Latest

ತಹಶೀಲ್ದಾರ್ ಮನೆಗೆ ಕನ್ನ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು.

ಗೋಕಾಕ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಪ್ರದೇಶದಲ್ಲಿರುವ ‌ತಹಸೀಲ್ದಾರ್ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಗೋಕಾಕ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ಆಗಿದ್ದು, ಸುಮಾರು 40 ತೊಲ ಚಿನ್ನ, 20 ಗ್ರಾಂ ಬೆಳ್ಳಿ, ‌5 ಸಾವಿರ ನಗದು ಎಗರಿಸಿ ಪರಾರಿ ಆಗಿದ್ದಾರೆ.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರು ಕೆಲಸದ ನಿಮಿತ್ತ ಮೈಸೂರಿಗೆ ಹೋಗಿದ್ದರು ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತಪಡಿಸಿಕೊಂಡ ಖದೀಮರು ರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ‌ ಕ್ಲೀನರ್ ಬಂದು ನೋಡಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆರಳಚ್ಚು ತಜ್ಞರು, ಗೋಕಾಕ ‌ನಗರ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕನ ಜನತೆ ಆಗಾಗ ನಡೆಯುವ ಕಳ್ಳತನ ಪ್ರಕರಣಗಳಿಂದ ರೋಸಿ ಹೋಗಿದ್ದು, ಲೋಕೊಪಯೋಗಿ ವಸತಿ ಗೃಹದಲ್ಲಿ ಇರುವ ಗೋಕಾಕ ತಹಸೀಲ್ದಾರ್ ಮನೆಗೂ ಕಳ್ಳರು ಕನ್ನ ಹಾಕಿರುವುದು ಆತಂಕ ಹೆಚ್ಚಿಸಿದೆ.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

10 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

10 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

10 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

10 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

10 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

10 hours ago