Categories: CrimeLatest

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಸಾವಿನ ಪ್ರಕರಣ; ಶಿಕ್ಷಕ ಅಬ್ಬು ತಲಹ್ ಬಂಧನ!

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ (15) ಸಾವಿನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಕರಣದ ಪ್ರಮುಖ ಆರೋಪಿ ಎಂದು ಪರಿಗಣಿಸಲಾಗಿರುವ ಶಿಕ್ಷಕ ಹಾಗೂ ವಸತಿ ನಿಲಯದ ಪ್ರಭಾರಿ ವಾರ್ಡನ್ ಅಬ್ಬು ತಲಹ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್ 9ರಂದು ಗೋಕುಲ ಕೃಷ್ಣ ಗೌಡ ಸಾವನ್ನಪ್ಪಿದ್ದ ಘಟನೆ ಆರಂಭದಲ್ಲಿ ಆತ್ಮಹತ್ಯೆ ಎಂದು ಬಿಂಬಿಸಲಾಗಿತ್ತು. ಆದರೆ ನಂತರ ಪ್ರಕರಣ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಮೃ.ta ವಿದ್ಯಾರ್ಥಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಸವಿಸ್ತಾರ ತನಿಖೆ ಕೈಗೊಂಡಿದ್ದರು.

ತನಿಖೆ ವೇಳೆ, ಶಾಲೆಯ 9ನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅಬ್ಬು ತಲಹ್ ಅನುಚಿತವಾಗಿ ವರ್ತಿಸಿದ್ದರೆಂಬ ಆರೋಪ ಬೆಳಕಿಗೆ ಬಂದಿದೆ. ಈ ಘಟನೆಯನ್ನು ಗೋಕುಲ ಗೌಡ ನೋಡಿದ್ದು, ಬಳಿಕ ಶಿಕ್ಷಕ ಮತ್ತು ವಿದ್ಯಾರ್ಥಿಯ ನಡುವೆ ಗಲಾಟೆ ನಡೆದಿತ್ತು ಎನ್ನಲಾಗಿದೆ. ಅಲ್ಲದೇ, ಅಬ್ಬು ತಲಹ್ ತಮ್ಮ ಮೇಲೆ ಹಲ್ಲೆ ನಡೆಸಿರುವುದಾಗಿ ಗೋಕುಲ ಗೌಡ ಸಾವಿಗೂ ಮುನ್ನ ತಾಯಿಯ ಬಳಿ ಹೇಳಿಕೊಂಡಿದ್ದರು ಎಂಬ ಮಾಹಿತಿ ತನಿಖೆಯಲ್ಲಿ ಹೊರಬಂದಿದೆ.

ಗೋಕುಲ ಸಾವಿನ ದಿನ ವಸತಿ ಶಾಲೆಯಲ್ಲಿ ವಿದ್ಯುತ್ ಕಡಿತವಾಗಿದ್ದ ಸಂಗತಿ ಸೇರಿದಂತೆ ಹಲವು ಅನುಮಾನಾಸ್ಪದ ಅಂಶಗಳು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ಮತ್ತಷ್ಟು ತೀವ್ರಗೊಂಡಿತ್ತು. ಶಿಕ್ಷಕರ ವರ್ತನೆ ಮತ್ತು ಗೋಕುಲನ ಮೇಲೆ ನಡೆದಿದ್ದ ಹಲ್ಲೆ ಕುರಿತ ಮಾಹಿತಿಯನ್ನು ಮೃta ವಿದ್ಯಾರ್ಥಿಯ ತಾಯಿ ಪೊಲೀಸರಿಗೆ ನೀಡಿದ್ದು, ಇದೇ ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ ಎಂದು ಹೇಳಲಾಗುತ್ತಿದೆ.

ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಸಿದ್ದಾಪುರದಲ್ಲಿ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಜನರ ಒತ್ತಡ ಮತ್ತು ತನಿಖೆಯಲ್ಲಿ ಲಭ್ಯವಾದ ಮಾಹಿತಿ ಆಧರಿಸಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದರು.

ಮೂರು ಪೊಲೀಸ್ ಅಧಿಕಾರಿಗಳ ತಂಡ ತನಿಖೆ ನಡೆಸಿದ್ದು, ಕಾರವಾರ ಡಿವೈಎಸ್ಪಿ ಗಿರೀಶ್ ಅವರ ನೇತೃತ್ವದಲ್ಲಿ ಆರೋಪಿ ಶಿಕ್ಷಕ ಅಬ್ಬು ತಲಹ್ ಅವರನ್ನು ಶನಿವಾರ ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದುಬಂದಿದೆ.

ಗೋಕುಲ ಕೃಷ್ಣ ಗೌಡ ಸಾವಿನ ಹಿಂದಿರುವ ನೈಜ ಕಾರಣ ಮತ್ತು ಘಟನೆಯ ಸಂಪೂರ್ಣ ಸತ್ಯಾಂಶವನ್ನು ಪತ್ತೆಹಚ್ಚಲು ಪೊಲೀಸರು ತನಿಖೆ ಮುಂದುವರಿಸಿದ್ದು, ಪ್ರಕರಣ ಇನ್ನಷ್ಟು ಮಹತ್ವ ಪಡೆದುಕೊಂಡಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

21 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

21 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

21 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

21 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

2 days ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

2 days ago