Categories: CrimeLatest

ರೋಡ್ ರೇಜ್ ವಿವಾದದಲ್ಲಿ ಸಿಲುಕಿದ ನ್ಯಾಯಾಧೀಶೆ: ಅಮಾನತಿಗೆ ವಕೀಲರ ಸಂಘದ ಆಗ್ರಹ

ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಿರಿಯ ಶ್ರೇಣಿ ನ್ಯಾಯಾಧೀಶೆ ಗಾಯತ್ರಿ ವಿರುದ್ಧ ರೋಡ್ ರೇಜ್‌ಗೆ ಸಂಬಂಧಿಸಿದ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಘಟನೆ ಈಗ ಕಾನೂನು ವಲಯದಲ್ಲೇ ಚರ್ಚೆಗೆ ಕಾರಣವಾಗಿದೆ. ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ, ಬೆಂಗಳೂರು ವಕೀಲರ ಸಂಘ ನ್ಯಾಯಾಧೀಶೆಯ ನಡೆ ಖಂಡಿಸಿ, ಅವರನ್ನು ಅಮಾನತುಗೊಳಿಸುವಂತೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು ಒತ್ತಾಯಿಸಿದೆ.

ಲಭ್ಯವಿರುವ ಮಾಹಿತಿಯ ಪ್ರಕಾರ, ತಾಯಿ ಮತ್ತು ಮಗ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಕೈ ತೋರಿಸಿದ ವಿಚಾರವನ್ನು ನೆಪವಾಗಿಸಿಕೊಂಡು ನ್ಯಾಯಾಧೀಶೆ ಅವರ ವಾಹನವನ್ನು ಹಿಂಬಾಲಿಸಿ ಅಡ್ಡಗಟ್ಟಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ, ಸ್ಥಳಕ್ಕೆ ಕೋರ್ಟ್ ಪೊಲೀಸ್ ಸಿಬ್ಬಂದಿಯನ್ನು ಕರೆಸಿಕೊಂಡು ಯುವಕನ ಮೇಲೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವ ಆರೋಪವೂ ಕೇಳಿಬಂದಿದೆ. ಈ ವೇಳೆ ಪೊಲೀಸ್ ಪೇದೆ ಶ್ರೀಧರ್ ಎಂಬವರು ಯುವಕನಿಗೆ ಕಪಾಳಮೋಕ್ಷ ಮಾಡಿದರೆಂದು ಹೇಳಲಾಗಿದ್ದು, ಯುವಕನ ತಾಯಿ ತಮ್ಮ ಮಗ ಯಾವುದೇ ತಪ್ಪು ಮಾಡಿಲ್ಲ ಎಂದು ಪದೇಪದೇ ಮನವಿ ಮಾಡಿದರೂ ಪರಿಸ್ಥಿತಿ ಬದಲಾಗಲಿಲ್ಲ ಎನ್ನಲಾಗಿದೆ. ಘಟನೆಯ ಸಂಪೂರ್ಣ ದೃಶ್ಯವನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬರು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ.

ಈ ಬೆಳವಣಿಗೆಯ ಹಿನ್ನೆಲೆಯಲ್ಲಿ ಬೆಂಗಳೂರು ವಕೀಲರ ಸಂಘ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ನ್ಯಾಯಾಧೀಶರು ಸಾರ್ವಜನಿಕರೊಂದಿಗೆ ನಡೆದುಕೊಳ್ಳುವಲ್ಲಿ ಸಂಯಮ ಮತ್ತು ನಿಷ್ಪಕ್ಷಪಾತತೆ ಕಾಪಾಡಬೇಕು ಎಂದು ಅಭಿಪ್ರಾಯಪಟ್ಟಿದೆ. ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಸತ್ಯಾಂಶ ಹೊರಬರಬೇಕು ಹಾಗೂ ಅಗತ್ಯವಿದ್ದರೆ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ. ಈ ಘಟನೆ ನ್ಯಾಯಾಂಗದ ಜವಾಬ್ದಾರಿ, ಅಧಿಕಾರದ ಬಳಕೆ ಮತ್ತು ಸಾರ್ವಜನಿಕರೊಂದಿಗೆ ಅಧಿಕಾರಿಗಳ ವರ್ತನೆ ಕುರಿತು ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ಭ್ರಷ್ಟರ ಬೇಟೆ

Recent Posts

ದಳಪತಿ ಹತ್ಯೆ; 17 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಕನ್ಯಾಕೊಳೂರು ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತ ಮುಖಂಡ ದೇವೇಂದ್ರಪ್ಪ ಭೀಮಪ್ಪ ದಳಪತಿ ಹತ್ಯೆ ಪ್ರಕರಣಕ್ಕೆ…

7 hours ago

₹15 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಗದಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ

ಗದಗ: ಹೊರಗುತ್ತಿಗೆ ಆಧಾರದ ಉದ್ಯೋಗ ನೀಡುವ ನೆಪದಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

7 hours ago

ಪ್ರಿಯಕರನೊಂದಿಗೆ ಸೇರಿ ಮನೆಯಲ್ಲೇ ₹69 ಲಕ್ಷಕ್ಕೂ ಹೆಚ್ಚು ಕಳ್ಳತನ; ಸೊಸೆ ಸೇರಿ ಇಬ್ಬರನ್ನೂ ಒಂದೇ ದಿನದಲ್ಲಿ ಬಂಧಿಸಿದ ಹಾಸನ ಪೊಲೀಸರು

ಹಾಸನ: ಹಾಡುಹಗಲೇ ನಡೆದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳ್ಳತನ ಪ್ರಕರಣವನ್ನು ಹಾಸನ ಗ್ರಾಮಾಂತರ ಪೊಲೀಸರು ಕೇವಲ…

7 hours ago

ಟ್ರೋಲ್‌ಗಳಿಂದ ಬೇಸತ್ತ ಬಿಗ್ ಬಾಸ್ ಖ್ಯಾತಿಯ ಧ್ರುವಂತ್; ಪೊಲೀಸರ ಮೊರೆ ಹೋದ ನಟ

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ನಿರಂತರವಾಗಿ ಬರುತ್ತಿರುವ ನೆಗೆಟಿವ್ ಕಾಮೆಂಟ್‌ಗಳು ಹಾಗೂ ಅವಹೇಳನಕಾರಿ ಟ್ರೋಲ್‌ಗಳಿಂದ ಬೇಸತ್ತಿರುವ ಬಿಗ್ ಬಾಸ್…

7 hours ago

ಡ್ರೈವರ್ ಸಹವಾಸ, ಗಂಡು ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಪೋಕ್ಸೋ ಪ್ರಕರಣ ದಾಖಲು

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿರುವ…

7 hours ago

ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಸಿದ್ಧನಾದ ಭೂಪ, ಮಂಟಪಕ್ಕೆ ನುಗ್ಗಿ ಮೊದಲ ಪತ್ನಿ ಮಾಡಿದ ಕೆಲಸಕ್ಕೆ ಆಗಿದೆ ಬೇರೆ..?

ಉತ್ತರ ಪ್ರದೇಶ: ಕಾನೂನಾತ್ಮಕವಾಗಿ ವಿಚ್ಛೇದನ (ತಲಾಖ್) ನೀಡದೇ ರಹಸ್ಯವಾಗಿ ಎರಡನೇ ಮದುವೆಗೆ ಮುಂದಾಗಿದ್ದ ಪತಿಯ ಮದುವೆಯನ್ನು ಮೊದಲ ಪತ್ನಿಯೇ ಮಂಟಪಕ್ಕೆ…

7 hours ago