Latest

ದ್ವಿಭಾಷಾ ನೀತಿ ಬೆಂಬಲಕ್ಕೆ ಸಿದ್ದರಾಮಯ್ಯ:ಹೇಳಿಕೆ ವಿರುದ್ಧ ಕನ್ನಡಿಗರ ಅಸಮಾಧಾನ.

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವರ್ಷಗಳಿಂದ ದ್ವಿಭಾಷಾ ನೀತಿಯ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಹಿಂದಿ ಭಾಷೆಯ ಅನವಶ್ಯಕ ಹೇರಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದು, ರಾಜ್ಯದ ಸಾರ್ವಜನಿಕರು “ಕನ್ನಡ ಮತ್ತು ಇಂಗ್ಲಿಷ್ ಸಾಕು” ಎಂಬ ಧೋರಣೆಯನ್ನೇ ಬೆಂಬಲಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರವೂ ದ್ವಿಭಾಷಾ ನೀತಿಯನ್ನು ಅಳವಡಿಸಿಕೊಂಡು ಹಿಂದಿ ಹೇರಿಕೆಯಿಂದ ಹಿಂದೆ ಸರಿದಿರುವುದು ಈ ಚರ್ಚೆಗೆ ಹೊಸ ಬಲ ನೀಡಿದೆ.

ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. “ದ್ವಿಭಾಷಾ ನೀತಿ ನನ್ನ ವ್ಯಕ್ತಿಗತ ಅಭಿಪ್ರಾಯ. ಇದನ್ನು ಸರ್ಕಾರದ ನಿಲುವಾಗಿ ರೂಪಾಂತರಗೊಳಿಸಲು ನಾನು ಪ್ರಯತ್ನಿಸುತ್ತಿದ್ದೇನೆ,” ಎಂಬುದಾಗಿ ಅವರು ತಿಳಿಸಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ನಡೆದ ‘ಜನ ಪ್ರಕಾಶನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭ, ಪ್ರೊ. ಬರಗೂರು ರಾಮಚಂದ್ರಪ್ಪ ಸಂಪಾದಿತ ‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಅವರು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿಯ ಮಾತು ಕೇವಲ ಭಾಷಾ ನೀತಿಯ ಬಗ್ಗೆ ಮಾತ್ರವಲ್ಲ, ಕುವೆಂಪು ಅವರ ಸಾಮಾಜಿಕ ಮತ್ತು ವೈಚಾರಿಕ ದೃಷ್ಟಿಕೋನಗಳತ್ತವೂ ಗಮನ ಹರಿಸಿದೆ. “ಕುವೆಂಪು ಜಾತಿ ವಿರೋಧಿ ಚಿಂತನೆ ಹಾಗೂ ವೈಜ್ಞಾನಿಕ ದೃಷ್ಟಿಕೋನ ಹೊಂದಿದ ಮಹಾನ್ ಚಿಂತಕ. ಅವರು ನಂಬಿದ ವಿಚಾರಗಳು ಇಂದು ಕೂಡ ಸಮೃದ್ಧವಾಗಿ ಅಸ್ತಿತ್ವದಲ್ಲಿವೆ,” ಎಂದು ಸಿದ್ದರಾಮಯ್ಯ ಹೇಳಿದರು.

“ಇಂದು ಶಿಕ್ಷಣದ ಮಟ್ಟ ಹೆಚ್ಚಾದರೂ ವೈಜ್ಞಾನಿಕ ಮನೋಭಾವ ಕಡಿಮೆಯಾಗುತ್ತಿದೆ. ಕಂದಾಚಾರ, ಮೌಢ್ಯತೆ ಮತ್ತೆ ಬೆಳೆಯುತ್ತಿದೆ. ಕೇವಲ ಕಾನೂನುಗಳಿಂದ ಬದಲಾವಣೆ ಸಾಧ್ಯವಿಲ್ಲ. ಜನರ ವೈಚಾರಿಕ ಬೆಳವಣಿಗೆ ಅತ್ಯಗತ್ಯ,” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಾಮಾಜಿಕ ಸಂವೇದನೆಗಳ ಬಗ್ಗೆ ಮಾತನಾಡಿದ ಅವರು, “ನಾನು ದೇವಸ್ಥಾನಕ್ಕೆ ಹೋದರೆ ಕುಂಕುಮ ಇಡುತ್ತಾರೆ. ಇದಕ್ಕೂ ಕಥೆ ಕಟ್ಟುತ್ತಾರೆ. ಗ್ರಾಮೀಣ ಭಾಗದಲ್ಲಿ ದೇವಸ್ಥಾನಗಳಿಗೆ ಹೋಗದಿದ್ದರೆ ಮತ್ತೊಂದು ರೀತಿಯಲ್ಲಿ ವ್ಯಾಖ್ಯಾನಿಸುತ್ತಾರೆ. ರಾಜಕಾರಣಿಗಳಾಗಿ ನಾವಿಗೂ ಕೆಲವು ಮಿತಿಗಳು ಇರುತ್ತವೆ,” ಎಂದು ವಿವರಿಸಿದರು.

ಅವರು ಮುಂದುವರಿದು, “ಸಂವಿಧಾನದ ಪೀಠಿಕೆ ಓದುವ ಅಭಿಯಾನ ಹಾಗೂ ಸಂವಿಧಾನ ಮೌಲ್ಯಗಳ ಅರಿವಿಗೆ ನಾವು ಗಮನ ಹರಿಸುತ್ತಿದ್ದೇವೆ. ಕುವೆಂಪು, ಬಸವಣ್ಣರಂತಹ ಚಿಂತಕರ ಆಶಯಗಳು ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇವುಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ,” ಎಂದರು.

“ಗುಡಿಯ ಮಿತಿಗಳನ್ನು ಮೀರಿ, ಸಮಾಜದ ಮೂಲ ಸಮಸ್ಯೆಗಳಾದ ಬಡತನ, ಅಸಮಾನತೆಯಗಳನ್ನು ಕಿತ್ತು ಹಾಕುವಂತೆ ಕುವೆಂಪು ನೀಡಿದ ಕರೆ ಇಂದು ಹೆಚ್ಚು ಪ್ರಸ್ತುತವಾಗಿದೆ. ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ಮಾನವ ಸಮುದಾಯಕ್ಕೆ ಅನ್ವಯವಾಗುವಂತಹ ಕುವೆಂಪು ಅವರ ಮೌಲ್ಯಗಳು ಇತರೆ ಭಾಷೆಗಳಿಗೆ ಸಹ ಅನುವಾದಗೊಳ್ಳಲಿ ಎಂಬುದು ನನ್ನ ಬಯಕೆ,” ಎಂದು ಅವರು ಸಮಾರೋಪಿಸಿದರು.

 

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago