Latest

ದ್ವಿಭಾಷಾ ನೀತಿ ಬೆಂಬಲಕ್ಕೆ ಸಿದ್ದರಾಮಯ್ಯ:ಹೇಳಿಕೆ ವಿರುದ್ಧ ಕನ್ನಡಿಗರ ಅಸಮಾಧಾನ.

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವರ್ಷಗಳಿಂದ ದ್ವಿಭಾಷಾ ನೀತಿಯ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಹಿಂದಿ ಭಾಷೆಯ ಅನವಶ್ಯಕ ಹೇರಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದು, ರಾಜ್ಯದ ಸಾರ್ವಜನಿಕರು “ಕನ್ನಡ ಮತ್ತು ಇಂಗ್ಲಿಷ್ ಸಾಕು” ಎಂಬ ಧೋರಣೆಯನ್ನೇ ಬೆಂಬಲಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರವೂ ದ್ವಿಭಾಷಾ ನೀತಿಯನ್ನು ಅಳವಡಿಸಿಕೊಂಡು ಹಿಂದಿ ಹೇರಿಕೆಯಿಂದ ಹಿಂದೆ ಸರಿದಿರುವುದು ಈ ಚರ್ಚೆಗೆ ಹೊಸ ಬಲ ನೀಡಿದೆ.

ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. “ದ್ವಿಭಾಷಾ ನೀತಿ ನನ್ನ ವ್ಯಕ್ತಿಗತ ಅಭಿಪ್ರಾಯ. ಇದನ್ನು ಸರ್ಕಾರದ ನಿಲುವಾಗಿ ರೂಪಾಂತರಗೊಳಿಸಲು ನಾನು ಪ್ರಯತ್ನಿಸುತ್ತಿದ್ದೇನೆ,” ಎಂಬುದಾಗಿ ಅವರು ತಿಳಿಸಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ನಡೆದ ‘ಜನ ಪ್ರಕಾಶನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭ, ಪ್ರೊ. ಬರಗೂರು ರಾಮಚಂದ್ರಪ್ಪ ಸಂಪಾದಿತ ‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಅವರು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿಯ ಮಾತು ಕೇವಲ ಭಾಷಾ ನೀತಿಯ ಬಗ್ಗೆ ಮಾತ್ರವಲ್ಲ, ಕುವೆಂಪು ಅವರ ಸಾಮಾಜಿಕ ಮತ್ತು ವೈಚಾರಿಕ ದೃಷ್ಟಿಕೋನಗಳತ್ತವೂ ಗಮನ ಹರಿಸಿದೆ. “ಕುವೆಂಪು ಜಾತಿ ವಿರೋಧಿ ಚಿಂತನೆ ಹಾಗೂ ವೈಜ್ಞಾನಿಕ ದೃಷ್ಟಿಕೋನ ಹೊಂದಿದ ಮಹಾನ್ ಚಿಂತಕ. ಅವರು ನಂಬಿದ ವಿಚಾರಗಳು ಇಂದು ಕೂಡ ಸಮೃದ್ಧವಾಗಿ ಅಸ್ತಿತ್ವದಲ್ಲಿವೆ,” ಎಂದು ಸಿದ್ದರಾಮಯ್ಯ ಹೇಳಿದರು.

“ಇಂದು ಶಿಕ್ಷಣದ ಮಟ್ಟ ಹೆಚ್ಚಾದರೂ ವೈಜ್ಞಾನಿಕ ಮನೋಭಾವ ಕಡಿಮೆಯಾಗುತ್ತಿದೆ. ಕಂದಾಚಾರ, ಮೌಢ್ಯತೆ ಮತ್ತೆ ಬೆಳೆಯುತ್ತಿದೆ. ಕೇವಲ ಕಾನೂನುಗಳಿಂದ ಬದಲಾವಣೆ ಸಾಧ್ಯವಿಲ್ಲ. ಜನರ ವೈಚಾರಿಕ ಬೆಳವಣಿಗೆ ಅತ್ಯಗತ್ಯ,” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಾಮಾಜಿಕ ಸಂವೇದನೆಗಳ ಬಗ್ಗೆ ಮಾತನಾಡಿದ ಅವರು, “ನಾನು ದೇವಸ್ಥಾನಕ್ಕೆ ಹೋದರೆ ಕುಂಕುಮ ಇಡುತ್ತಾರೆ. ಇದಕ್ಕೂ ಕಥೆ ಕಟ್ಟುತ್ತಾರೆ. ಗ್ರಾಮೀಣ ಭಾಗದಲ್ಲಿ ದೇವಸ್ಥಾನಗಳಿಗೆ ಹೋಗದಿದ್ದರೆ ಮತ್ತೊಂದು ರೀತಿಯಲ್ಲಿ ವ್ಯಾಖ್ಯಾನಿಸುತ್ತಾರೆ. ರಾಜಕಾರಣಿಗಳಾಗಿ ನಾವಿಗೂ ಕೆಲವು ಮಿತಿಗಳು ಇರುತ್ತವೆ,” ಎಂದು ವಿವರಿಸಿದರು.

ಅವರು ಮುಂದುವರಿದು, “ಸಂವಿಧಾನದ ಪೀಠಿಕೆ ಓದುವ ಅಭಿಯಾನ ಹಾಗೂ ಸಂವಿಧಾನ ಮೌಲ್ಯಗಳ ಅರಿವಿಗೆ ನಾವು ಗಮನ ಹರಿಸುತ್ತಿದ್ದೇವೆ. ಕುವೆಂಪು, ಬಸವಣ್ಣರಂತಹ ಚಿಂತಕರ ಆಶಯಗಳು ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇವುಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ,” ಎಂದರು.

“ಗುಡಿಯ ಮಿತಿಗಳನ್ನು ಮೀರಿ, ಸಮಾಜದ ಮೂಲ ಸಮಸ್ಯೆಗಳಾದ ಬಡತನ, ಅಸಮಾನತೆಯಗಳನ್ನು ಕಿತ್ತು ಹಾಕುವಂತೆ ಕುವೆಂಪು ನೀಡಿದ ಕರೆ ಇಂದು ಹೆಚ್ಚು ಪ್ರಸ್ತುತವಾಗಿದೆ. ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ಮಾನವ ಸಮುದಾಯಕ್ಕೆ ಅನ್ವಯವಾಗುವಂತಹ ಕುವೆಂಪು ಅವರ ಮೌಲ್ಯಗಳು ಇತರೆ ಭಾಷೆಗಳಿಗೆ ಸಹ ಅನುವಾದಗೊಳ್ಳಲಿ ಎಂಬುದು ನನ್ನ ಬಯಕೆ,” ಎಂದು ಅವರು ಸಮಾರೋಪಿಸಿದರು.

 

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago