಲಿ ಸಭಾಹಾಲ್ ನಿರ್ಮಾಣ ಮಾಡಿಕೊಡುವಂತೆ ಕೇಳಿಕೊಂಡರು.ಎಲ್ಲ ಸಮಸ್ಯೆಗಳನ್ನು ಆಲಿಸಿದ ಎಂಎಲ್ಸಿ ಅವರು ಈ ವಿಷಯಗಳ ಕುರಿತು ,ಜಿಲ್ಲೆಯ ಉಸ್ತುವಾರಿ ಮಂತ್ರಿಗಳೊಂದಿಗೆ,ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರೊಂದಿಗೆ,ಜಿಲ್ಲಾಧಿಕಾರಿಗಳೊಂದಿಗೆ,ತಹಸಿಲ್ದಾರ ಅವರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುವ. ಪ್ರಯತ್ನ ಮಾಡುತ್ತೇನೆ ಎಂದರು.ಹಾಗೂ ಜಿಲ್ಲಾಧಿಕಾರಿಗಳಿಗೆ ಖುದ್ದು ಭೇಟಿಕೊಡಲು ತಿಳಿಸುತ್ತೇನೆ ಎಂದು ಹೇಳಿದರು.ಮತ್ತು ಸಂದರ್ಭದಲ್ಲಿ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ, ಪ್ರಾಂಶುಪಾಲರಾದ ಜೋಶ್ ಕಿರಿಯನ್,ಉಪಪ್ರಾಂಶುಪಾಲರಾದ ಹುಬ್ಬಳ್ಳಿ ಹಾಗೂ ಪಾಲಕ ಶಿಕ್ಷಕ ಸಮಿತಿಯ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು .
ವರದಿ :ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago