Latest

ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಆಭರಣ ಕಳ್ಳತನ; ಕದಿಮರಿಗಾಗಿ ಬಲೆ ಬೀಸಿರುವ ಪೊಲೀಸರು!

ತುಮಕೂರಿನ ಪಾಂಡುರಂಗ ನಗರದಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ದೇವಿಯ ದೇವಸ್ಥಾನದಲ್ಲಿ ಇದೇ ತಿಂಗಳು 22 ನೇ ತಾರೀಕು ಸುಮಾರು ಮಧ್ಯಾಹ್ನ 2 ಗಂಟೆಯಿಂದ ಎರಡು ಮೂವತ್ತರ ಸುಮಾರಿಗೆ ಕಳ್ಳತನವಾಗಿದ್ದು ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಧ್ಯಾಹ್ನದ ಸಮಯಕ್ಕೆ ಮಗುವಿಗೆ ಅಮ್ಮ ಆಗಿದೆ ದೇವರ ತೀರ್ಥವನ್ನು ನೀಡಿ ಎಂದು ಅಪರಿಚಿತ ವ್ಯಕ್ತಿಗಳು ಮಗುವಿನೊಂದಿಗೆ ದ್ವಿಚಕ್ರ ವಾಹನದಲ್ಲಿ ಬಂದಿದ್ದು ಆ ಸಂದರ್ಭದಲ್ಲಿ ದೇವಸ್ಥಾನ ಮುಚ್ಚಿರುತ್ತದೆ.
ಮಗುವಿಗೆ ಅಮ್ಮ ಆಗಿರುವುದನ್ನು ತೋರಿಸಿ ತಾವು ಈಗ ಬಂದು ದೇವರ ತೀರ್ಥವನ್ನು ಕೊಡಲೇಬೇಕು ಎಂದು ಅರ್ಚಕರಿಗೆ ಬಲವಂತ ಮಾಡಿರುತ್ತಾರೆ. ಅವರು ಬಲವಂತ ಮಾಡಿದ ಬಳಿಕ ದೇವಸ್ಥಾನದ ಗೇಟ್ ಅನ್ನು ತೆರೆದು ಒಳಗೆ ಪ್ರವೇಶಿಸುವ ಅಷ್ಟರಲ್ಲಿ ಅರ್ಚಕರಿಗೆ ಮತ್ತು ಬರುವಂತಹ ಪುಡಿಯನ್ನು ಎರಚಿ ದೇವಿಯ ಕಿರೀಟ ಹಾಗೂ ಮಾಂಗಲ್ಯವನ್ನು ಕಳ್ಳತನ ಮಾಡಿರುತ್ತಾರೆ.
ಪ್ರಜ್ಞೆ ಬಂದ ಬಳಿಕ ಅರ್ಚಕರು ಕಳ್ಳತನವಾಗಿರುವ ಬಗ್ಗೆ ಅರಿತು ತುಮಕೂರು ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿರುತ್ತಾರೆ. ಸದ್ಯ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

15 hours ago

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪೊಲೀಸರಿಂದ ‘ಹಣದ ಬೇಡಿಕೆ, ಕಿರುಕುಳ’ ಆರೋಪ..!

ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…

15 hours ago

ಶೇಕ್‌ಪೇಟ್‌ನಲ್ಲಿ ಪಶು ಆಸ್ಪತ್ರೆಯ ಹೆಸರಿನಲ್ಲಿ ಕ್ರೂರ ದಂಧೆ: ಬೀದಿ ನಾಯಿಗಳ ರಕ್ತ ಮಾರಾಟ, ಭಾರೀ ಹಣ ವಸೂಲಿ!

ಶೇಕ್‌ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…

15 hours ago

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ‘ಕೇಸ್ ಹಾಕುತ್ತೇವೆ’ ಎನ್ನುವ ಭಯದಿಂದ ಜೀವತ್ಯಾಗ? ಪೊಲೀಸರ ವಿರುದ್ಧ ಆರೋಪ

ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…

16 hours ago

ಕೋರಮಂಗಲದಲ್ಲಿ ಸಿಸಿಬಿ ದಾಳಿ: ಸಾರ್ವಜನಿಕವಾಗಿ ವೇಶ್ಯಾವಾಟಿಕೆ, ರಸ್ತೆಯಲ್ಲಿ ನಿಂತ ಪುರುಷರನ್ನು ಕರೆಯುತ್ತಿದ್ದ ಆರು ವಿದೇಶಿ ಮಹಿಳೆಯರು ವಶಕ್ಕೆ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…

16 hours ago

ಕಾಂಗ್ರೆಸ್ಗೆ ಅಹಿಂದ ಎಚ್ಚರಿಕೆ: ‘2028ಕ್ಕೆ ಹೊಸ ಪಕ್ಷ’ ಬೆದರಿಕೆ, ದಲಿತ ಸಿಎಂ ಆಗ್ರಹ

ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…

16 hours ago