Latest

ಜವಾಹರ್ ನವೋದಯ ವಿದ್ಯಾಲಯಕ್ಕೆ ಎಂಎಲ್ಸಿ ಶಾಂತಾರಾಮ್ ಭೇಟಿ.!

ಮುಂಡಗೋಡ: ತಾಲೂಕಿನ ಮಳಗಿ ಹತ್ತಿರದಲ್ಲಿರುವ ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ದಿಯವರು ಭೇಟಿ ನೀಡಿ ಚರ್ಚಿಸಿದರು.


ಹೊಸದಾಗಿ ಆಯ್ಕೆಯಾದ ಪಾಲಕ ಶಿಕ್ಷಕ ಸಮಿತಿಯ (PTC) ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರಿಗೆ ಕರೆ ಮಾಡಿ ವಿದ್ಯಾಲಯಕ್ಕೆ ಖುದ್ದು ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಕೇಳಿಕೊಂಡಿದ್ದರು. ಈ ವಿಷಯವಾಗಿ ವಿಧಾನಪರಿಷತ್ ಸದಸ್ಯರಾದ ಶಾಂತಾರಾಮ್ ಸಿದ್ಧಿ ಅವರು ಇಂದು ಜವಾಹರ್ ನವೋದಯ ವಿದ್ಯಾಲಯ ಪಂಚವಟಿಗೆ ಭೇಟಿ ನೀಡಿ ಶೈಕ್ಷಣಿಕ ವಿಚಾರಗಳ ಕುರಿತು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು .
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ಈ ನವೋದಯ ವಿದ್ಯಾಲಯವು ಸುಮಾರು 35 ವರ್ಷಗಳ ಹಿಂದೆ ಪ್ರಾರಂಭಗೊಂಡಿದ್ದು ಅಂದು ನಿರ್ಮಾಣಗೊಂಡಿರುವ ಕೊಠಡಿಗಳು ಹಾಗೂ ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳ ಮೇಲ್ಚಾವಣಿ ಶಿಥಿಲಗೊಂಡು ಮಳೆಗಾಲದಲ್ಲಿ ಸೋರುತ್ತಿರುವುದರಿಂದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತೀದೆ.ಹಾಗಾಗಿ ಸದ್ಯ ಅವುಗಳಿಗೆ ತಗಡಿನ ಶೆಡ್ ನಿರ್ಮಾಣ ಮಾಡುವಂತೆ ಹಾಗೂ ಮಳೆಗಾಲದಲ್ಲಿ ಮಕ್ಕಳಿಗೆ ಬಿಸಿ ನೀರಿನ ಸಮಸ್ಯೆ ಆಗುತ್ತಿದೆ ,ಬಾಲಕರ ಶೌಚಾಲಯಗಳು ಅವ್ಯವಸ್ಥೆಯಿಂದ ಕೂಡಿದ್ದುಇವುಗಳನ್ನು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹರಿಸುವಂತೆ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ ಹಾಗೂ ಸದಸ್ಯರು ವಿಧಾನಪರಿಷತ್ ಸದಸ್ಯರ ಬಳಿ ಮನವಿ ಪತ್ರ ನೀಡುವುದರೊಂದಿಗೆ ವಿನಂತಿಸಿಕೊಂಡರು.ಹಾಗೂ ತಮ್ಮ ಅನುದಾನದಲ್ಲಿ ಸಭಾಹಾಲ್ ನಿರ್ಮಾಣ ಮಾಡಿಕೊಡುವಂತೆ ಕೇಳಿಕೊಂಡರು.ಎಲ್ಲ ಸಮಸ್ಯೆಗಳನ್ನು ಆಲಿಸಿದ ಎಂಎಲ್ಸಿ ಅವರು ಈ ವಿಷಯಗಳ ಕುರಿತು ,ಜಿಲ್ಲೆಯ ಉಸ್ತುವಾರಿ ಮಂತ್ರಿಗಳೊಂದಿಗೆ,ಕಾರ್ಮಿಕ ಸಚಿವರಾದ ಶಿವರಾಮ ಹೆಬ್ಬಾರ್ ಅವರೊಂದಿಗೆ,ಜಿಲ್ಲಾಧಿಕಾರಿಗಳೊಂದಿಗೆ,ತಹಸಿಲ್ದಾರ ಅವರೊಂದಿಗೆ ಮಾತನಾಡಿ ಸಮಸ್ಯೆಗಳನ್ನು ಬಗೆಹರಿಸುವ. ಪ್ರಯತ್ನ ಮಾಡುತ್ತೇನೆ ಎಂದರು.ಹಾಗೂ ಜಿಲ್ಲಾಧಿಕಾರಿಗಳಿಗೆ ಖುದ್ದು ಭೇಟಿಕೊಡಲು ತಿಳಿಸುತ್ತೇನೆ ಎಂದು ಹೇಳಿದರು.ಮತ್ತು ಸಂದರ್ಭದಲ್ಲಿ ಪಾಲಕ ಶಿಕ್ಷಕ ಸಮಿತಿ ಅಧ್ಯಕ್ಷರಾದ ಪ್ರಕಾಶ್ ಅಜ್ಜಂನವರ, ಪ್ರಾಂಶುಪಾಲರಾದ ಜೋಶ್ ಕಿರಿಯನ್,ಉಪಪ್ರಾಂಶುಪಾಲರಾದ ಹುಬ್ಬಳ್ಳಿ ಹಾಗೂ ಪಾಲಕ ಶಿಕ್ಷಕ ಸಮಿತಿಯ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು .
ವರದಿ :ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

21 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

21 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

21 hours ago