Latest

ಲೋಕಾಯುಕ್ತ ಬಲೆಗೆ ಬಿದ್ದ ಕಾರವಾರದ ಜಿಲ್ಲಾ ಸರ್ಜನ್‌: ಭ್ರಷ್ಟಾಚಾರದ ಆರೋಪದ ಮೇಲೆ ಡಾ. ಶಿವಾನಂದ ಕುಡ್ತಳಕರ್ ಬಂಧನ

ಕಾರವಾರ, ಜುಲೈ 10: ಹೆಸರುತೊಂದಿದ ವೈದ್ಯಕೀಯ ಸೇವೆ, ಜನರ ಮನದಲ್ಲಿ ‘ಆಪತ್ಪಾಂಡವ’ ಎಂಬ ಪದದ ವ್ಯಾಖ್ಯಾನವೆನಿಸಿದ್ದವರು—ಅವರೇ ಈಗ ಭ್ರಷ್ಟಾಚಾರದ ಕಳ್ಳಬೇಟೆಯಲ್ಲಿ ಸಿಕ್ಕಿ ಬಿದ್ದಿದ್ದಾರೆ. ಕಾರವಾರದ ಜಿಲ್ಲಾ ಸರ್ಜನ್ ಹಾಗೂ ಪ್ರಸಿದ್ಧ ಸ್ತ್ರೀರೋಗ ತಜ್ಞ ಡಾ. ಶಿವಾನಂದ ಕುಡ್ತಳಕರ್ ಅವರನ್ನು ಲೋಕಾಯುಕ್ತ ಇಲಾಖೆ ಭ್ರಷ್ಟಾಚಾರದ ಪ್ರಕರಣದಲ್ಲಿ ಬಂಧಿಸಿದೆ.

ವರ್ಷಗಳ ಕಾಲ ಸರ್ಕಾರಿ ವೈದ್ಯರ ಹುದ್ದೆಯಲ್ಲಿದ್ದ ಡಾ. ಕುಡ್ತಳಕರ್ ಅವರ ಖಾಸಗಿ ಕ್ಲಿನಿಕ್‌ ಕೂಡ ಜನಪ್ರಿಯವಾಗಿತ್ತು. ಆದರೆ ಈ ಮಧ್ಯೆ, ಬಹುತೇಕ ಬಡರೋಗಿಗಳಿಗೂ ಅವರು ಸರ್ಕಾರಿ ಆಸ್ಪತ್ರೆಯಲ್ಲಿಯೇ ಹಣಕ್ಕಾಗಿ ಪೀಡಿಸುತ್ತಿದ್ದಾರೆ ಎಂಬ ಆರೋಪಗಳು ಇತ್ತಿಚೆಗೆ ಬಿಗಿಯಾಗುತ್ತ ಬಂದಿದ್ದವು.

2020ರಲ್ಲೇ ಗರ್ಭಿಣಿ ಗೀತಾ ಭಾನಾವಳಿ ಅವರ ಸಾವಿಗೆ ಸಂಬಂಧಿಸಿದಂತೆ ಕಾರವಾರದಲ್ಲಿ ಡಾ. ಕುಡ್ತಳಕರ್ ವಿರುದ್ಧ ಭಾರೀ ಪ್ರತಿಭಟನೆ ನಡೆದಿತ್ತು. ಸ್ಥಳೀಯರು ಅವರ ವರ್ಗಾವಣೆಗೂ ಒತ್ತಾಯಿಸಿ ಹೋರಾಟ ನಡೆಸಿದ್ದರು. ಅವರು ಕಾರವಾರದಿಂದ ಬೇರೊಂದು ಕಡೆಗೆ ವರ್ಗಾಯಿಸಲ್ಪಟ್ಟರೂ ಮತ್ತೆ ಇದೇ ಸ್ಥಳಕ್ಕೆ ಹಿಂತಿರುಗಿ, ಜಿಲ್ಲಾ ಸರ್ಜನ್ ಆಗಿ ಅಧಿಕಾರ ಮುಂದುವರಿಸಿದ್ದರು.

ಇತ್ತೀಚೆಗೆ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಹಾಸಿಗೆ ಹಾಗೂ ಇತರ ಸಾಮಗ್ರಿಗಳ ಪೂರೈಕೆಗೆ ಸಂಬಂಧಿಸಿದಂತೆ ಗುತ್ತಿಗೆದಾರ ಮೌಸೀನ್ ಶೇಖ್ ಎಂಬವರಿಂದ ಡಾ. ಕುಡ್ತಳಕರ್ 75 ಸಾವಿರ ರೂಪಾಯಿ ಲಂಚಕ್ಕೆ ಒತ್ತಡ ಹಾಕಿದ್ದಾರೆ ಎಂಬ ಮಾಹಿತಿ ಬಂದಿದೆ. ಮೊದಲ ಹಂತವಾಗಿ ಅವರು ಜುಲೈ 9ರ ರಾತ್ರಿ ₹20,000 ತೆಗೆದುಕೊಂಡಿದ್ದರೆ, ಜುಲೈ 10ರಂದು ಮತ್ತಷ್ಟು ಹಣಕ್ಕಾಗಿ ಒತ್ತಾಯಿಸುತ್ತಿದ್ದರು.

ಪದೇಪದೆ ಆಗುತ್ತಿರುವ ಲಂಚದ ಬೇಡಿಕೆಯಿಂದ ತೀಕ್ಷ್ಣಗೊಂಡ ಮೌಸೀನ್ ಶೇಖ್, ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಿದರು. ಅದಕ್ಕೆ ತಕ್ಷಣ ಸ್ಪಂದನೆ ನೀಡಿದ ಲೋಕಾಯುಕ್ತ ಡಿವೈಎಸ್ಪಿ ಧನ್ಯಾ ನಾಯಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಹಣ ಪಡೆಯುತ್ತಿದ್ದ ಕ್ಷಣದಲ್ಲಿ ಡಾ. ಕುಡ್ತಳಕರ್ ಅವರನ್ನು ಲೋಕುಾಯುಕ್ತ ಪೊಲೀಸರು ಬಲೆಗೆ ತೆಗೆದುಕೊಂಡರು.

ಪ್ರಭಾವಿ ವೈದ್ಯರಾದ ಡಾ. ಕುಡ್ತಳಕರ್ ಮೇಲೆ ನಡೆದ ಈ ದಾಳಿ ಭ್ರಷ್ಟ ವೈದ್ಯಕೀಯ ವ್ಯವಸ್ಥೆಯ ವಿರುದ್ಧ ಸಾರ್ವಜನಿಕರಲ್ಲಿ ಹೊಸ ಭರವಸೆಯ ಕಿರಣ ಹರಡಿದ್ದು, ಅಧಿಕಾರ ದುರುಪಯೋಗಿಸುವವರಿಗೆ ಇದು ಸ್ಪಷ್ಟ ಎಚ್ಚರಿಕೆ ಸಂಚಿಕೆಯಾಗಿದೆ.

nazeer ahamad

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

9 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

15 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

15 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago