Crime

ಜೆಸಿಬಿ ಚಾಲಕನ ಶವ ಪತ್ತೆ: ಅಪಘಾತವೋ ಅಥವಾ ಪೂರ್ವಯೋಜಿತ ಕೊಲೆವೋ?

ಗೌರಿಬಿದನೂರು, ಜೂನ್ 5: ವಾಟಾದಹೊಸಹಳ್ಳಿ ನಿವಾಸಿ 20 ವರ್ಷದ ಜೆಸಿಬಿ ಚಾಲಕ ಶ್ರೀಧರ್ ಬಾಬು ಬುಧವಾರ ಶವವಾಗಿ ಪತ್ತೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಮಂಗಳವಾರ ರಾತ್ರಿ ಕೂಲಿಗೆ ತೆರಳಿದ್ದ ಯುವಕ, ಆತನ ಮುಂದಿನ ದಿನದ ಬೆಳಗ್ಗಿನ ವಾಪಾಸಿಗೆ ತಲುಪದೇ ಕಾಣೆಯಾಗಿದ್ದು, ಕೊನೆಗೆ ಅವನ ಶವ ತೊಗಲುಮೋರಿ ಬಳಿ ಪತ್ತೆಯಾಗಿದೆ.

ತೋಕಲಹಳ್ಳಿ ಗ್ರಾಮದ ಅಭಿಲಾಷ್ ಎಂಬಾತ, ನಕ್ಕಲಹಳ್ಳಿ ಗ್ರಾಮದ ಕೆರೆಯಲ್ಲಿ ಮಣ್ಣು ತೆಗೆದು ಕೊಡಬೇಕೆಂದು ಶ್ರೀಧರ್‍ನ್ನು ಮಂಗಳವಾರ ರಾತ್ರಿ ಕೂಲಿಗೆ ಕರೆದುಕೊಂಡು ಹೋಗಿದ್ದ. ಬುಧವಾರ ಬೆಳಗ್ಗೆ 7 ಗಂಟೆಯಾಗಿದರೂ ಯುವಕ ಮನೆಗೆ ಮರಳದ ಹಿನ್ನೆಲೆಯಲ್ಲಿ ಆತಂಕಗೊಂಡ ಪೋಷಕರು ಹುಡುಕಾಟ ಆರಂಭಿಸಿದ್ದರು.

ಅವಕಾಶದಿಂದಲೇ ಕಾಟನಕಲ್ಲು–ಪೆದ್ದನಹಳ್ಳಿ ರಸ್ತೆಯ ನಡುವೆ ಇರುವ ತೊಗಲುಮೋರಿಯ ಬಳಿ ಕಾರಿನ ಅಪಘಾತವಾಗಿದೆ ಎಂಬ ಮಾಹಿತಿ ಸ್ನೇಹಿತರಿಂದ ಬಂದಿತು. ಆದರೆ ಘಟನೆ ಸ್ಥಳದಲ್ಲಿ ಕಂಡ ದೃಶ್ಯಗಳು ಅಪಘಾತವಲ್ಲ,ಪೂರ್ವಯೋಜಿತ ಕೊಲೆಯ ಸಾಧ್ಯತೆಗೂ ನಾಂದಿ ಹಾಡಿದವು:

*ಶವದ ತಲೆಗೆ ಭಾರೀ ಹೊಡೆತ, ಮೆದುಳು ಹೊರ ಬೀಳುವಷ್ಟು ಗಂಭೀರ ಗಾಯ

*ದೇಹದ ಮೇಲ್ಭಾಗದಲ್ಲಿ ವಾಹನದ ಚಕ್ರ ಹತ್ತಿದ ಗುರುತುಗಳು

*ಕೆರೆಯ ಅಂಚಿನಲ್ಲಿ ರಕ್ತದ ಕಲೆಗಳು ಹಾಗೂ ಮಾಂಸದ ತುಂಡುಗಳು

ಈ ಹಿನ್ನೆಲೆಯೊಳಗೆ, ಮೃತನ ಅಣ್ಣ ನಾಗೇಂದ್ರ ಬಾಬು ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ, “ತಮ್ಮನನ್ನು ಕೊಲೆ ಮಾಡಿ, ಶವವನ್ನು ಕಾರಿನಲ್ಲಿ ಇಟ್ಟು ಅಪಘಾತ ಎಂದು ಬಿಂಬಿಸಲು ತೊಗಲುಮೋರಿ ಬಳಿ ಬಿಟ್ಟಿದ್ದಾರೆ” ಎಂದು ಆರೋಪಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, “ಇದು ಮೇಲ್ನೋಟಕ್ಕೆ ಕೊಲೆ ಎಂದು ತೋರುತ್ತದೆ. ಅಪಘಾತವೆಂದು ತೋರಿಸಲು ಪ್ರಯತ್ನವಾಗಿದೆ. ತನಿಖೆ ಆರಂಭಿಸಲಾಗಿದೆ, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ” ಎಂದು ಹೇಳಿದರು.

ಹೆಚ್ಚುವರಿ ಎಸ್‌ಪಿ ಜಗ್ಗನಾಥ್ ರೈ, ಅಡಿಷನಲ್ ಎಸ್‌ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಕೆ.ಪಿ. ಸತ್ಯನಾರಾಯಣರ ನೇತೃತ್ವದಲ್ಲಿ ತನಿಖೆ ಮುಂದುವರಿದಿದ್ದು, ಘಟನೆ ಹಿಂದೆ ಲುಕ್ಛಿಸಲಾದ ಸತ್ಯ ಬಯಲಾಗುವ ನಿರೀಕ್ಷೆ ವ್ಯಕ್ತವಾಗಿದೆ. ವರದಿ: ಅವಿನಾಶ್

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

2 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

9 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

9 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago