ಪತಿಗೆ ಲೈಂಗಿಕ ಆಸೆ ಇಲ್ಲ ಎಂದು ವಿವಾಹಿತ ಮಹಿಳೆ ಬೇರೊಬ್ಬನ ಜೊತೆ ಸಂಬಂಧ ಬೆಳೆಸಿಕೊಂಡು ಮುಂದೊಂದು ದಿನ ಗಂಡನೇ ಇವರ ಕಾಮದಾಟಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕಾಗಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಕೇಶ್ ತೊಮಂಗ್ ಕೊಲೆಯಾದವ. ಈತ ವೃತ್ತಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿದ್ದ. ಅಲ್ಲದೆ, ವಿಪರೀತ ಮದ್ಯವ್ಯಸನಿಯಾಗಿದ್ದ. ಪತ್ನಿ ದೇವಿ ತೊಮಾಂಗ್, ಪತಿ ರಾಕೇಶ್ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಆಗಾಗ ಊಟ ತಂದು ಕೊಡುತ್ತಿದ್ದಳು. ಈ ವೇಳೆ ಆಕೆಗೆ ಜೈನುಲ್ ಅಲಿ ಅಲಿಯಾಸ್ ಬಾಬು ಅಲಿ ಎಂಬಾತನ ಪರಿಚಯವಾಗಿತ್ತು.
ಆರಂಭದಲ್ಲಿದ್ದ ಪರಿಚಯ ನಂತರದ ದಿನಗಳಲ್ಲಿ ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಪತಿ ಹೆಚ್ಚು ಮದ್ಯ ಸೇವನೆಯಿಂದ ಲೈಂಗಿಕ ಆಸಕ್ತಿ ಕಳೆದುಕೊಂಡಿದ್ದ. ಇದರಿಂದಾಗಿ ದೇವಿ ತೊಮಾಂಗ್ ಬಾಬು ಅಲಿ ಜೊತೆ ಸಂಬಂಧ ಬೆಳೆಸಿದ್ದಳು. ಆಗಾಗ ವಡೇರಹಳ್ಳಿಯ ರಾಕೇಶ್ ನಿವಾಸಕ್ಕೆ ಬಾಬು ಬರುತಿದ್ದ. ಈ ನಡುವೆ ಪತಿಗೆ ಪತ್ನಿಯ ಮೇಲೆ ಅನೈತಿಕ ಸಂಬಂಧದ ಬಗ್ಗೆ ಅನುಮಾನ ಮೂಡಿತ್ತು. ಬಳಿಕ ಆಕೆಗೆ ಎಚ್ಚರಿಕೆ ಸಹ ನೀಡಿದ್ದ.
ಪತಿ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಭಾವಿಸಿ, ಬಾಬು ಜೊತೆ ಸೇರಿಕೊಂಡು ನವೆಂಬರ್ 6ರಂದು ನಿದ್ರೆ ಮಂಪರಿನಲ್ಲಿದ್ದ ರಾಕೇಶ್ನನ್ನು ಕತ್ತು ಇಸುಕಿ ದೇವಿ ತೊಮಂಗ್ ಕೊಲೆ ಮಾಡಿದ್ದಳು. ಇದಾದ ಬಳಿಕ ಅತಿಯಾಗಿ ಮದ್ಯ ಸೇವಿಸಿ ಎದೆ ಉರಿಯಿಂದ ಮೃತಪಟ್ಟಿದ್ದಾನೆಂದು ನಾಟಕವಾಡಿದ್ದಳು. ಆದರೆ ಕತ್ತಿನ ಮೇಲೆ ಗಾಯದ ಗುರುತು ಕಂಡಿದ್ದ ಪೊಲೀಸರು, ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ಪತ್ನಿಯ ಕಳ್ಳಾಟ ಬಯಲಾಗಿದೆ.
ಪ್ರಕರಣ ಸಂಬಂಧ ಮೃತ ರಾಕೇಶ್ ಪತ್ನಿ ದೇವಿ ತೊಮಾಂಗ್ ಹಾಗೂ ಆಕೆಯ ಬಾಯ್ ಫ್ರೆಂಡ್ ಜೈನುಲ್ ಅಲಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…