ಬೆಂಗಳೂರು: ಐಪಿಎಲ್ 2025 ಹಂತದ 18ನೇ ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಗೆದ್ದ ಹಿನ್ನೆಲೆಯಲ್ಲಿ ಜುನ್ 4ರಂದು ಬೆಂಗಳೂರಿನ ಜನಸ್ವಾಮಿ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರ ಭರ್ಜರಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿತ್ತು. ಆದರೆ, ಈ ಕಾರ್ಯಕ್ರಮ ಆಘಾತಕರ ಅಂತ್ಯ ಕಂಡು, ನೂಕುನುಗ್ಗಲು ಮತ್ತು ಕಾಲ್ತುಳಿತದಿಂದ 11 ಜನರು ದುರಂತವಾಗಿ ಪ್ರಾಣ ಕಳೆದುಕೊಂಡಿದ್ದರು.
ಘಟನೆಗೆ ಹೊಣೆಗಾರರೆಂದು ನೋಡಲಾದ ಹಿನ್ನೆಲೆಯಲ್ಲಿ, ತಕ್ಷಣವೇ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಸೇರಿದಂತೆ ಹಲವಾರು ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ಆದರೆ ಈ ನಿರ್ಧಾರಕ್ಕೆ ಇದೀಗ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (CAT) ತಡೆ ನೀಡಿದೆ.
ವಿಕಾಸ್ ಕುಮಾರ್ ಅವರ ಅಮಾನತು ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ CAT ಪೀಠದ ನ್ಯಾ. ಬಿ.ಕೆ. ಶ್ರೀನಿವಾಸ ಮತ್ತು ನ್ಯಾ. ಸಂತೋಷ ಮೆಹ್ರಾ ಅವರಿದ್ದ ಪೀಠ, ಅಮಾನತು ಕ್ರಮವನ್ನು ರದ್ದುಗೊಳಿಸಿ ಅವರ ಸೇವೆಗಳನ್ನು ಪುನರ್ ಸ್ಥಾಪನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಇದೇ ಜೊತೆಗೆ, ಅವರನ್ನು ಹಿಂದಿನ ಹುದ್ದೆಗೆ ಮರುನಿಯುಕ್ತಗೊಳಿಸಿ, ಅಮಾನತಿನ ಅವಧಿಯ ಸಂಪೂರ್ಣ ಭತ್ಯೆಗಳು ಮತ್ತು ಸೌಲಭ್ಯಗಳನ್ನು ಒದಗಿಸಬೇಕೆಂದು ಆದೇಶ ನೀಡಲಾಗಿದೆ.
ವಿಕಾಸ್ ಕುಮಾರ್ ಪರವಾಗಿ ಹಿರಿಯ ವಕೀಲ ಧ್ಯಾನ ಚಿನ್ನಪ್ಪ ವಾದಿಸಿ, ಈ ಅಮಾನತು ತುರ್ತುವಾಗಿ, ನ್ಯಾಯಸಮ್ಮತ ಪ್ರಕ್ರಿಯೆಯಿಲ್ಲದೆ ಜಾರಿಗೆ ತರಲಾಗಿದೆ ಎಂಬುದನ್ನು ನ್ಯಾಯಮಂಡಳಿಗೆ ಮನವರಿಕೆ ಮಾಡಿಸಿದರು.
ಈ ಆದೇಶದಿಂದಾಗಿ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರಕ್ಕೆ ಮುನ್ನೆಚ್ಚರಿಕೆ ಇಲ್ಲದ ಕ್ರಮ ಕೈಗೊಂಡ್ದ ಪರಿಣಾಮವಾಗಿ ನ್ಯಾಯಾಂಗದಲ್ಲಿ ಮುಖಭಂಗವಾಗಿರುವುದಂತು ಸ್ಪಷ್ಟವಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…