Latest

ನಕಲಿ ನಾಣ್ಯಗಳನ್ನು ಚಿನ್ನದ ನಾಣ್ಯ ಎಂದು ನಂಬಿಸಿ ಮಾರಾಟ ಮಾಡುತ್ತಿದ್ದ ಕದಿಮರು ಪೊಲೀಸರ ಬಲೆಗೆ.

ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿ, 2 ಅಸಲಿ ಚಿನ್ನದ ನಾಣ್ಯಗಳನ್ನು ಪರಿಶೀಲಿಸಲು ನೀಡಿ, ರೂ. 5 ಸಾವಿರ ಹಣವನ್ನು ಫೋನ್ ಫೇ ಮೂಲಕ ಹಾಕಿಸಿಕೊಂಡು 20 ನಕಲಿ ನಾಣ್ಯ ನೀಡಿ ಮೋಸ ಮಾಡಿದ ಪ್ರಕರಣದಲ್ಲಿ 3 ಜನ ಆರೋಪಿಗಳನ್ನು CEN ಪೊಲೀಸ್ ಠಾಣೆಯ ತಂಡ ವಶಕ್ಕೆ ಪಡೆದಿದ್ದು.
ಆರೋಪಿಗಳಿಂದ ರೂ. 5,000.00 ನಗದು, ಸಾರ್ವಜನಿಕರಿಗೆ ಮೋಸದಿಂದ ಮಾರಾಟ ಮಾಡಲು ಇಟ್ಟುಕೊಂಡಿದ್ದ 1.95 ಕೆ.ಜಿ. ತೂಕದ ತ್ರಾಮದ ನಾಣ್ಯಗಳು, 3 ಮೊಬೈಲ್ ಫೋನ್ ಗಳು, ಒಂದು ಕಾರು ಮತ್ತು 2 ಅಸಲಿ ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಳ್ಳಲಾಗಿರುತ್ತದೆ.
ಆರೋಪಿಗಳನ್ನು ವಿಚಾರಣೆ ನಡೆಸಿದಾಗ ಇವರುಗಳು ಈ ಹಿಂದೆ ಇದೇ ರೀತಿ ಆಂದ್ರ ಪ್ರದೇಶ ರಾಜ್ಯದ ತಿರುಪತಿಯಲ್ಲಿ ರೂ. 50,000.00 ಬೆಲೆಗೆ, ಮಹಾರಾಷ್ಟ್ರ ರಾಜ್ಯದ ಪಂಡರಪುರದಲ್ಲಿ 2 ಲಕ್ಷ ಬೆಲೆಗೆ ಮತ್ತು ಹುಬ್ಬಳ್ಳಿಯಲ್ಲಿ 1.70 ಲಕ್ಷ ಬೆಲೆಗೆ ನಕಲಿ ನಾಣ್ಯಗಳನ್ನು ಸಾರ್ವಜನಿಕರಿಗೆ ವಂಚಿಸಿ ಮಾರಾಟ ಮಾಡಿರುವುದು ತಿಳಿದು ಬಂದಿರುತ್ತದೆ.
ಮೇಲ್ಕಂಡ ಪ್ರಕರಣದಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲು ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡದಲ್ಲಿ ಪಿ.ಐ. ಶ್ರೀ. ಮುತ್ತರಾಜ್, ಪಿ.ಎಸ್.ಐ. ಶ್ರೀ. ನಾಸೀರ್ ಹುಸೇನ್ ಮತ್ತು ಶ್ರೀ. ರಘುನಾಥ್ ಎಸ್. ವಿ., ಎ.ಎಸ್.ಐ. ಶ್ರೀ. ಎಂ. ಸಿ. ಪ್ರಕಾಶ್ ಮತ್ತು ಪೊಲೀಸ್ ಸಿಬ್ಬಂದಿಗಳಾದ ಶ್ರೀ. ವಿನಾಯಕ, ಶ್ರೀ. ರಾಜು, ಶ್ರೀ. ಇಮ್ರಾನ್ ಖಾನ್, ಶ್ರೀ. ಅನ್ವರ್ ಪಾಷಾ,ಶ್ರೀ. ರಮೇಶ, ಶ್ರೀ. ಹರೀಶ್, ಶ್ರೀ. ಮಹೇಂದ್ರ ಮತ್ತು ಶ್ರೀ. ಧರ್ಮರಾಜ್ ರವರು ಭಾಗವಹಿಸಿದ್ದರು.
ಭ್ರಷ್ಟರ ಬೇಟೆ

Recent Posts

ಕಂದಾಯ ಅಧಿಕಾರಿಯ ಪುತ್ರಿ upsc ಆಕಾಂಕ್ಷಿ ಮೇಲೆ ಅತ್ಯಾಚಾರ, ಬಳಿಕ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮನಕಲಕುವ ಹಾಗೂ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹಿರಿಯ ಕಂದಾಯ ಅಧಿಕಾರಿಯ 22 ವರ್ಷದ ಪುತ್ರಿಯನ್ನು…

5 hours ago

ನಿಶ್ಚಿತ ವಧುವಿನ ಭೇಟಿ: ಲೈಂಗಿಕ ಉತ್ತೇಜಕ ಮಾತ್ರೆಗಳ ಅತಿಸೇವನೆಗೆ ಯುವಕ ಬಲಿ..!

ಗುರುಗ್ರಾಮ: ನಿಶ್ಚಿತ ವಧುವನ್ನು ಭೇಟಿಯಾಗುವ ನಿರೀಕ್ಷೆಯಲ್ಲಿ ಇದ್ದ ಯುವಕನೊಬ್ಬ, ಲೈಂಗಿಕ ಉತ್ತೇಜಕ ಮಾತ್ರೆಗಳನ್ನು ಮಿತಿಮೀರಿ ಸೇವಿಸಿದ ಪರಿಣಾಮ ಹೃದಯಾಘಾತದಿಂದ ಮೃತಪಟ್ಟ…

5 hours ago

ಡಾ. ರಾಜ್‌ಕುಮಾರ್ ಸಮಾಧಿ ಭೂಮಿ ವಿವಾದ: ನಟ ಚೇತನ್ ಪೋಸ್ಟ್‌ಗೆ ಆಕ್ರೋಶ, ಪರ-ವಿರೋಧ ಚರ್ಚೆ ತೀವ್ರ

ಕನ್ನಡ ಚಿತ್ರರಂಗದ ದಿಗ್ಗಜ ಡಾ. ರಾಜ್‌ಕುಮಾರ್ ಅವರ ಸಮಾಧಿಗೆ ಮೀಸಲಾದ 2.5 ಎಕರೆ ಭೂಮಿ ವಿಚಾರವಾಗಿ ನಟ ಚೇತನ್ ಅಹಿಂಸಾ…

18 hours ago

ಪ್ರೇಮ ವಿಚಾರಕ್ಕೆ ರಕ್ತರಂಜಿತ ತಿರುವು: ಶಿವಮೊಗ್ಗದಲ್ಲಿ ಅಪ್ರಾಪ್ತ ಬಾಲಕನ ಮೇಲೆ ಭೀಕರ ದಾಳಿ

ಪ್ರೀತಿಯ ವಿಚಾರವಾಗಿ ಉಂಟಾದ ಮನಸ್ತಾಪವು ಭೀಕರ ಹಲ್ಲೆಗೆ ತಿರುಗಿದ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಯುವಕರ ಗುಂಪೊಂದು 17 ವರ್ಷದ…

18 hours ago

ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ಪ್ರೇಮ ತ್ರಿಕೋನ ಡ್ರಾಮಾ: ನಡುರಸ್ತೆಯಲ್ಲಿ ಯುವಕರ ಗಲಾಟೆ ವೈರಲ್

ಬೆಂಗಳೂರು ನಗರದ ಪ್ರಮುಖ ವಸತಿ ಪ್ರದೇಶಗಳಲ್ಲಿ ಒಂದಾದ HSR Layout ಇತ್ತೀಚೆಗೆ ವಿಭಿನ್ನ ಕಾರಣಕ್ಕೆ ಸುದ್ದಿಯಲ್ಲಿದೆ. ಯುವತಿಯೊಬ್ಬಳ ವಿಚಾರವಾಗಿ ಹಳೆಯ…

18 hours ago

ಮಾದಕ ವ್ಯಸನದ ಬೆನ್ನೇರಿ ಮಗನಿಂದ ತಾಯಿ ಹತ್ಯೆ: ಕಣ್ಣೂರಿನಲ್ಲಿ ಹೃದಯ ಕಲಕುವ ಘಟನೆ

ಕೇರಳದ ಕಣ್ಣೂರು ಜಿಲ್ಲೆ ವ್ಯಾಪ್ತಿಯ ಕೇಳಕಂ ಸಮೀಪದ ಕಾಣಿಚಾರ್‌ನಲ್ಲಿ ಮನಕಲಕುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಮಾದಕ ವ್ಯಸನಕ್ಕೆ ಒಳಗಾಗಿದ್ದ…

18 hours ago