Latest

ನಕಲಿ ನಾಣ್ಯಗಳನ್ನು ಚಿನ್ನದ ನಾಣ್ಯ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ಕದಿಮರು ಪೊಲೀಸರ ಬಲೆಗೆ.

ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, 2 ಅಸಲಿ ಚಿನ್ನದ ನಾಣ್ಯಗಳನ್ನು ಪರಿಶೀಲಿಸಲು ನೀಡಿ, ರೂ. 5 ಸಾವಿರ ಹಣವನ್ನು ಫೋನ್ ಫೇ ಮೂಲಕ ಹಾಕಿಸಿಕೊಂಡು 20 ನಕಲಿ ನಾಣ್ಯ ನೀಡಿ ಮೋಸ ಮಾಡಿದ ಪ್ರಕರಣದಲ್ಲಿ 3 ಜನ ಆರೋಪಿಗಳನ್ನು CEN ಪೊಲೀಸ್ ಠಾಣೆಯ ತಂಡ ವಶಕ್ಕೆ ಪಡೆದಿದ್ದು.
ಆರೋಪಿಗಳಿಂದ ರೂ. 5,000.00 ನಗದು, ಸಾರ್ವಜನಿಕರಿಗೆ ಮೋಸದಿಂದ ಮಾರಾಟ ಮಾಡಲು ಇಟ್ಟುಕೊಂಡಿದ್ದ 1.95 ಕೆ.ಜಿ. ತೂಕದ ತ್ರಾಮದ ನಾಣ್ಯಗಳು, 3 ಮೊಬೈಲ್ ಫೋನ್ ಗಳು, ಒಂದು ಕಾರು ಮತ್ತು 2 ಅಸಲಿ ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಇವರುಗಳು ಈ ಹಿಂದೆ ಇದೇ ರೀತಿ ಆಂದ್ರ ಪ್ರದೇಶ ರಾಜ್ಯದ ತಿರುಪತಿಯಲ್ಲಿ ರೂ. 50,000.00 ಬೆಲೆಗೆ, ಮಹಾರಾಷ್ಟ್ರ ರಾಜ್ಯದ ಪಂಡರಪುರದಲ್ಲಿ 2 ಲಕ್ಷ ಬೆಲೆಗೆ ಮತ್ತು ಹುಬ್ಬಳ್ಳಿಯಲ್ಲಿ 1.70 ಲಕ್ಷ ಬೆಲೆಗೆ ನಕಲಿ ನಾಣ್ಯಗಳನ್ನು ಸಾರ್ವಜನಿಕರಿಗೆ ವಂಚಿಸಿ ಮಾರಾಟ ಮಾಡಿರುವುದು ತಿಳಿದು ಬಂದಿರುತ್ತದೆ.
ಮೇಲ್ಕಂಡ ಪ್ರಕರಣದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲು ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಶ್ರೀ. ವಿನಾಯಕ, ಶ್ರೀ. ರಾಜು, ಶ್ರೀ. ಇಮ್ರಾನ್ ಖಾನ್, ಶ್ರೀ. ಅನ್ವರ್ ಪಾಷಾ,ಶ್ರೀ. ರಮೇಶ, ಶ್ರೀ. ಹರೀಶ್, ಶ್ರೀ. ಮಹೇಂದ್ರ ಮತ್ತು ಶ್ರೀ. ಧರ್ಮರಾಜ್ ರವರು ಭಾಗವಹಿಸಿದ್ದರು.
ಭ್ರಷ್ಟರ ಬೇಟೆ

Recent Posts

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

2 hours ago

300ಕ್ಕೆ ಲಭ್ಯವೆಂದು ಪೋಸ್ಟ್ ಹಾಕಿ ಗೃಹಿಣಿಗೆ ಕಿರುಕುಳ: 30 ಲಕ್ಷಕ್ಕೆ ಬೇಡಿಕೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…

3 hours ago

ಮುತ್ತತ್ತಿಯಲ್ಲಿ ದಾರುಣ ದುರಂತ: ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…

3 hours ago

₹15 ಲಕ್ಷ ಎಲ್‌ಐಸಿ ಹಣಕ್ಕಾಗಿ ತಮ್ಮನನ್ನೇ ಕೊಂದ ಅಣ್ಣ! ಅಪಘಾತದ ನಾಟಕ ಬಯಲು ಮಾಡಿದ ಪೊಲೀಸರ ಚಾಣಾಕ್ಷ ತನಿಖೆ

ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…

3 hours ago

ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕರ ವಿರುದ್ಧ ಎಫ್‌ಐಆರ್ ದಾಖಲು

ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…

3 hours ago

ರೌಡಿಶೀಟರ್‌ಗಳು ಮತ್ತು ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರ ಶಾಕ್; ಮನೆಗಳ ಮೇಲೆ ದಿಢೀರ್ ದಾಳಿ!

ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…

3 hours ago