Latest

ದ್ವಿಭಾಷಾ ನೀತಿ ಬೆಂಬಲಕ್ಕೆ ಸಿದ್ದರಾಮಯ್ಯ:ಹೇಳಿಕೆ ವಿರುದ್ಧ ಕನ್ನಡಿಗರ ಅಸಮಾಧಾನ.

ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಕೆಲವರ್ಷಗಳಿಂದ ದ್ವಿಭಾಷಾ ನೀತಿಯ ವಿಚಾರವಾಗಿ ತೀವ್ರ ಚರ್ಚೆ ನಡೆಯುತ್ತಿದೆ. ಹಿಂದಿ ಭಾಷೆಯ ಅನವಶ್ಯಕ ಹೇರಿಕೆಗೆ ವಿರೋಧ ವ್ಯಕ್ತವಾಗುತ್ತಿದ್ದು, ರಾಜ್ಯದ ಸಾರ್ವಜನಿಕರು “ಕನ್ನಡ ಮತ್ತು ಇಂಗ್ಲಿಷ್ ಸಾಕು” ಎಂಬ ಧೋರಣೆಯನ್ನೇ ಬೆಂಬಲಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರವೂ ದ್ವಿಭಾಷಾ ನೀತಿಯನ್ನು ಅಳವಡಿಸಿಕೊಂಡು ಹಿಂದಿ ಹೇರಿಕೆಯಿಂದ ಹಿಂದೆ ಸರಿದಿರುವುದು ಈ ಚರ್ಚೆಗೆ ಹೊಸ ಬಲ ನೀಡಿದೆ.

ಇಂತಹ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. “ದ್ವಿಭಾಷಾ ನೀತಿ ನನ್ನ ವ್ಯಕ್ತಿಗತ ಅಭಿಪ್ರಾಯ. ಇದನ್ನು ಸರ್ಕಾರದ ನಿಲುವಾಗಿ ರೂಪಾಂತರಗೊಳಿಸಲು ನಾನು ಪ್ರಯತ್ನಿಸುತ್ತಿದ್ದೇನೆ,” ಎಂಬುದಾಗಿ ಅವರು ತಿಳಿಸಿದ್ದಾರೆ. ಅವರು ಇಂದು ಬೆಂಗಳೂರಿನಲ್ಲಿ ನಡೆದ ‘ಜನ ಪ್ರಕಾಶನ’ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಈ ಸಂದರ್ಭ, ಪ್ರೊ. ಬರಗೂರು ರಾಮಚಂದ್ರಪ್ಪ ಸಂಪಾದಿತ ‘ಕುವೆಂಪು ವಿಚಾರ ಕ್ರಾಂತಿ’ ಕೃತಿಯನ್ನು ಅವರು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿಯ ಮಾತು ಕೇವಲ ಭಾಷಾ ನೀತಿಯ ಬಗ್ಗೆ ಮಾತ್ರವಲ್ಲ, ಕುವೆಂಪು ಅವರ ಸಾಮಾಜಿಕ ಮತ್ತು ವೈಚಾರಿಕ ದೃಷ್ಟಿಕೋನಗಳತ್ತವೂ ಗಮನ ಹರಿಸಿದೆ. “ಕುವೆಂಪು ಜಾತಿ ವಿರೋಧಿ ಚಿಂತನೆ ಹಾಗೂ ವೈಜ್ಞಾನಿಕ ದೃಷ್ಟಿಕೋನ ಹೊಂದಿದ ಮಹಾನ್ ಚಿಂತಕ. ಅವರು ನಂಬಿದ ವಿಚಾರಗಳು ಇಂದು ಕೂಡ ಸಮೃದ್ಧವಾಗಿ ಅಸ್ತಿತ್ವದಲ್ಲಿವೆ,” ಎಂದು ಸಿದ್ದರಾಮಯ್ಯ ಹೇಳಿದರು.

“ಇಂದು ಶಿಕ್ಷಣದ ಮಟ್ಟ ಹೆಚ್ಚಾದರೂ ವೈಜ್ಞಾನಿಕ ಮನೋಭಾವ ಕಡಿಮೆಯಾಗುತ್ತಿದೆ. ಕಂದಾಚಾರ, ಮೌಢ್ಯತೆ ಮತ್ತೆ ಬೆಳೆಯುತ್ತಿದೆ. ಕೇವಲ ಕಾನೂನುಗಳಿಂದ ಬದಲಾವಣೆ ಸಾಧ್ಯವಿಲ್ಲ. ಜನರ ವೈಚಾರಿಕ ಬೆಳವಣಿಗೆ ಅತ್ಯಗತ್ಯ,” ಎಂದು ಅವರು ಆತಂಕ ವ್ಯಕ್ತಪಡಿಸಿದರು.

ಸಾಮಾಜಿಕ ಸಂವೇದನೆಗಳ ಬಗ್ಗೆ ಮಾತನಾಡಿದ ಅವರು, “ನಾನು ದೇವಸ್ಥಾನಕ್ಕೆ ಹೋದರೆ ಕುಂಕುಮ ಇಡುತ್ತಾರೆ. ಇದಕ್ಕೂ ಕಥೆ ಕಟ್ಟುತ್ತಾರೆ. ಗ್ರಾಮೀಣ ಭಾಗದಲ್ಲಿ ದೇವಸ್ಥಾನಗಳಿಗೆ ಹೋಗದಿದ್ದರೆ ಮತ್ತೊಂದು ರೀತಿಯಲ್ಲಿ ವ್ಯಾಖ್ಯಾನಿಸುತ್ತಾರೆ. ರಾಜಕಾರಣಿಗಳಾಗಿ ನಾವಿಗೂ ಕೆಲವು ಮಿತಿಗಳು ಇರುತ್ತವೆ,” ಎಂದು ವಿವರಿಸಿದರು.

ಅವರು ಮುಂದುವರಿದು, “ಸಂವಿಧಾನದ ಪೀಠಿಕೆ ಓದುವ ಅಭಿಯಾನ ಹಾಗೂ ಸಂವಿಧಾನ ಮೌಲ್ಯಗಳ ಅರಿವಿಗೆ ನಾವು ಗಮನ ಹರಿಸುತ್ತಿದ್ದೇವೆ. ಕುವೆಂಪು, ಬಸವಣ್ಣರಂತಹ ಚಿಂತಕರ ಆಶಯಗಳು ನಮ್ಮ ಸಂವಿಧಾನದಲ್ಲಿ ಅಡಕವಾಗಿವೆ. ಇವುಗಳನ್ನು ಜನತೆಗೆ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ,” ಎಂದರು.

“ಗುಡಿಯ ಮಿತಿಗಳನ್ನು ಮೀರಿ, ಸಮಾಜದ ಮೂಲ ಸಮಸ್ಯೆಗಳಾದ ಬಡತನ, ಅಸಮಾನತೆಯಗಳನ್ನು ಕಿತ್ತು ಹಾಕುವಂತೆ ಕುವೆಂಪು ನೀಡಿದ ಕರೆ ಇಂದು ಹೆಚ್ಚು ಪ್ರಸ್ತುತವಾಗಿದೆ. ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ಮಾನವ ಸಮುದಾಯಕ್ಕೆ ಅನ್ವಯವಾಗುವಂತಹ ಕುವೆಂಪು ಅವರ ಮೌಲ್ಯಗಳು ಇತರೆ ಭಾಷೆಗಳಿಗೆ ಸಹ ಅನುವಾದಗೊಳ್ಳಲಿ ಎಂಬುದು ನನ್ನ ಬಯಕೆ,” ಎಂದು ಅವರು ಸಮಾರೋಪಿಸಿದರು.

 

nazeer ahamad

Recent Posts

ಭಟ್ಕಳ ಘಟನೆಗೆ ಹೊಸ ತಿರುವು: ಯುವತಿಯ ದೂರಿನ ಮೇರೆಗೆ ಮುಸ್ಲಿಂ ಯುವಕ ಬಂಧನ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ಮಹಿಳಾ ಸಹೋದ್ಯೋಗಿಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಕಾರಿನಲ್ಲಿ ಕರೆದೊಯ್ದ ಆರೋಪದ ಹಿನ್ನೆಲೆಯಲ್ಲಿ…

13 hours ago

ಅಧಿಕಾರಿಗೆ ಚಪ್ಪಲಿ ಏಟು: 20 ವರ್ಷವಾದರೂ ಭೂ ಪರಿಹಾರ ನೀಡದ ಬಾಗಲಕೋಟೆ ಅಧಿಕಾರಿಗಳಿಗೆ ಲೋಕಾಯುಕ್ತ ಸಮನ್ಸ್

ಬಾಗಲಕೋಟೆ: ಸುಮಾರು 20 ವರ್ಷಗಳ ಹಿಂದೆ ಭೂಸ್ವಾಧೀನಪಡಿಸಿಕೊಂಡ ಜಮೀನಿಗೆ ಇನ್ನೂ ಪರಿಹಾರ ನೀಡದೇ ರೈತನನ್ನು ಅಲೆದಾಡಿಸಿರುವ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ…

21 hours ago

ಸಾರ್ವಜನಿಕರ ದೂರುಗಳ ಬೆನ್ನಲ್ಲೇ ದಾಸನಪುರ ಗ್ರಾಮ ಪಂಚಾಯಿತಿ ಪಿಡಿಓ ಉಷಾ ಅಮಾನತು

ಬೆಂಗಳೂರು: ಅಧಿಕೃತ ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ತಾಲೂಕಿನ ದಾಸನಪುರ ಗ್ರಾಮ ಪಂಚಾಯಿತಿಯ ಅಭಿವೃದ್ಧಿ…

21 hours ago

ರೈತರ ಹಣ ಗುಳುಂ: ತೊಂಡೇಭಾವಿ ಹಾಲು ಡೇರಿಯಲ್ಲಿ ₹2.33 ಲಕ್ಷ ಹಣ ದುರುಪಯೋಗ.!

ಗೌರಿಬಿದನೂರು: ತೊಂಡೇಭಾವಿ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ರೈತರ ಹಣ ದುರುಪಯೋಗವಾಗಿರುವ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಗ್ರಾಮಸ್ಥರು ಹಾಗೂ…

21 hours ago

₹50 ಸಾವಿರ ಲಂಚ ಸ್ವೀಕರಿಸುವಾಗ ಪಿಎಸ್‌ಐ, ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ

ಕಲಬುರಗಿ: ರಾಜ್ಯದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ನಡೆಸುತ್ತಿರುವ ಕಾರ್ಯಾಚರಣೆ ಮುಂದುವರಿದಿದ್ದು, ಕಲಬುರಗಿ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್…

22 hours ago

4ನೇ ತರಗತಿ ಓದಿದ ಮೆಕ್ಯಾನಿಕ್‌ನ ಅದ್ಭುತ ಸಾಧನೆ: ಮಾರುತಿ 800 ಅನ್ನು ಲ್ಯಾಂಬೋರ್ಗಿನಿಯನ್ನಾಗಿ ಮಾಡಿದ ಕನ್ನಡಿಗ!

ಈ ಕಾಲದಲ್ಲಿ ಪ್ರತಿಭೆ ಮತ್ತು ಕ್ರಿಯೇಟಿವಿಟಿಗೆ ಯಾವುದೇ ವಿದ್ಯಾರ್ಹತೆ ಅಥವಾ ದೊಡ್ಡ ಹುದ್ದೆಗಳ ಅಗತ್ಯವಿಲ್ಲ ಎಂಬುದನ್ನು ಹಾಸನ ಜಿಲ್ಲೆಯ ಅರಸೀಕೆರೆಯ…

22 hours ago