ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಲ್ಲಿ ಆರಂಭಿಕ ಸಾಕ್ಷರತೆ ಮತ್ತು ಸಂಖ್ಯಾಜ್ಞಾನ (FLN) ಕೌಶಲ್ಯಗಳನ್ನು ಬಲಪಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ (DSERT) ‘ಕಲಿಕಾ ದೀಪ’ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ನಿರ್ಧರಿಸಿದೆ. 2026-27ರೊಳಗೆ ಈ ಗುರಿ ಸಾಧಿಸುವ ಉದ್ದೇಶದಿಂದ AI ಆಧಾರಿತ ಈ ಯೋಜನೆ ಆರಂಭವಾಗುತ್ತಿದೆ.
ಈ ಯೋಜನೆಯಡಿ ರಾಜ್ಯದ ಆಯ್ದ 1,145 ಶಾಲೆಗಳ ಸುಮಾರು 1,44,062 ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ.
ಯೋಜನೆಯ ಪ್ರಮುಖ ಉದ್ದೇಶ:
4ರಿಂದ 6ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಲ್ಲಿ ಕನ್ನಡ, ಇಂಗ್ಲಿಷ್ ಹಾಗೂ ಗಣಿತ ವಿಷಯಗಳಲ್ಲಿ ಮೂಲಭೂತ ಪ್ರಾವೀಣ್ಯತೆ ಹೆಚ್ಚಿಸುವುದು.
ವಿಶೇಷ ವೈಶಿಷ್ಟ್ಯಗಳು:
ಪ್ರತಿ ವಿದ್ಯಾರ್ಥಿಗೂ ‘ಕಲಿಕಾ ದೀಪ’ ಪೋರ್ಟಲ್ನಲ್ಲಿ ಲಾಗಿನ್ ಆಗಲು ಯೂನಿಕ್ ಸ್ಟೂಡೆಂಟ್ ಐಡಿ ನೀಡಲಾಗುತ್ತದೆ. ಈ ಐಡಿ ಮೂಲಕ ಮಕ್ಕಳು ಡಿಜಿಟಲ್ ಪಾಠಗಳನ್ನು ಸ್ವಯಂ ಕಲಿಯುವ ಅವಕಾಶ ಪಡೆಯುತ್ತಾರೆ.
ವೇಳಾಪಟ್ಟಿ:
ಫೆಬ್ರವರಿ ಮತ್ತು ಮಾರ್ಚ್ ತಿಂಗಳಲ್ಲಿ ವಾರಕ್ಕೆ 3 ದಿನ, ದಿನಕ್ಕೆ 40 ನಿಮಿಷಗಳ ಕಾಲ (20 ನಿಮಿಷ ಭಾಷೆ, 20 ನಿಮಿಷ ಗಣಿತ) ಈ ಕಾರ್ಯಕ್ರಮ ನಡೆಸಲಾಗುತ್ತದೆ.
ಶಿಕ್ಷಕರ ತರಬೇತಿ:
ಈಗಾಗಲೇ ಸುಮಾರು 5,000 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಪ್ರತಿ ಶಾಲೆಯಲ್ಲಿ ‘ನೋಡಲ್ ಶಿಕ್ಷಕ’ರನ್ನು ನೇಮಿಸಿ ಯೋಜನೆ ಅನುಷ್ಠಾನಗೊಳಿಸಲಾಗುತ್ತದೆ.
ಅನುಷ್ಠಾನ ಕ್ರಮಗಳು:
ಶಾಲೆಗಳಲ್ಲಿ ಕಂಪ್ಯೂಟರ್, ಇಂಟರ್ನೆಟ್ ಮತ್ತು ಹೆಡ್ಸೆಟ್ ಸೌಲಭ್ಯ ಇರುವುದನ್ನು ಖಚಿತಪಡಿಸಿಕೊಳ್ಳುವುದು
ಏಕ್ ಸ್ಟೆಪ್ (EkStep) ಸಂಸ್ಥೆಯ ಸಹಯೋಗದಲ್ಲಿ ಸಿದ್ಧಪಡಿಸಿದ ಪೋರ್ಟಲ್ ಮೂಲಕ ಡಿಜಿಟಲ್ ಕಲಿಕೆ
ವಿದ್ಯಾರ್ಥಿಗಳ ಪ್ರಗತಿಯನ್ನು ಆನ್ಲೈನ್ ಡ್ಯಾಶ್ಬೋರ್ಡ್ ಮೂಲಕ ನಿರಂತರವಾಗಿ ಮೇಲ್ವಿಚಾರಣೆ
ಜವಾಬ್ದಾರಿಗಳು:
ಮುಖ್ಯ ಶಿಕ್ಷಕರು: ವೇಳಾಪಟ್ಟಿ ರೂಪಿಸಿ, ತಾಂತ್ರಿಕ ಸೌಲಭ್ಯಗಳ ನಿರ್ವಹಣೆ
ಶಿಕ್ಷಕರು: ವಿದ್ಯಾರ್ಥಿಗಳಿಗೆ ಲಾಗಿನ್ ಮತ್ತು ಪಾಠದಲ್ಲಿ ಮಾರ್ಗದರ್ಶನ
DSERT/DIET: ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮೇಲ್ವಿಚಾರಣೆ
ಈ ಯೋಜನೆಗೆ ಸಂಬಂಧಿಸಿದ ತಾಂತ್ರಿಕ ನೆರವಿಗಾಗಿ ಏಕ್ ಸ್ಟೆಪ್ ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.
ಒಟ್ಟಾರೆ, ‘ಕಲಿಕಾ ದೀಪ’ ಯೋಜನೆ ಮೂಲಕ ರಾಜ್ಯದ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಕಲಿಕಾ ಮಟ್ಟವನ್ನು ಡಿಜಿಟಲ್ ತಂತ್ರಜ್ಞಾನ ಬಳಸಿ ಮತ್ತಷ್ಟು ಸುಧಾರಿಸಲು ಸರ್ಕಾರ ಮುಂದಾಗಿದೆ.
ಗುಜರಾತಿನ ರಾಜ್ಕೋಟ್ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…
ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…
ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…
ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…
ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…