ಗೋಕಾಕ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಪ್ರದೇಶದಲ್ಲಿರುವ ತಹಸೀಲ್ದಾರ್ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಗೋಕಾಕ ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ಆಗಿದ್ದು, ಸುಮಾರು 40 ತೊಲ ಚಿನ್ನ, 20 ಗ್ರಾಂ ಬೆಳ್ಳಿ, 5 ಸಾವಿರ ನಗದು ಎಗರಿಸಿ ಪರಾರಿ ಆಗಿದ್ದಾರೆ.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರು ಕೆಲಸದ ನಿಮಿತ್ತ ಮೈಸೂರಿಗೆ ಹೋಗಿದ್ದರು ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತಪಡಿಸಿಕೊಂಡ ಖದೀಮರು ರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ ಕ್ಲೀನರ್ ಬಂದು ನೋಡಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆರಳಚ್ಚು ತಜ್ಞರು, ಗೋಕಾಕ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕನ ಜನತೆ ಆಗಾಗ ನಡೆಯುವ ಕಳ್ಳತನ ಪ್ರಕರಣಗಳಿಂದ ರೋಸಿ ಹೋಗಿದ್ದು, ಲೋಕೊಪಯೋಗಿ ವಸತಿ ಗೃಹದಲ್ಲಿ ಇರುವ ಗೋಕಾಕ ತಹಸೀಲ್ದಾರ್ ಮನೆಗೂ ಕಳ್ಳರು ಕನ್ನ ಹಾಕಿರುವುದು ಆತಂಕ ಹೆಚ್ಚಿಸಿದೆ.
ಇತ್ತೀಚಿನ ದಿನಗಳಲ್ಲಿ ಮದುವೆ ವ್ಯವಸ್ಥೆಯು ಹಲವಾರು ಬದಲಾವಣೆಗಳನ್ನು ಕಂಡಿದೆ. ವಧು-ವರರ ಹುಡುಕಾಟ ಹೆಚ್ಚಾಗಿ ಮ್ಯಾಟ್ರಿಮೋನಿ ವೆಬ್ಸೈಟ್ಗಳ ಮೂಲಕ ನಡೆಯುತ್ತಿದ್ದು, ಕೆಲವೊಮ್ಮೆ…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…
ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…
ನಾಸಿಕ್ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…
ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…