ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ ಭಾವಿ ಪತ್ನಿ ಪ್ರಿಯಕರನೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿಯ ಪುತ್ರ ಕೇತನ್ ಅಗರ್ವಾಲ್ (26) ಈ ಪ್ರಕರಣದ ಮೃತ ಯುವಕ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಭಾವಿ ಪತ್ನಿ ಸಿಯಾ ಗೋಯಲ್ ಹಾಗೂ ಆಕೆಯ ಪ್ರಿಯಕರ ಚೇತನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಾಹಿತಿಯ ಪ್ರಕಾರ, ಕೇತನ್ ಮತ್ತು ಸಿಯಾ ಅವರ ಮದುವೆಯನ್ನು ರಾಜಸ್ಥಾನದ ಐಷಾರಾಮಿ ಅರಮನೆಯಲ್ಲಿ ಸುಮಾರು 17 ಕೋಟಿ ರೂಪಾಯಿ ವೆಚ್ಚದಲ್ಲಿ ಅದ್ಧೂರಿಯಾಗಿ ನಡೆಸಲು ಕುಟುಂಬಗಳು ಸಿದ್ಧತೆ ನಡೆಸಿದ್ದವು. ಮದುವೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಾಗ ಈ ದಾರುಣ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಸಿಯಾ ಗೋಯಲ್ ತನ್ನ ಪ್ರಿಯಕರ ಚೇತನ್ ಜೊತೆ ಸೇರಿ ಕೇತನ್ನನ್ನು ಲೋಹಗಡ್ ಕೋಟೆ ಪ್ರದೇಶಕ್ಕೆ ಕರೆದುಕೊಂಡು ಹೋಗಿದ್ದಾಳೆ. ಬಳಿಕ ಸುಮಾರು 400 ಅಡಿ ಆಳದ ಕಣಿವೆಗೆ ತಳ್ಳಿದ ಪರಿಣಾಮ ಕೇತನ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಕೇತನ್ ನಾಪತ್ತೆಯಾದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಮೊದಲಿಗೆ ಇದು ಅಪಘಾತ ಅಥವಾ ನಾಪತ್ತೆ ಪ್ರಕರಣ ಎಂದು ಭಾವಿಸಲಾಗಿತ್ತು. ಆದರೆ, ತನಿಖೆ ಮುಂದುವರಿದಂತೆ ಹಲವು ಅನುಮಾನಾಸ್ಪದ ಅಂಶಗಳು ಬೆಳಕಿಗೆ ಬಂದವು.
ಸಿಯಾ ಗೋಯಲ್ ಅವರ ಕಾಲ್ ಡೇಟಾ ಪರಿಶೀಲಿಸಿದಾಗ ಆಕೆ ಚೇತನ್ ಜೊತೆ ನಿರಂತರ ಸಂಪರ್ಕದಲ್ಲಿದ್ದ ವಿಚಾರ ಪತ್ತೆಯಾಯಿತು. ಜೊತೆಗೆ, ಕೇತನ್ ಕಾಣೆಯಾದ ನಂತರ ಆಕೆಯ ವರ್ತನೆಯೂ ಪೊಲೀಸರಿಗೆ ಅನುಮಾನ ಮೂಡಿಸಿತು.
ತೀವ್ರ ವಿಚಾರಣೆ ವೇಳೆ ಸಿಯಾ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, “ಹೌದು, ನಾನೇ ಕಣಿವೆಗೆ ತಳ್ಳಿ ಕೊಂದೆ” ಎಂದು ಹೇಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಸ್ತುತ ಸಿಯಾ ಗೋಯಲ್ ಮತ್ತು ಚೇತನ್ ಇಬ್ಬರೂ ಪೊಲೀಸ್ ವಶದಲ್ಲಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ಮದುವೆಯ ಕನಸು ಕಂಡಿದ್ದ ಕುಟುಂಬಗಳಿಗೆ ಈ ಘಟನೆ ಭಾರೀ ಆಘಾತವನ್ನುಂಟು ಮಾಡಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…