ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಇಬ್ಬರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಪ್ರಕರಣದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಪ್ರಾಂಶುಪಾಲರಾಗಿದ್ದ ಜಾವೇದ್ ಎಚ್.ಎಸ್. ಹಾಗೂ ಹಿಂದಿ ಶಿಕ್ಷಕ ಮತ್ತು ಪ್ರಭಾರಿ ನಿಲಯ ಪಾಲಕರಾಗಿದ್ದ ಅಬ್ಬುತಲಹ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ.
ಸುಮಾರು ಹದಿನೈದು ದಿನಗಳ ಹಿಂದೆ ವಸತಿ ಶಾಲೆಯ ವಿದ್ಯಾರ್ಥಿ ಗೋಕುಲ ಗೌಡ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಈ ಘಟನೆ ಜಿಲ್ಲೆಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ವಿದ್ಯಾರ್ಥಿಯ ಸಾವಿಗೆ ನ್ಯಾಯ ದೊರಕಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪಾಲಕರು ಮತ್ತು ಸಾರ್ವಜನಿಕರು ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ್ದರು.
ಈ ಸಂಬಂಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡಿಎಸ್ಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸಮಾಜ ಕಲ್ಯಾಣ ಇಲಾಖೆ ಇಬ್ಬರು ಸಿಬ್ಬಂದಿಗಳ ವಿರುದ್ಧ ಅಮಾನತು ಕ್ರಮ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ಇನ್ನೂ ಮುಂದುವರಿದಿದ್ದು, ತನಿಖಾ ವರದಿ ಆಧರಿಸಿ ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಅಮಾನತುಗೊಂಡ ಸಿಬ್ಬಂದಿಗಳ ಸ್ಥಾನಕ್ಕೆ ಪರ್ಯಾಯ ಸಿಬ್ಬಂದಿಯನ್ನು ನಿಯೋಜಿಸುವ ಪ್ರಕ್ರಿಯೆಯೂ ಶೀಘ್ರ ಆರಂಭವಾಗುವ ನಿರೀಕ್ಷೆಯಿದೆ. ಶಾಲೆಯ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಚಟುವಟಿಕೆಗಳಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…
ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳನ್ನು ಹೊಂದಿದ್ದ ಅಡಿಕೆ…
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದೆ. ಮದುವೆಗೆ ಇನ್ನೂ ಕೇವಲ 24 ಗಂಟೆಗಳಷ್ಟೇ…