Latest

ನಕಲಿ ನಾಣ್ಯಗಳನ್ನು ಚಿನ್ನದ ನಾಣ್ಯ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ಕದಿಮರು ಪೊಲೀಸರ ಬಲೆಗೆ.

ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, 2 ಅಸಲಿ ಚಿನ್ನದ ನಾಣ್ಯಗಳನ್ನು ಪರಿಶೀಲಿಸಲು ನೀಡಿ, ರೂ. 5 ಸಾವಿರ ಹಣವನ್ನು ಫೋನ್ ಫೇ ಮೂಲಕ ಹಾಕಿಸಿಕೊಂಡು 20 ನಕಲಿ ನಾಣ್ಯ ನೀಡಿ ಮೋಸ ಮಾಡಿದ ಪ್ರಕರಣದಲ್ಲಿ 3 ಜನ ಆರೋಪಿಗಳನ್ನು CEN ಪೊಲೀಸ್ ಠಾಣೆಯ ತಂಡ ವಶಕ್ಕೆ ಪಡೆದಿದ್ದು.
ಆರೋಪಿಗಳಿಂದ ರೂ. 5,000.00 ನಗದು, ಸಾರ್ವಜನಿಕರಿಗೆ ಮೋಸದಿಂದ ಮಾರಾಟ ಮಾಡಲು ಇಟ್ಟುಕೊಂಡಿದ್ದ 1.95 ಕೆ.ಜಿ. ತೂಕದ ತ್ರಾಮದ ನಾಣ್ಯಗಳು, 3 ಮೊಬೈಲ್ ಫೋನ್ ಗಳು, ಒಂದು ಕಾರು ಮತ್ತು 2 ಅಸಲಿ ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಇವರುಗಳು ಈ ಹಿಂದೆ ಇದೇ ರೀತಿ ಆಂದ್ರ ಪ್ರದೇಶ ರಾಜ್ಯದ ತಿರುಪತಿಯಲ್ಲಿ ರೂ. 50,000.00 ಬೆಲೆಗೆ, ಮಹಾರಾಷ್ಟ್ರ ರಾಜ್ಯದ ಪಂಡರಪುರದಲ್ಲಿ 2 ಲಕ್ಷ ಬೆಲೆಗೆ ಮತ್ತು ಹುಬ್ಬಳ್ಳಿಯಲ್ಲಿ 1.70 ಲಕ್ಷ ಬೆಲೆಗೆ ನಕಲಿ ನಾಣ್ಯಗಳನ್ನು ಸಾರ್ವಜನಿಕರಿಗೆ ವಂಚಿಸಿ ಮಾರಾಟ ಮಾಡಿರುವುದು ತಿಳಿದು ಬಂದಿರುತ್ತದೆ.
ಮೇಲ್ಕಂಡ ಪ್ರಕರಣದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲು ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಶ್ರೀ. ವಿನಾಯಕ, ಶ್ರೀ. ರಾಜು, ಶ್ರೀ. ಇಮ್ರಾನ್ ಖಾನ್, ಶ್ರೀ. ಅನ್ವರ್ ಪಾಷಾ,ಶ್ರೀ. ರಮೇಶ, ಶ್ರೀ. ಹರೀಶ್, ಶ್ರೀ. ಮಹೇಂದ್ರ ಮತ್ತು ಶ್ರೀ. ಧರ್ಮರಾಜ್ ರವರು ಭಾಗವಹಿಸಿದ್ದರು.
ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

10 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

11 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

11 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago