Latest

ಚೌಡೇಶ್ವರಿ ದೇವಾಲಯದಲ್ಲಿ ಆಭರಣ ಕಳವು: ಮದುವೆ ಖರ್ಚಿಗಾಗಿ ತಾಯಿ, ಅರ್ಚಕ ಸೇರಿ ಸಂಚು

ಚಿಕ್ಕಬಳ್ಳಾಪುರ, ಆಗಸ್ಟ್ 04: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಹಿರಿಯಲಚೇನಹಳ್ಳಿ ಗ್ರಾಮದಲ್ಲಿರುವ ಪ್ರಸಿದ್ಧ ಚೌಡೇಶ್ವರಿ ದೇವಾಲಯದಲ್ಲಿ ಜುಲೈ 23ರಂದು ಸಂಭವಿಸಿದ ಆಭರಣ ಕಳವು ಪ್ರಕರಣದಲ್ಲಿ ಹೊಸ ತಿರುವು ಉಂಟಾಗಿದೆ. ಮಗಳ ಮದುವೆಯ ಖರ್ಚು ಪೂರೈಸಲು ತಾಯಿ ದೇವಾಲಯದ ದೇವಿಯ ಚಿನ್ನ-ಬೆಳ್ಳಿ ಆಭರಣ ಕಳವು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ದೇವನಹಳ್ಳಿ ತಾಲೂಕಿನ ವಿಜಯಪುರ ಮೂಲದ ಲತಾ ಎಂಬ ಮಹಿಳೆ, ತನ್ನ ಎರಡನೇ ಮಗಳ ಮದುವೆಗೆ ಹಣದ ವ್ಯವಸ್ಥೆ ಮಾಡಲಾಗದೆ ದೇವಾಲಯದ ಆಭರಣಗಳತ್ತ ಕಣ್ಣಿಟ್ಟಿದ್ದಾಳೆ. ಈ ಸಂಚುಕಥೆಯಲ್ಲಿ ಲತಾಗೆ ಸಹಾಯ ಮಾಡಿದವರು ಆಕೆಯ ಮೂರನೇ ಮಗಳ ಪ್ರೇಮಿ ನವೀನ್ ಕುಮಾರ್ ಹಾಗೂ ದೇವಾಲಯದ ಅರ್ಚಕ ಚಿಕ್ಕಮಲ್ಲೇಶಪ್ಪ.

ಚಿಕ್ಕಮಲ್ಲೇಶಪ್ಪ ಮದ್ಯ ಸೇವನೆಯ ಲಾಲಸೆಯಿಂದ ಬಳಲುತ್ತಿದ್ದು, ಆತನಿಗೆ ಹಣದ ಆಮಿಷ ನೀಡಿದ ಲತಾ ಹಾಗೂ ನವೀನ್ ದೇವಾಲಯದ ಒಳಗಿನಿಂದ ಬೆಳ್ಳಿ ಮುಖವಾಡ, ಮೂಗುತಿ, ಮಾಂಗಲ್ಯದ ಬೊಟ್ಟಗಳು, ಕಾಲು ಚೈನುಗಳು ಸೇರಿದಂತೆ ಹಲವು ಅಮೂಲ್ಯ ಆಭರಣಗಳನ್ನು ಕದ್ದಿದ್ದಾರೆ.

ಘಟನೆ ಬಗ್ಗೆ ದಿಬ್ಬೂರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದಲ್ಲದೆ, ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದರು. ಆರೋಪಿ ಚಿಕ್ಕಮಲ್ಲೇಶಪ್ಪನನ್ನು ವಿಚಾರಣೆ ನಡೆಸಿದಾಗ ಆತ ಕೃತ್ಯವನ್ನು ಒಪ್ಪಿಕೊಂಡಿದ್ದು, ತನಿಖೆಯಲ್ಲಿ ಸಹಕರಿಸಿದ್ದಾನೆ. ಪೋಲಿಸರು ಇತರ ಇಬ್ಬರು ಆರೋಪಿಗಳನ್ನು ಕೂಡ ಬಂಧಿಸಿದ್ದು, ಕಳವುಗೆ ಒಳಗಾದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಪ್ರಕರಣವು ದೇವತೆ ಮೇಲೆ ನಂಬಿಕೆ ಇಡುವ ಭಕ್ತರಲ್ಲಿ ಆತಂಕ ಮೂಡಿಸಿರುವುದರ ಜೊತೆಗೆ, ಮಾನವ ಸಂಬಂಧಗಳ ಗಂಭೀರ ಮುಖವನ್ನೂ ತೋರಿಸಿದೆ. ಮಗಳ ಮದುವೆಗಾಗಿ ತಾಯಿ ದೇವಾಲಯ ದೋಚಿದ ಘಟನೆ, ಜವಾಬ್ದಾರಿ ಮತ್ತು ನೈತಿಕತೆಯ ಅರಿವಿನ ಕೊರತೆಯ ಪರಿಣಾಮವೆಂಬಂತೆ ಅಭಿಪ್ರಾಯ ವ್ಯಕ್ತವಾಗಿದೆ.

nazeer ahamad

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago