Latest

ಕಲಾಸಿಪಾಳ್ಯ ಮಚ್ಚು ದಾಳಿ: ರಾತ್ರಿ ಬೇಟೆಯಾದ ನಾಗರಿಕ, ಪೊಲೀಸರ ಪೆಟ್ರೋಲಿಂಗ್ ಮೇಲೆ ಪ್ರಶ್ನೆ

ಬೆಂಗಳೂರು ನಗರದಲ್ಲಿ ಪುಂಡರು ಎಚ್ಚರಿಕೆಯಿಂದಲೇ ಅಟ್ಟಹಾಸ ಮೆರೆದಿರುವ ಮತ್ತೊಂದು ಘಟನೆ ನಡೆದಿದೆ. ಕಲಾಸಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದಾಳಿಯಲ್ಲಿ, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಮಧ್ಯರಾತ್ರಿ ಅಪರಿಚಿತರಿಂದ ಮಚ್ಚು ದಾಳಿಗೆ ಒಳಗಾಗಿದ್ದಾರೆ.

ಘಟನೆ ವಿವರ:
ಆಗಸ್ಟ್ 2ರ ರಾತ್ರಿ 10.30ರ ಸುಮಾರಿಗೆ ಜೆ.ಸಿ. ರಸ್ತೆಯೊಂದರಲ್ಲಿ ಹರೀಶ್ ಕುಮಾರ್ (38) ಎಂಬವರು ಮನೆ ಕಡೆ ನಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಬೈಕ್‌ನಲ್ಲಿ ಆಗಮಿಸಿದ್ದ ಇಬ್ಬರು ಅಪರಿಚಿತರು, ದಾರಿ ವಿಚಾರದ ವಿಚಾರದಲ್ಲಿ ವಾದವಿವಾದ ತಲೆದೋರಿಸಿ, ಮಾತಿಗೆ ಮಾತು ಬೆಳೆದು ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. “ಮುಂದೆ ಡೆಡ್ ಎಂಡ್, ದಾರಿ ಇಲ್ಲ” ಎಂದು ಹರೀಶ್ ಎಚ್ಚರಿಕೆ ನೀಡಿದ್ದಕ್ಕೆ ಕಿರಿದಾದ ಪುಂಡರು, ತಮ್ಮ ಸೊಂಟದಿಂದ ಮಚ್ಚು ತೆಗೆದು ಎದೆ ಭಾಗಕ್ಕೆ ಹೊಡೆದಿದ್ದಾರೆ.

ಗಂಭೀರವಾಗಿ ಗಾಯಗೊಂಡ ಹರೀಶ್ ಅವರನ್ನು ಕೂಡಲೇ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೈಟ್ ಪೆಟ್ರೋಲಿಂಗ್ ಮೇಲೆ ಪ್ರಶ್ನೆ:
ಈ ಘಟನೆ ಮಾದರಿಯಾಗಿ, ಬೆಂಗಳೂರಿನಲ್ಲಿ ಪೊಲೀಸರ ರಾತ್ರಿ ಪೆಟ್ರೋಲಿಂಗ್‌ ಬಗ್ಗೆ ಸಾರ್ವಜನಿಕರಲ್ಲಿ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇತ್ತೀಚೆಗಷ್ಟೆ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸ್ವತಃ ರಾತ್ರಿ ಪಟ್ರೋಲ್‌ ಗಾಗಿ ರಸ್ತೆಗೆ ಇಳಿದಿದ್ದರೂ, ಇಂತಹ ದಾಳಿ ನಡೆದಿರುವುದು ಪೊಲೀಸರ ನಿರ್ಲಕ್ಷ್ಯವೋ ಎಂಬ ಅನುಮಾನಕ್ಕೆ ಕಾರಣವಾಗಿದೆ.

ಇತ್ತೀಚಿನ ದಿನಗಳಲ್ಲಿ ಮಚ್ಚು ಕ್ಯಾಂಪೆಗಳ ದಾಳಿಗಳು ಪುನರಾವರ್ತನೆಯಾಗುತ್ತಿರುವುದು ಸಾರ್ವಜನಿಕರಲ್ಲಿ ಭಯ ಮನೆ ಮಾಡಿದೆ. ಎದೆಯಲ್ಲಿ ಮಚ್ಚು ಇಟ್ಟುಕೊಂಡು ಓಡಾಡುವವರನ್ನು ತಕ್ಷಣ ಪತ್ತೆ ಹಾಕುವ ತುರ್ತು ಕ್ರಮವಿಲ್ಲದಿದ್ದರೆ, ಈ ಅಪರಾಧಗಳು ಮುಂದುವರಿಯುವ ಸಾಧ್ಯತೆ ಹೆಚ್ಚು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

nazeer ahamad

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago